<p><strong>ಬೆಂಗಳೂರು:</strong> ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್–ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರಿಗಿಂತ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಅವರು ಉತ್ತಮ ಆಯ್ಕೆ ಎಂದು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಪ್ರಕಾಶ್ ರಾಜ್ ಅಭಿಪ್ರಾಯಪಟ್ಟರು.</p>.<p>ಮಾಧ್ಯಮ ಸಂವಾದದಲ್ಲಿ ಗುರುವಾರ ಮಾತನಾಡಿದ ಅವರು, ‘ವಿಚಾರವಂತಿಕೆ, ಅನುಭವ ಸೇರಿದಂತೆ ಎಲ್ಲಾ ವಿಷಯಗಳಲ್ಲೂ ಸುಮಲತಾ ಉತ್ತಮ ಅಭ್ಯರ್ಥಿ. ಅರ್ಹತೆ ಇದ್ದರೆ ಕುಟುಂಬ ರಾಜಕಾರಣ ತಪ್ಪಲ್ಲ’ ಎಂದರು.</p>.<p>‘ವೈಯಕ್ತಿಕವಾಗಿ ನರೇಂದ್ರ ಮೋದಿ ಮೇಲೆ ನನಗೆ ದ್ವೇಷವಿಲ್ಲ. ಆದರೆ ಅವರ ವಿಚಾರಗಳು ಸರಿಯಿಲ್ಲ. ಹೀಗಾಗಿ ಅವರು ಮತ್ತೆ ಪ್ರಧಾನಿ ಆಗುವುದು ನನಗೆ ಇಷ್ಟವಿಲ್ಲ. ಹಿಂದೂ ಧರ್ಮದ ವಿರೋಧಿ ನಾನಲ್ಲ. ಧರ್ಮ ಆಧರಿತ ರಾಜಕಾರಣವನ್ನು ನಾನು ಮಾಡುವುದೂ ಇಲ್ಲ’ ಎಂದು ಹೇಳಿದರು.</p>.<p>‘ನನ್ನ ಸ್ಪರ್ಧೆ ಬಿಜೆಪಿಗೆ ಲಾಭ ಎಂಬ ಲೆಕ್ಕಾಚಾರವನ್ನು ಒಪ್ಪುವುದಿಲ್ಲ. ಪರ್ಯಾಯ ರಾಜಕಾರಣ ಬಯಸಿ ಸ್ಪರ್ಧಿಸಿದ್ದೇನೆ. ಹಣ ಕೊಟ್ಟು ಮತ ಪಡೆಯುವ ಉದ್ದೇಶ ನನಗಿಲ್ಲ’ ಎಂದರು.</p>.<p>‘ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ. ಗೆದ್ದರೆ ಕೆಲಸ ಮಾಡುತ್ತೇನೆ, ಗೆಲ್ಲದೇ ಇದ್ದರೂ ಸಾರ್ವಜನಿಕ ಜೀವನದಲ್ಲಿ ಇರುತ್ತೇನೆ. ನನಗೀಗ 55 ವರ್ಷ, ಇನ್ನೂ 15 ವರ್ಷ ರಾಜಕೀಯದಲ್ಲಿ ಇರುತ್ತೇನೆ’ ಎಂದು ತಿಳಿಸಿದರು.</p>.<p>‘ಮುಂದಿನ ದಿನಗಳಲ್ಲಿ ಚಿತ್ರರಂಗದಲ್ಲಿ ಸಂಪೂರ್ಣ ತೊಡಗಿಸಿಕೊಳ್ಳುವುದಿಲ್ಲ. ಈಗ ಪ್ರಬುದ್ಧನಾಗಿದ್ದೇನೆ. ಬಾಲಿಶವಾದ ಪಾತ್ರಗಳನ್ನು ಮಾಡಲು ಸಾಧ್ಯವಿಲ್ಲ. ಉತ್ತಮ ಅವಕಾಶಗಳು ಬಂದರೆ ಮಾತ್ರ ಒಪ್ಪಿಕೊಳ್ಳುತ್ತೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್–ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರಿಗಿಂತ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಅವರು ಉತ್ತಮ ಆಯ್ಕೆ ಎಂದು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಪ್ರಕಾಶ್ ರಾಜ್ ಅಭಿಪ್ರಾಯಪಟ್ಟರು.</p>.<p>ಮಾಧ್ಯಮ ಸಂವಾದದಲ್ಲಿ ಗುರುವಾರ ಮಾತನಾಡಿದ ಅವರು, ‘ವಿಚಾರವಂತಿಕೆ, ಅನುಭವ ಸೇರಿದಂತೆ ಎಲ್ಲಾ ವಿಷಯಗಳಲ್ಲೂ ಸುಮಲತಾ ಉತ್ತಮ ಅಭ್ಯರ್ಥಿ. ಅರ್ಹತೆ ಇದ್ದರೆ ಕುಟುಂಬ ರಾಜಕಾರಣ ತಪ್ಪಲ್ಲ’ ಎಂದರು.</p>.<p>‘ವೈಯಕ್ತಿಕವಾಗಿ ನರೇಂದ್ರ ಮೋದಿ ಮೇಲೆ ನನಗೆ ದ್ವೇಷವಿಲ್ಲ. ಆದರೆ ಅವರ ವಿಚಾರಗಳು ಸರಿಯಿಲ್ಲ. ಹೀಗಾಗಿ ಅವರು ಮತ್ತೆ ಪ್ರಧಾನಿ ಆಗುವುದು ನನಗೆ ಇಷ್ಟವಿಲ್ಲ. ಹಿಂದೂ ಧರ್ಮದ ವಿರೋಧಿ ನಾನಲ್ಲ. ಧರ್ಮ ಆಧರಿತ ರಾಜಕಾರಣವನ್ನು ನಾನು ಮಾಡುವುದೂ ಇಲ್ಲ’ ಎಂದು ಹೇಳಿದರು.</p>.<p>‘ನನ್ನ ಸ್ಪರ್ಧೆ ಬಿಜೆಪಿಗೆ ಲಾಭ ಎಂಬ ಲೆಕ್ಕಾಚಾರವನ್ನು ಒಪ್ಪುವುದಿಲ್ಲ. ಪರ್ಯಾಯ ರಾಜಕಾರಣ ಬಯಸಿ ಸ್ಪರ್ಧಿಸಿದ್ದೇನೆ. ಹಣ ಕೊಟ್ಟು ಮತ ಪಡೆಯುವ ಉದ್ದೇಶ ನನಗಿಲ್ಲ’ ಎಂದರು.</p>.<p>‘ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ. ಗೆದ್ದರೆ ಕೆಲಸ ಮಾಡುತ್ತೇನೆ, ಗೆಲ್ಲದೇ ಇದ್ದರೂ ಸಾರ್ವಜನಿಕ ಜೀವನದಲ್ಲಿ ಇರುತ್ತೇನೆ. ನನಗೀಗ 55 ವರ್ಷ, ಇನ್ನೂ 15 ವರ್ಷ ರಾಜಕೀಯದಲ್ಲಿ ಇರುತ್ತೇನೆ’ ಎಂದು ತಿಳಿಸಿದರು.</p>.<p>‘ಮುಂದಿನ ದಿನಗಳಲ್ಲಿ ಚಿತ್ರರಂಗದಲ್ಲಿ ಸಂಪೂರ್ಣ ತೊಡಗಿಸಿಕೊಳ್ಳುವುದಿಲ್ಲ. ಈಗ ಪ್ರಬುದ್ಧನಾಗಿದ್ದೇನೆ. ಬಾಲಿಶವಾದ ಪಾತ್ರಗಳನ್ನು ಮಾಡಲು ಸಾಧ್ಯವಿಲ್ಲ. ಉತ್ತಮ ಅವಕಾಶಗಳು ಬಂದರೆ ಮಾತ್ರ ಒಪ್ಪಿಕೊಳ್ಳುತ್ತೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>