<p><strong>ಬೆಂಗಳೂರು:</strong> ನಗರದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕೊರೊನಾ ವೈರಾಣು ಹರಡುವಿಕೆ ತಡೆಗಾಗಿ ರಾಜ್ಯದಾದ್ಯಂತ ಭಾನುವಾರ ಲಾಕ್ಡೌನ್ ಜಾರಿ ಮಾಡಲಾಗುತ್ತಿದ್ದು, ಬೆಂಗಳೂರಿನಲ್ಲಿ ನೆಲೆಸಿರುವ ಹಲವರು ಶನಿವಾರ ತಮ್ಮೂರಿನತ್ತ ಪ್ರಯಾಣ ಬೆಳೆಸಿದರು.</p>.<p>ಶನಿವಾರ ರಾತ್ರಿ 8 ಗಂಟೆಯಿಂದಲೇ ಲಾಕ್ಡೌನ್ ಶುರುವಾಗುವ ಮಾಹಿತಿ ಪಡೆದ ಜನ, ಕೆಎಸ್ಆರ್ಟಿಸಿ ಹಾಗೂ ಖಾಸಗಿ ವಾಹನಗಳಲ್ಲಿ ತಮ್ಮೂರಿನತ್ತ ಮುಖ ಮಾಡಿದರು.</p>.<p>ಕಾರು, ಆಟೊ, ಮ್ಯಾಕ್ಸಿ ಕ್ಯಾಬ್ಗಳಲ್ಲಿ ಮನೆ ಸಾಮಗ್ರಿ, ಪೀಠೋಪಕರಣಗಳನ್ನು ಇಟ್ಟುಕೊಂಡು ಜನರು ಹೊರಟಿದ್ದ ದೃಶ್ಯಗಳು ಕಂಡುಬಂದವು.</p>.<p>ಸಾವಿರಾರು ಸಂಖ್ಯೆಯಲ್ಲಿ ಜನರು ಊರಿನತ್ತ ಹೊರಟಿದ್ದರಿಂದ ತುಮಕೂರು ರಸ್ತೆ ಹಾಗೂ ಮೈಸೂರು ರಸ್ತೆಯಲ್ಲಿ ವಾಹನಗಳ ದಟ್ಟಣೆ ಉಂಟಾಯಿತು. ವಾಹನಗಳ ಸಂಚಾರವೂ ನಿಧಾನಗತಿಯಲ್ಲಿತ್ತು.</p>.<p>ತುಮಕೂರು ರಸ್ತೆಯ ನೆಲಮಂಗಲ ಟೋಲ್ಗೇಟ್ನಲ್ಲಿ ವಿಪರೀತ ಸಂಚಾರ ದಟ್ಟಣೆ ಇತ್ತು. ವಾಹನಗಳು ಸಾಲುಗಟ್ಟಿ ನಿಂತಿದ್ದವು.</p>.<p>ಯಶವಂತಪುರ, ಪೀಣ್ಯ, ಜಾಲಹಳ್ಳಿ ಹಾಗೂ ಸುತ್ತಮುತ್ತಲ ಸ್ಥಳಗಳಲ್ಲೂ ವಾಹನಗಳ ಸಂಖ್ಯೆ ಹೆಚ್ಚಿತ್ತು. ಬೈಕ್, ಕಾರು ಸೇರಿದಂತೆ ಹಲವು ವಾಹನಗಳು ನಿಧಾನವಾಗಿ ಚಲಿಸಿದ್ದರಿಂದ ದಟ್ಟಣೆಯೂ ಉಂಟಾಗಿತ್ತು. ಮೈಸೂರು ರಸ್ತೆಯಲ್ಲಿ ನಾಯಂಡನಹಳ್ಳಿ ಜಂಕ್ಷನ್ ಬಳಿಯೂ ವಾಹನಗಳ ದಟ್ಟಣೆ ಇತ್ತು.</p>.<p>ಪ್ರತಿ ಶನಿವಾರವೂ ಜನರು ತಮ್ಮೂರಿಗೆ ಹೋಗಿ ಭಾನುವಾರದ ರಜೆ ಕಳೆದು ಸೋಮವಾರ ಬೆಳಿಗ್ಗೆ ಪುನಃ ಬೆಂಗಳೂರಿಗೆ ಬರುತ್ತಿದ್ದರು. ಆದರೆ, ಕೊರೊನಾ ವೈರಾಣು ಹರಡುವಿಕೆ ಹೆಚ್ಚಾಗಿದ್ದರಿಂದ ಬೆಂಗಳೂರಿನಲ್ಲಿರುವ ಮನೆಯನ್ನು ಖಾಲಿ ಮಾಡಿಕೊಂಡು ತಮ್ಮೂರಿಗೆ ಹೊರಟಿರುವ ಜನರ ಸಂಖ್ಯೆಯೂ ಅಧಿಕವಾಗುತ್ತಿದೆ.</p>.<p><strong>'ಬೆಂಗಳೂರು ಸಹವಾಸ ಬೇಡ'</strong><br />‘ಕಾಲ್ ಸೆಂಟರ್ ಕೆಲಸಕ್ಕಾಗಿ ಬೆಂಗಳೂರಿಗೆ ಬಂದೆ. ಜನ ಇಲ್ಲಿ ರಸ್ತೆಯಲ್ಲೇ ಸಾಯುತ್ತಿದ್ದಾರೆ. ಬೆಂಗಳೂರು ಸಹವಾಸವೇ ಬೇಡವೆಂದು ಊರಿಗೆ ಮರಳುತ್ತಿದ್ದೇನೆ. ಕೃಷಿ ಮಾಡಿಕೊಂಡು ಹೇಗೋ ಜೀವನ ನಡೆಸುತ್ತೇನೆ’ ಎಂದು ಚಿಕ್ಕಮಗಳೂರಿನ ಯುವಕ ಹೇಳಿದರು.</p>.<p>ಗಾರ್ಮೆಂಟ್ಸ್ ಕಾರ್ಖಾನೆಯ ಕಾರ್ಮಿಕೆಯೊಬ್ಬರು, ‘ಕೆಲಸವಿಲ್ಲ. ಬಾಡಿಗೆ ಕೊಡುವುದಕ್ಕೂ ಹಣವಿಲ್ಲ. ಹಾಗಾಗಿ ಮನೆ ಖಾಲಿ ಮಾಡಿಕೊಂಡು ಊರಿಗೆ ಹೊರಟಿದ್ದೇನೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕೊರೊನಾ ವೈರಾಣು ಹರಡುವಿಕೆ ತಡೆಗಾಗಿ ರಾಜ್ಯದಾದ್ಯಂತ ಭಾನುವಾರ ಲಾಕ್ಡೌನ್ ಜಾರಿ ಮಾಡಲಾಗುತ್ತಿದ್ದು, ಬೆಂಗಳೂರಿನಲ್ಲಿ ನೆಲೆಸಿರುವ ಹಲವರು ಶನಿವಾರ ತಮ್ಮೂರಿನತ್ತ ಪ್ರಯಾಣ ಬೆಳೆಸಿದರು.</p>.<p>ಶನಿವಾರ ರಾತ್ರಿ 8 ಗಂಟೆಯಿಂದಲೇ ಲಾಕ್ಡೌನ್ ಶುರುವಾಗುವ ಮಾಹಿತಿ ಪಡೆದ ಜನ, ಕೆಎಸ್ಆರ್ಟಿಸಿ ಹಾಗೂ ಖಾಸಗಿ ವಾಹನಗಳಲ್ಲಿ ತಮ್ಮೂರಿನತ್ತ ಮುಖ ಮಾಡಿದರು.</p>.<p>ಕಾರು, ಆಟೊ, ಮ್ಯಾಕ್ಸಿ ಕ್ಯಾಬ್ಗಳಲ್ಲಿ ಮನೆ ಸಾಮಗ್ರಿ, ಪೀಠೋಪಕರಣಗಳನ್ನು ಇಟ್ಟುಕೊಂಡು ಜನರು ಹೊರಟಿದ್ದ ದೃಶ್ಯಗಳು ಕಂಡುಬಂದವು.</p>.<p>ಸಾವಿರಾರು ಸಂಖ್ಯೆಯಲ್ಲಿ ಜನರು ಊರಿನತ್ತ ಹೊರಟಿದ್ದರಿಂದ ತುಮಕೂರು ರಸ್ತೆ ಹಾಗೂ ಮೈಸೂರು ರಸ್ತೆಯಲ್ಲಿ ವಾಹನಗಳ ದಟ್ಟಣೆ ಉಂಟಾಯಿತು. ವಾಹನಗಳ ಸಂಚಾರವೂ ನಿಧಾನಗತಿಯಲ್ಲಿತ್ತು.</p>.<p>ತುಮಕೂರು ರಸ್ತೆಯ ನೆಲಮಂಗಲ ಟೋಲ್ಗೇಟ್ನಲ್ಲಿ ವಿಪರೀತ ಸಂಚಾರ ದಟ್ಟಣೆ ಇತ್ತು. ವಾಹನಗಳು ಸಾಲುಗಟ್ಟಿ ನಿಂತಿದ್ದವು.</p>.<p>ಯಶವಂತಪುರ, ಪೀಣ್ಯ, ಜಾಲಹಳ್ಳಿ ಹಾಗೂ ಸುತ್ತಮುತ್ತಲ ಸ್ಥಳಗಳಲ್ಲೂ ವಾಹನಗಳ ಸಂಖ್ಯೆ ಹೆಚ್ಚಿತ್ತು. ಬೈಕ್, ಕಾರು ಸೇರಿದಂತೆ ಹಲವು ವಾಹನಗಳು ನಿಧಾನವಾಗಿ ಚಲಿಸಿದ್ದರಿಂದ ದಟ್ಟಣೆಯೂ ಉಂಟಾಗಿತ್ತು. ಮೈಸೂರು ರಸ್ತೆಯಲ್ಲಿ ನಾಯಂಡನಹಳ್ಳಿ ಜಂಕ್ಷನ್ ಬಳಿಯೂ ವಾಹನಗಳ ದಟ್ಟಣೆ ಇತ್ತು.</p>.<p>ಪ್ರತಿ ಶನಿವಾರವೂ ಜನರು ತಮ್ಮೂರಿಗೆ ಹೋಗಿ ಭಾನುವಾರದ ರಜೆ ಕಳೆದು ಸೋಮವಾರ ಬೆಳಿಗ್ಗೆ ಪುನಃ ಬೆಂಗಳೂರಿಗೆ ಬರುತ್ತಿದ್ದರು. ಆದರೆ, ಕೊರೊನಾ ವೈರಾಣು ಹರಡುವಿಕೆ ಹೆಚ್ಚಾಗಿದ್ದರಿಂದ ಬೆಂಗಳೂರಿನಲ್ಲಿರುವ ಮನೆಯನ್ನು ಖಾಲಿ ಮಾಡಿಕೊಂಡು ತಮ್ಮೂರಿಗೆ ಹೊರಟಿರುವ ಜನರ ಸಂಖ್ಯೆಯೂ ಅಧಿಕವಾಗುತ್ತಿದೆ.</p>.<p><strong>'ಬೆಂಗಳೂರು ಸಹವಾಸ ಬೇಡ'</strong><br />‘ಕಾಲ್ ಸೆಂಟರ್ ಕೆಲಸಕ್ಕಾಗಿ ಬೆಂಗಳೂರಿಗೆ ಬಂದೆ. ಜನ ಇಲ್ಲಿ ರಸ್ತೆಯಲ್ಲೇ ಸಾಯುತ್ತಿದ್ದಾರೆ. ಬೆಂಗಳೂರು ಸಹವಾಸವೇ ಬೇಡವೆಂದು ಊರಿಗೆ ಮರಳುತ್ತಿದ್ದೇನೆ. ಕೃಷಿ ಮಾಡಿಕೊಂಡು ಹೇಗೋ ಜೀವನ ನಡೆಸುತ್ತೇನೆ’ ಎಂದು ಚಿಕ್ಕಮಗಳೂರಿನ ಯುವಕ ಹೇಳಿದರು.</p>.<p>ಗಾರ್ಮೆಂಟ್ಸ್ ಕಾರ್ಖಾನೆಯ ಕಾರ್ಮಿಕೆಯೊಬ್ಬರು, ‘ಕೆಲಸವಿಲ್ಲ. ಬಾಡಿಗೆ ಕೊಡುವುದಕ್ಕೂ ಹಣವಿಲ್ಲ. ಹಾಗಾಗಿ ಮನೆ ಖಾಲಿ ಮಾಡಿಕೊಂಡು ಊರಿಗೆ ಹೊರಟಿದ್ದೇನೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>