‘ಹಾಸನ ಕ್ಷೇತ್ರದ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಡಾ.ಸೂರಜ್ ರೇವಣ್ಣ ಆಯ್ಕೆಯಾಗಿದ್ದು ಈ ಆಯ್ಕೆಯನ್ನು ಅಸಿಂಧು ಎಂದು ಘೋಷಿಸಬೇಕು’ ಎಂದು ಕೋರಿ ಹೊಳೆನರಸೀಪುರದ ಕಾಮಸಮುದ್ರದ ಎಲ್. ಹನುಮೇಗೌಡ ಸಲ್ಲಿಸಿರುವ ಈ ಚುನಾವಣಾ ತಕರಾರು ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.