‘ತಾಯಿ ಆತ್ಮಹತ್ಯೆಯಿಂದ ಮಾನಸಿಕವಾಗಿ ನೊಂದಿದ್ದ ಜೆಮಿನಿ, ಭರತ್ನಿಂದ ದೂರವಾಗಿದ್ದರು. ಅಷ್ಟಾದರೂ ಯುವತಿಯ ಹಿಂದೆ ಬಿದ್ದಿದ್ದ ಆರೋಪಿ ಭರತ್, ಕಿರುಕುಳ ನೀಡಲಾರಂಭಿಸಿದ್ದ. ‘ನನ್ನನ್ನು ಮದುವೆಯಾಗಬೇಕು. ಇಲ್ಲದಿದ್ದರೆ, ನಿನ್ನ ಜೊತೆಗೆ ತೆಗೆಸಿಕೊಂಡಿರುವ ಖಾಸಗಿ ಫೋಟೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುತ್ತೇನೆ’ ಎಂದೂ ಬ್ಲ್ಯಾಕ್ಮೇಲ್ ಮಾಡಲಾರಂಭಿಸಿದ್ದ’ ಎಂದೂ ಪೊಲೀಸರು ಹೇಳಿದರು.