<p>ಬೆಂಗಳೂರು: ಭಾರತೀಯ ರಾಷ್ಟ್ರೀಯ ವಿಜ್ಞಾನ ಅಕಾಡೆಮಿಯ 2020ನೇ ಸಾಲಿನ ‘ಸುಂದರ್ ಲಾಲ್ ಹೋರಾ’ ಪ್ರಶಸ್ತಿಗೆ ಬೆಂಗಳೂರು ವಿಶ್ವವಿದ್ಯಾಲಯದ ಮಾಜಿ ಕುಲಪತಿ ಪ್ರೊ.ಎಚ್.ಎ. ರಂಗನಾಥ್ ಆಯ್ಕೆಯಾಗಿದ್ದಾರೆ.</p>.<p>ಪ್ರಶಸ್ತಿಯು ಪದಕ ಮತ್ತು ಪ್ರಮಾಣಪತ್ರವನ್ನು ಒಳಗೊಂಡಿದೆ. ಪ್ರೊ. ರಂಗನಾಥ್ ಅವರು ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿಯಾಗುವ ಮುನ್ನ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಣಿವಿಜ್ಞಾನದ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸಿದ್ದರು.</p>.<p>ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತೆ ಮಂಡಳಿಯ (ಎನ್ಎಎಸಿ) ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿದ ಹೆಗ್ಗಳಿಕೆಗೂ ಅವರು ಪಾತ್ರರಾಗಿದ್ದಾರೆ. ಈಗ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ ಸಂದರ್ಶಕ ಪ್ರಾಧ್ಯಾಪಕರಾಗಿದ್ದಾರೆ.</p>.<p>ವಂಶವಾಹಿ ಮತ್ತು ವಿಕಾಸದ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರತಿಷ್ಠಿತ ನಿಯತಕಾಲಿಕೆಗಳಲ್ಲಿ ಪ್ರೊ. ರಂಗನಾಥ್ ಅವರ ಹಲವಾರು ಲೇಖನಗಳು ಪ್ರಕಟವಾಗಿವೆ. ಪ್ರೊ. ರಂಗನಾಥ್ ಅವರು ಕೈಗೊಂಡ ಸಂಶೋಧನಾ ಯೋಜನೆಗಳಿಗೆ ಐಎನ್ಎಸ್ಎ, ಯುಜಿಸಿ, ಡಿಬಿಟಿ, ಡಿಎಸ್ಟಿ, ಡಿಎಫ್ಜಿ ಮತ್ತಿತರ ಸಂಸ್ಥೆಗಳು ಅನುದಾನ ನೀಡಿವೆ.</p>.<p>ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ (ಎಐಸಿಟಿಇ) ಸೇರಿದಂತೆ ಕೇಂದ್ರ ಸರ್ಕಾರದ ಹಲವು ಸಮಿತಿಗಳಲ್ಲೂ ಪ್ರೊ. ರಂಗನಾಥ್ ಅವರು ಕಾರ್ಯನಿರ್ವಹಿಸಿದ್ದಾರೆ. ವೆಂಕಟೇಶ್ವರ ವಿಶ್ವವಿದ್ಯಾಲಯವು ರಂಗನಾಥ್ ಅವರಿಗೆ ಗೌರವ ‘ಡಾಕ್ಟರ್ ಆಫ್ ಸೈನ್ಸ್’ ಪದವಿ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಭಾರತೀಯ ರಾಷ್ಟ್ರೀಯ ವಿಜ್ಞಾನ ಅಕಾಡೆಮಿಯ 2020ನೇ ಸಾಲಿನ ‘ಸುಂದರ್ ಲಾಲ್ ಹೋರಾ’ ಪ್ರಶಸ್ತಿಗೆ ಬೆಂಗಳೂರು ವಿಶ್ವವಿದ್ಯಾಲಯದ ಮಾಜಿ ಕುಲಪತಿ ಪ್ರೊ.ಎಚ್.ಎ. ರಂಗನಾಥ್ ಆಯ್ಕೆಯಾಗಿದ್ದಾರೆ.</p>.<p>ಪ್ರಶಸ್ತಿಯು ಪದಕ ಮತ್ತು ಪ್ರಮಾಣಪತ್ರವನ್ನು ಒಳಗೊಂಡಿದೆ. ಪ್ರೊ. ರಂಗನಾಥ್ ಅವರು ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿಯಾಗುವ ಮುನ್ನ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಣಿವಿಜ್ಞಾನದ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸಿದ್ದರು.</p>.<p>ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತೆ ಮಂಡಳಿಯ (ಎನ್ಎಎಸಿ) ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿದ ಹೆಗ್ಗಳಿಕೆಗೂ ಅವರು ಪಾತ್ರರಾಗಿದ್ದಾರೆ. ಈಗ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ ಸಂದರ್ಶಕ ಪ್ರಾಧ್ಯಾಪಕರಾಗಿದ್ದಾರೆ.</p>.<p>ವಂಶವಾಹಿ ಮತ್ತು ವಿಕಾಸದ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರತಿಷ್ಠಿತ ನಿಯತಕಾಲಿಕೆಗಳಲ್ಲಿ ಪ್ರೊ. ರಂಗನಾಥ್ ಅವರ ಹಲವಾರು ಲೇಖನಗಳು ಪ್ರಕಟವಾಗಿವೆ. ಪ್ರೊ. ರಂಗನಾಥ್ ಅವರು ಕೈಗೊಂಡ ಸಂಶೋಧನಾ ಯೋಜನೆಗಳಿಗೆ ಐಎನ್ಎಸ್ಎ, ಯುಜಿಸಿ, ಡಿಬಿಟಿ, ಡಿಎಸ್ಟಿ, ಡಿಎಫ್ಜಿ ಮತ್ತಿತರ ಸಂಸ್ಥೆಗಳು ಅನುದಾನ ನೀಡಿವೆ.</p>.<p>ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ (ಎಐಸಿಟಿಇ) ಸೇರಿದಂತೆ ಕೇಂದ್ರ ಸರ್ಕಾರದ ಹಲವು ಸಮಿತಿಗಳಲ್ಲೂ ಪ್ರೊ. ರಂಗನಾಥ್ ಅವರು ಕಾರ್ಯನಿರ್ವಹಿಸಿದ್ದಾರೆ. ವೆಂಕಟೇಶ್ವರ ವಿಶ್ವವಿದ್ಯಾಲಯವು ರಂಗನಾಥ್ ಅವರಿಗೆ ಗೌರವ ‘ಡಾಕ್ಟರ್ ಆಫ್ ಸೈನ್ಸ್’ ಪದವಿ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>