‘ಘಟನೆ ಸಂಬಂಧ ಚಿಕ್ಕಮಗಳೂರು ಜಿಲ್ಲೆಯ ಸಕರಾಯನಪಟ್ಟಣ ಪಿಎಸ್ಐ ಮೌನೀಶ್ ಎಂಬುವರು ದೂರು ನೀಡಿದ್ದಾರೆ. ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಮತ್ತು ಆತ್ಮಹತ್ಯೆಗೆ ಯತ್ನಿಸಿದ ಆರೋಪದಡಿ ಕಾರ್ತಿಕ್ ಹಾಗೂ ಆತನ ಸಂಬಂಧಿಕರಾದ ಗಂಗರತ್ನಮ್ಮ, ನಟರಾಜ್, ರೇವಣಸಿದ್ದಪ್ಪ ಹಾಗೂ ನಾಗರಾಜು ಎಂಬುವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಯಲಹಂಕ ಉಪನಗರ ಠಾಣೆ ಪೊಲೀಸರು ಹೇಳಿದರು.