ಡಿಜಿಟಲ್ ಎಕಾನಮಿ ಮಿಷನ್ ಅಧ್ಯಕ್ಷ ಬಿ.ವಿ.ನಾಯ್ಡು ಮಾತನಾಡಿ, ‘ಹೊಸ ಸಂಶೋಧನೆ, ತಂತ್ರಜ್ಞಾನ ಕ್ಷೇತ್ರದಲ್ಲಿ ರಾಜ್ಯವು ಜಾಗತಿಕ ಕೇಂದ್ರವಾಗಿಸಲು ಅವಿರತ ಪ್ರಯತ್ನ ಮುಂದುವರಿಸಲಾಗಿದೆ. ನೀತಿ ನಿರೂಪಕರು ಮತ್ತು ಉದ್ಯಮದ ನಡುವೆ ಸೇತುವೆ ನಿರ್ಮಿಸಲು ಪ್ರಯತ್ನಿ ಸುತ್ತಿದ್ದೇವೆ’ ಎಂದು ತಿಳಿಸಿದರು. ದೇಶದಲ್ಲೇ ಸ್ಟಾರ್ಟ್ ಅಪ್ ನೀತಿಯನ್ನು ಪರಿಚಯಿಸಿದ ಮೊದಲ ರಾಜ್ಯ ಕರ್ನಾಟಕ ಎಂದು ಬಣ್ಣಿಸಿದರು.