<p><strong>ಬೆಂಗಳೂರು</strong>: ಅಕ್ರಮ ಸಂಬಂಧದ ವಿಚಾರವಾಗಿ ವ್ಯಕ್ತಿಯ ಕೊಲೆಗೆ ಸುಪಾರಿ ನೀಡಿದ್ದ ಪ್ರಕರಣದಲ್ಲಿ ಆರು ಆರೋಪಿಗಳನ್ನು ಚಿಕ್ಕಜಾಲ ಪೊಲೀಸರು ಬಂಧಿಸಿದ್ದಾರೆ.</p>.<p>ಕೊಲೆಗೆ ಸುಪಾರಿ ನೀಡಿದ್ದ ಕೋಲಾರದ ಮಾಲೂರಿನ ಹೇಮಂತ್ ರೆಡ್ಡಿ(20), ಕೊಲೆಗೆ ಸಂಚು ರೂಪಿಸಿದ್ದ ಆರೋಪದ ಮೇಲೆ ಗಗನ್(19), ಬಾಲಾಜಿ(20) ಎಂಬುವರನ್ನು ಬಂಧಿಸಲಾಗಿದೆ. ಇನ್ನು ಮೂವರು ಅಪ್ರಾಪ್ತರನ್ನು ಬಾಲ ನ್ಯಾಯಮಂಡಳಿಗೆ ಎದುರು ಹಾಜರುಪಡಿಸಿ ಬಾಲಮಂದಿರಕ್ಕೆ ಬಿಡಲಾಗಿದೆ.</p>.<p>‘ಆರೋಪಿಗಳಿಂದ ಟಾಟಾ ಸುಮೊ ವಾಹನ ಹಾಗೂ ಮಾರಕಾಸ್ತ್ರಗಳನ್ನು ಜಪ್ತಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>‘ನಗರದ ಕಂಪನಿಯೊಂದರಲ್ಲಿ ವಿತರಕನಾಗಿ ಕೆಲಸ ಮಾಡುತ್ತಿದ್ದ ಮೈಸೂರಿನ ಕಿಶೋರ್ ಅವರ ಕೊಲೆಗೆ ₹3 ಲಕ್ಷಕ್ಕೆ ಸುಪಾರಿ ನೀಡಲಾಗಿತ್ತು’ ಎಂದು ಪೊಲೀಸರು ಹೇಳಿದರು.</p>.<p>‘ಏ.15ರಂದು ರಾತ್ರಿ 12 ಗಂಟೆಗೆ ಪಿಎಸ್ಐ ಶಿವಣ್ಣ ಅವರು ಗಸ್ತಿನಲ್ಲಿದ್ದರು. ಆಗ ಗಂಟಿಗಾನಹಳ್ಳಿ ಬಳಿಯ ಜಿಸಿಬಿಸಿ ಅಪಾರ್ಟ್ಮೆಂಟ್ ಬಳಿಯ ರಸ್ತೆ ಪಕ್ಕದ ಕತ್ತಲು ಪ್ರದೇಶದಲ್ಲಿ ಮಂಕಿ ಕ್ಯಾಪ್ ಧರಿಸಿದ್ದ ಐವರು ಅಪರಿಚಿತರು ಟಾಟಾ ಸುಮೊ ವಾಹನ ನಿಲ್ಲಿಸಿಕೊಂಡು ಕುಳಿತ್ತಿದ್ದರು. ಈ ವೇಳೆ ಅವರನ್ನು ಸುತ್ತುವರಿದು ವಶಕ್ಕೆ ಪಡೆದು ವಿಚಾರಣೆಗೆ ಮಾಡಿದಾಗ ಹಾರೋಹಳ್ಳಿಯ ಸಾಯಿಗ್ರೀನ್ ಪಾರ್ಕ್ ಲೇಔಟ್ ನಿವಾಸಿ ಕಿಶೋರ್ ಎಂಬಾತನ ಕೊಲೆಗೆ ಹೇಮಂತ್ ರೆಡ್ಡಿ ಎಂಬಾತ ಸುಪಾರಿ ನೀಡಿದ್ದ ಎಂದು ಒಪ್ಪಿಕೊಂಡಿದ್ದರು’ ಎಂದು ಪೊಲೀಸರು ಹೇಳಿದರು.</p>.<p>ಆರೋಪಿ ಹೇಮಂತ್ರೆಡ್ಡಿ ಅಕ್ಕ ಹಾಗೂ ಕಿಶೋರ್ ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಇಬ್ಬರ ನಡುವೆ ಸಲುಗೆ ಇತ್ತು ಎಂದು ಭಾವಿಸಿದ ಹೇಮಂತ್ರೆಡ್ಡಿ, ಕಿಶೋರ್ ಕೊಲೆಗೆ ಸಂಚು ರೂಪಿಸಿದ್ದ. ಈ ವಿಚಾರವನ್ನು ಗಗನ್ ಹಾಗೂ ಬಾಲಾಜಿಗೆ ತಿಳಿಸಿದ್ದ. ಆಗ ಸುಪಾರಿ ಮಾತುಕತೆ ನಡೆದಿತ್ತು ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಅಕ್ರಮ ಸಂಬಂಧದ ವಿಚಾರವಾಗಿ ವ್ಯಕ್ತಿಯ ಕೊಲೆಗೆ ಸುಪಾರಿ ನೀಡಿದ್ದ ಪ್ರಕರಣದಲ್ಲಿ ಆರು ಆರೋಪಿಗಳನ್ನು ಚಿಕ್ಕಜಾಲ ಪೊಲೀಸರು ಬಂಧಿಸಿದ್ದಾರೆ.</p>.<p>ಕೊಲೆಗೆ ಸುಪಾರಿ ನೀಡಿದ್ದ ಕೋಲಾರದ ಮಾಲೂರಿನ ಹೇಮಂತ್ ರೆಡ್ಡಿ(20), ಕೊಲೆಗೆ ಸಂಚು ರೂಪಿಸಿದ್ದ ಆರೋಪದ ಮೇಲೆ ಗಗನ್(19), ಬಾಲಾಜಿ(20) ಎಂಬುವರನ್ನು ಬಂಧಿಸಲಾಗಿದೆ. ಇನ್ನು ಮೂವರು ಅಪ್ರಾಪ್ತರನ್ನು ಬಾಲ ನ್ಯಾಯಮಂಡಳಿಗೆ ಎದುರು ಹಾಜರುಪಡಿಸಿ ಬಾಲಮಂದಿರಕ್ಕೆ ಬಿಡಲಾಗಿದೆ.</p>.<p>‘ಆರೋಪಿಗಳಿಂದ ಟಾಟಾ ಸುಮೊ ವಾಹನ ಹಾಗೂ ಮಾರಕಾಸ್ತ್ರಗಳನ್ನು ಜಪ್ತಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>‘ನಗರದ ಕಂಪನಿಯೊಂದರಲ್ಲಿ ವಿತರಕನಾಗಿ ಕೆಲಸ ಮಾಡುತ್ತಿದ್ದ ಮೈಸೂರಿನ ಕಿಶೋರ್ ಅವರ ಕೊಲೆಗೆ ₹3 ಲಕ್ಷಕ್ಕೆ ಸುಪಾರಿ ನೀಡಲಾಗಿತ್ತು’ ಎಂದು ಪೊಲೀಸರು ಹೇಳಿದರು.</p>.<p>‘ಏ.15ರಂದು ರಾತ್ರಿ 12 ಗಂಟೆಗೆ ಪಿಎಸ್ಐ ಶಿವಣ್ಣ ಅವರು ಗಸ್ತಿನಲ್ಲಿದ್ದರು. ಆಗ ಗಂಟಿಗಾನಹಳ್ಳಿ ಬಳಿಯ ಜಿಸಿಬಿಸಿ ಅಪಾರ್ಟ್ಮೆಂಟ್ ಬಳಿಯ ರಸ್ತೆ ಪಕ್ಕದ ಕತ್ತಲು ಪ್ರದೇಶದಲ್ಲಿ ಮಂಕಿ ಕ್ಯಾಪ್ ಧರಿಸಿದ್ದ ಐವರು ಅಪರಿಚಿತರು ಟಾಟಾ ಸುಮೊ ವಾಹನ ನಿಲ್ಲಿಸಿಕೊಂಡು ಕುಳಿತ್ತಿದ್ದರು. ಈ ವೇಳೆ ಅವರನ್ನು ಸುತ್ತುವರಿದು ವಶಕ್ಕೆ ಪಡೆದು ವಿಚಾರಣೆಗೆ ಮಾಡಿದಾಗ ಹಾರೋಹಳ್ಳಿಯ ಸಾಯಿಗ್ರೀನ್ ಪಾರ್ಕ್ ಲೇಔಟ್ ನಿವಾಸಿ ಕಿಶೋರ್ ಎಂಬಾತನ ಕೊಲೆಗೆ ಹೇಮಂತ್ ರೆಡ್ಡಿ ಎಂಬಾತ ಸುಪಾರಿ ನೀಡಿದ್ದ ಎಂದು ಒಪ್ಪಿಕೊಂಡಿದ್ದರು’ ಎಂದು ಪೊಲೀಸರು ಹೇಳಿದರು.</p>.<p>ಆರೋಪಿ ಹೇಮಂತ್ರೆಡ್ಡಿ ಅಕ್ಕ ಹಾಗೂ ಕಿಶೋರ್ ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಇಬ್ಬರ ನಡುವೆ ಸಲುಗೆ ಇತ್ತು ಎಂದು ಭಾವಿಸಿದ ಹೇಮಂತ್ರೆಡ್ಡಿ, ಕಿಶೋರ್ ಕೊಲೆಗೆ ಸಂಚು ರೂಪಿಸಿದ್ದ. ಈ ವಿಚಾರವನ್ನು ಗಗನ್ ಹಾಗೂ ಬಾಲಾಜಿಗೆ ತಿಳಿಸಿದ್ದ. ಆಗ ಸುಪಾರಿ ಮಾತುಕತೆ ನಡೆದಿತ್ತು ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>