‘ಹಲವು ವರ್ಷಗಳ ಹಿಂದೆ ನಗರಕ್ಕೆ ಬಂದಿದ್ದ ವೆಂಕಟಪ್ಪ ಕುಟುಂಬ ಯಲಹಂಕ ಉಪನಗರದಲ್ಲಿ ವಾಸವಿತ್ತು. ವೆಂಕಟಪ್ಪ ರಿಯಲ್ ಎಸ್ಟೇಟ್ ವ್ಯವಹಾರ ಮಾಡುತ್ತಿದ್ದರು. ಮಗ ರವಿಕುಮಾರ್ ಸಹಾಯ ಮಾಡುತ್ತಿದ್ದರು. ಇನ್ನೊಬ್ಬ ಮಗ, ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಪರಿಚಯಸ್ಥರೊಬ್ಬರ ಬಳಿ ವೆಂಕಟಪ್ಪ ಲಕ್ಷಾಂತರ ರೂಪಾಯಿ ಪಡೆದಿದ್ದರು. ಅದನ್ನು ವಾಪಸು ಕೊಟ್ಟಿರಲಿಲ್ಲ. ಸಾಲ ತೀರಿಸಲು ಆಗದಿದ್ದರಿಂದ ಮನ ನೊಂದು, ಪತ್ನಿ ಹಾಗೂ ಮಗನ ಸಮೇತ ನೇಣಿಗೆ ಶರಣಾಗಿದ್ದಾರೆ’ ಎಂದೂ ಪೊಲೀಸರು ತಿಳಿಸಿದರು.