‘ಕ್ಷುಲ್ಲಕ ಕಾರಣಕ್ಕಾಗಿ ಮನೆಯಲ್ಲಿ ಜಗಳ ಮಾಡಿಕೊಂಡಿದ್ದ ಯುವತಿ, ಶನಿವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಜಾಲಹಳ್ಳಿಯ ಜೆ.ಪಿ.ಪಾರ್ಕ್ ಸಮೀಪದ ರೈಲ್ವೆ ಹಳಿ ಮೇಲೆ ನಿಂತಿದ್ದರು. ಅದನ್ನು ಗಮನಿಸಿದ ಸ್ಥಳೀಯರು, ಸಹಾಯವಾಣಿ 112ಕ್ಕೆ ಕರೆ ಮಾಡಿ ಪೊಲೀಸರಿಗೆ ವಿಷಯ ತಿಳಿಸಿದ್ದರು. ಹೊಯ್ಸಳ ಗಸ್ತು ವಾಹನದಲ್ಲಿದ್ದ ಭಾಗ್ಯಮ್ಮ ಹಾಗೂ ಮತ್ತೊಬ್ಬ ಸಿಬ್ಬಂದಿ, ಕೂಡಲೇ ಸ್ಥಳಕ್ಕೆ ಹೋಗಿ ಯುವತಿಯನ್ನು ರಕ್ಷಿಸಿದ್ದಾರೆ. ಪತಿ ಹಾಗೂ ಅವರ ಕುಟುಂಬದವರನ್ನು ಠಾಣೆಗೆ ಕರೆಸಿ, ಅವರ ಸಮ್ಮುಖದಲ್ಲೇ ಯುವತಿಗೆ ಬುದ್ದಿವಾದ ಹೇಳಿ ಕಳುಹಿಸಲಾಗಿದೆ’ ಎಂದೂ ಅವರು ವಿವರಿಸಿದರು.