ಸುಮ್ಮನಹಳ್ಳಿ ಚಿತಾಗಾರ ತಾತ್ಕಾಲಿಕ ಸ್ಥಗಿತ
ಬೆಂಗಳೂರು: ವಿನ್ಯಾಸ ಬದಲಿಸುವ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಸುಮ್ಮನಹಳ್ಳಿ ವಿದ್ಯುತ್ ಚಿತಾಗಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಲಾಗಿದೆ ಎಂದು ಬಿಬಿಎಂಪಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್ (ವಿದ್ಯುತ್) ರಮೇಶ್ ತಿಳಿಸಿದ್ದಾರೆ.
ಮೇ 15ರಿಂದ 28ರವರೆಗೆ ಕಾಮಗಾರಿ ನಿರ್ವಹಣೆಯಾಗಲಿದ್ದು, ಈ ಚಿತಾಗಾರಕ್ಕೆ ಮೃತದೇಹಗಳನ್ನು ತರದೆ ಸಮೀಪದ ಪೀಣ್ಯ, ಮೇಡಿ ಅಗ್ರಹಾರ ಅಥವಾ ಕೆಂಗೇರಿ ಚಿತಾಗಾರಕ್ಕೆ ಕೊಂಡೊಯ್ಯುವಂತೆ ಅವರು ಮನವಿ ಮಾಡಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.