<p><strong>ಕೆಂಗೇರಿ</strong>: 'ಪ್ರಸಕ್ತವಿರುವ ಔದ್ಯಮಿಕ ನೀತಿಗಳು ಉದ್ಯಮ ಹಾಗೂ ಕಾರ್ಮಿಕರ ನಡುವಿನ ಕಂದಕವನ್ನು ಹೆಚ್ಚಿಸುತ್ತಿವೆ’ ಎಂದು ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿ ಅರವಿಂದ ಕುಮಾರ್ ಅಭಿಪ್ರಾಯಪಟ್ಟರು.</p>.<p>ಕೆಎಲ್ಇ ಕಾನೂನು ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಮತ್ತು ಸಾಂವಿಧಾನಿಕ ತತ್ವಶಾಸ್ತ್ರ ಹಾಗೂ ಬದಲಾಗುತ್ತಿರುವ ಕೈಗಾರಿಕಾ ಸಂಬಂಧಗಳು ಕುರಿತ ರಾಷ್ಟ್ರಮಟ್ಟದ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಬದಲಾಗುತ್ತಿರುವ ಆರ್ಥಿಕ ವ್ಯವಸ್ಥೆಯಡಿ ಕಾರ್ಯ ನಿರ್ವಹಿಸುವ ಉದ್ಯೋಗಿಗಳು ಕಾರ್ಮಿಕ ಕಾಯ್ದೆಗಳ ಅರಿವು ಹೊಂದಿರಬೇಕು. ಔದ್ಯೋಗಿಕ ಸಮಸ್ಯೆಗಳನ್ನು ಕಾನೂನಾತ್ಮಕವಾಗಿ ಬಗೆಹರಿಸಿಕೊಳ್ಳುವ ಜ್ಞಾನ ದಕ್ಕಿಸಿಕೊಳ್ಳಬೇಕು ಎಂದರು. ಇಂತಹ ಶೈಕ್ಷಣಿಕ ಸಮ್ಮೇಳನಗಳು ಕಾರ್ಮಿಕರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಯಶಸ್ವಿಯಾಗಲಿ ಎಂದು ಆಶಿಸಿದರು.</p>.<p>ಕರ್ನಾಟಕ ಕಾನೂನು ಮತ್ತು ಸಂಸದೀಯ ಸುಧಾರಣಾ ಸಂಸ್ಥೆ ಮುಖ್ಯಸ್ಥ ಪ್ರೊ ಸಿ.ಎಸ್.ಪಾಟೀಲ್ ಮಾತನಾಡಿ ‘ನವ-ಉದಾರೀಕರಣದ ಹಿಡಿತದಲ್ಲಿರುವ ಜಗತ್ತಿನಲ್ಲಿ ಕಾರ್ಮಿಕರ ಹಿತಾಸಕ್ತಿಗೆ ಮಾರಕವಾಗುವ ಹಲವಾರು ಬದಲಾವಣೆಗಳನ್ನು ಅನಿವಾರ್ಯವಾಗಿ ಒಪ್ಪಿಕೊಳ್ಳುತ್ತಿದ್ದೇವೆ. ಇವುಗಳಿಗೆ ಕಾನೂನಾತ್ಮಕ ಪರಿಹಾರಗಳನ್ನು ಕಂಡುಕೊಳ್ಳುವ ಅನಿವಾರ್ಯತೆಯಿದೆ‘ ಎಂದು ಹೇಳಿದರು. ಸಮ್ಮೇಳನದಲ್ಲಿ 25ಕ್ಕೂ ಹೆಚ್ಚು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಭಾಗವಹಿಸಿದ್ದರು. 80 ಸಂಶೋಧನಾ ಕೃತಿಗಳು ಮಂಡನೆಯಾದವು.</p>.<p>ಹಿರಿಯ ವಕೀಲರಾದ ಪ್ರಭುಲಿಂಗ ನಾವದಗಿ, ಅರುಣಾ ಶ್ಯಾಮ್, ಎಸ್.ಎನ್.ಮೂರ್ತಿ, ಪ್ರೊ.ಬಾಬು ಹಾಗೂ ಪ್ರಾಂಶುಪಾಲ ಪ್ರೊ. ಜೆ. ಎಂ.ಮಲ್ಲಿಕಾರ್ಜುನಯ್ಯ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಂಗೇರಿ</strong>: 'ಪ್ರಸಕ್ತವಿರುವ ಔದ್ಯಮಿಕ ನೀತಿಗಳು ಉದ್ಯಮ ಹಾಗೂ ಕಾರ್ಮಿಕರ ನಡುವಿನ ಕಂದಕವನ್ನು ಹೆಚ್ಚಿಸುತ್ತಿವೆ’ ಎಂದು ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿ ಅರವಿಂದ ಕುಮಾರ್ ಅಭಿಪ್ರಾಯಪಟ್ಟರು.</p>.<p>ಕೆಎಲ್ಇ ಕಾನೂನು ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಮತ್ತು ಸಾಂವಿಧಾನಿಕ ತತ್ವಶಾಸ್ತ್ರ ಹಾಗೂ ಬದಲಾಗುತ್ತಿರುವ ಕೈಗಾರಿಕಾ ಸಂಬಂಧಗಳು ಕುರಿತ ರಾಷ್ಟ್ರಮಟ್ಟದ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಬದಲಾಗುತ್ತಿರುವ ಆರ್ಥಿಕ ವ್ಯವಸ್ಥೆಯಡಿ ಕಾರ್ಯ ನಿರ್ವಹಿಸುವ ಉದ್ಯೋಗಿಗಳು ಕಾರ್ಮಿಕ ಕಾಯ್ದೆಗಳ ಅರಿವು ಹೊಂದಿರಬೇಕು. ಔದ್ಯೋಗಿಕ ಸಮಸ್ಯೆಗಳನ್ನು ಕಾನೂನಾತ್ಮಕವಾಗಿ ಬಗೆಹರಿಸಿಕೊಳ್ಳುವ ಜ್ಞಾನ ದಕ್ಕಿಸಿಕೊಳ್ಳಬೇಕು ಎಂದರು. ಇಂತಹ ಶೈಕ್ಷಣಿಕ ಸಮ್ಮೇಳನಗಳು ಕಾರ್ಮಿಕರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಯಶಸ್ವಿಯಾಗಲಿ ಎಂದು ಆಶಿಸಿದರು.</p>.<p>ಕರ್ನಾಟಕ ಕಾನೂನು ಮತ್ತು ಸಂಸದೀಯ ಸುಧಾರಣಾ ಸಂಸ್ಥೆ ಮುಖ್ಯಸ್ಥ ಪ್ರೊ ಸಿ.ಎಸ್.ಪಾಟೀಲ್ ಮಾತನಾಡಿ ‘ನವ-ಉದಾರೀಕರಣದ ಹಿಡಿತದಲ್ಲಿರುವ ಜಗತ್ತಿನಲ್ಲಿ ಕಾರ್ಮಿಕರ ಹಿತಾಸಕ್ತಿಗೆ ಮಾರಕವಾಗುವ ಹಲವಾರು ಬದಲಾವಣೆಗಳನ್ನು ಅನಿವಾರ್ಯವಾಗಿ ಒಪ್ಪಿಕೊಳ್ಳುತ್ತಿದ್ದೇವೆ. ಇವುಗಳಿಗೆ ಕಾನೂನಾತ್ಮಕ ಪರಿಹಾರಗಳನ್ನು ಕಂಡುಕೊಳ್ಳುವ ಅನಿವಾರ್ಯತೆಯಿದೆ‘ ಎಂದು ಹೇಳಿದರು. ಸಮ್ಮೇಳನದಲ್ಲಿ 25ಕ್ಕೂ ಹೆಚ್ಚು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಭಾಗವಹಿಸಿದ್ದರು. 80 ಸಂಶೋಧನಾ ಕೃತಿಗಳು ಮಂಡನೆಯಾದವು.</p>.<p>ಹಿರಿಯ ವಕೀಲರಾದ ಪ್ರಭುಲಿಂಗ ನಾವದಗಿ, ಅರುಣಾ ಶ್ಯಾಮ್, ಎಸ್.ಎನ್.ಮೂರ್ತಿ, ಪ್ರೊ.ಬಾಬು ಹಾಗೂ ಪ್ರಾಂಶುಪಾಲ ಪ್ರೊ. ಜೆ. ಎಂ.ಮಲ್ಲಿಕಾರ್ಜುನಯ್ಯ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>