<p><strong>ನವದೆಹಲಿ: </strong>ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಕಾಂಗ್ರೆಸ್ ಶಾಸಕ ಡಿ.ಕೆ. ಶಿವಕುಮಾರ್ ಭಾಗಿಯಾಗಿದ್ದಾರೆ ಎನ್ನಲಾದ ಬೆನ್ನಿಗಾನಹಳ್ಳಿ ಜಮೀನು ಅಕ್ರಮ ಡಿನೋಟಿಫೈ ಪ್ರಕರಣ ಕುರಿತಂತೆ ತನ್ನ ಪಾತ್ರವೇನು ಎಂಬ ಬಗ್ಗೆ ಹೇಳಿಕೆ ಸಲ್ಲಿಸುವಂತೆ ಸಮಾಜ ಪರಿವರ್ತನ ಸಮುದಾಯಕ್ಕೆ ಸುಪ್ರೀಂಕೋರ್ಟ್ ಮಂಗಳವಾರ ಸೂಚಿಸಿದೆ.</p>.<p>ಬೇರೆಯವರು ಸಲ್ಲಿಸಿರುವ ದೂರುಗಳನ್ನು ಆಧರಿಸಿ ಪ್ರಕರಣದ ಮರು ವಿಚಾರಣೆ ಕೋರಲಾಗದು ಎಂದು ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬಡೆ ನೇತೃತ್ವದ ತ್ರಿಸದಸ್ಯ ಪೀಠ ಅಭಿಪ್ರಾಯಪಟ್ಟಿತು.</p>.<p>‘ಸದರಿ ಪ್ರಕರಣದಲ್ಲಿ ನಿಮ್ಮ ಪಾತ್ರವೇನು ಎಂಬುದು ನಮಗೆ ಮನವರಿಕೆಯಾಗಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ನೀವು ಲೋಕಾಯುಕ್ತದಲ್ಲಿ ದೂರು ಸಲ್ಲಿಸಿದ್ದಲ್ಲಿ ಅದರ ಪ್ರತಿಯನ್ನೂ ಎರಡು ವಾರಗಳಲ್ಲಿ ಹೇಳಿಕೆಯ ಜೊತೆ ಲಗತ್ತಿಸಿ’ ಎಂದು ಅರ್ಜಿದಾರ ಎಸ್.ಆರ್. ಹಿರೇಮಠ ಪರ ವಕೀಲ ಪ್ರಶಾಂತ್ ಭೂಷಣ್ ಅವರಿಗೆ ಪೀಠ ಸೂಚಿಸಿತು.</p>.<p>ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಅಪರಾಧ ಪ್ರಕರಣದಲ್ಲಿ ಇಬ್ಬರು ಮುಖಂಡರು ಭಾಗಿಯಾಗಿದ್ದರಿಂದ ಅವರ ವಿರುದ್ಧ ಸಲ್ಲಿಸಿರುವ ಮೇಲ್ಮನವಿ ಆಧರಿಸಿ ವಿಚಾರಣೆ ನಡೆಸುವ ಮೂಲಕ ಕ್ರಮ ಕೈಗೊಳ್ಳಬೇಕು ಎಂದು ಪ್ರಶಾಂತ್ ಭೂಷಣ್ ಕೋರಿದರು.</p>.<p>ಅಪರಾಧ ಪ್ರಕರಣದ ವಿಚಾರಣೆಯ ವೇಳೆ ಅರ್ಜಿದಾರರು ಭಾಗಿಯಾಗಿರಲಿಲ್ಲ ಎಂದು ಆರೋಪಿಗಳ ಪರ ವಕೀಲರಾದ ಮುಕುಲ್ ರೋಹಟ್ಗಿ ಹಾಗೂ ಪಿ.ಎಸ್. ನರಸಿಂಹ ಅವರು ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಹಾಗೂ ಸೂರ್ಯಕಾಂತ್ ಅವರನ್ನು ಒಳಗೊಂಡಿರುವ ನ್ಯಾಯಪೀಠಕ್ಕೆ ವಿವರಿಸಿದರು.</p>.<p>ಬೆಂಗಳೂರಿನ ಕೆ.ಆರ್.ಪುರ ಹೋಬಳಿಯ ಬೆನ್ನಿಗಾನಹಳ್ಳಿ ಬಳಿ 4.20 ಎಕರೆ ಜಮೀನನ್ನು 2010ರಲ್ಲಿ ಅಕ್ರಮವಾಗಿ ಡಿನೋಟಿಫೈ ಮಾಡಲಾಗಿದೆ ಎಂಬ ಈ ಪ್ರಕರಣದಲ್ಲಿ ಇಬ್ಬರೂ ಮುಖಂಡರು ಸೇರಿದಂತೆ ಉಪ ನೋಂದಣಾಧಿಕಾರಿ ಆಗಿದ್ದ ಹಮೀದ್ ಅಲಿ ವಿರುದ್ಧ ಲೋಕಾಯುಕ್ತದಲ್ಲಿ ದಾಖಲಾಗಿದ್ದ ಎಫ್ಐಆರ್ ಅನ್ನು ರಾಜ್ಯ ಹೈಕೋರ್ಟ್ 2015ರಲ್ಲಿ ರದ್ದುಪಡಿಸಿತ್ತು.</p>.<p>ಈ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ರಾಮನಗರದ ಸಾಮಾಜಿಕ ಕಾರ್ಯಕರ್ತ ಕಬ್ಬಾಳೆಗೌಡ ಅವರು ಹಿಂದೆ ಪಡೆದಿದ್ದರಿಂದ ಕಳೆದ ಫೆಬ್ರುವರಿ 21ರಂದು ಸುಪ್ರೀಂ ಕೋರ್ಟ್ ಪ್ರಕರಣವನ್ನು ವಜಾಗೊಳಿಸಿತ್ತು. ಇದಕ್ಕೂ ಮುನ್ನ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಅವರೂ ತಮ್ಮ ಅರ್ಜಿ ಹಿಂದೆ ಪಡೆದಿದ್ದರು.</p>.<p>‘ಗಂಭೀರವಾದ ಈ ಅಪರಾಧ ಪ್ರಕರಣದ ವಿಚಾರಣೆ ಪುನರಾರಂಭಿಸಬೇಕು’ ಎಂದು ಕೋರಿ ಎಸ್.ಆರ್. ಹಿರೇಮಠ ಅವರು ಸುಪ್ರೀಂ ಕೋರ್ಟ್ನಲ್ಲಿ ಮಧ್ಯ ಪ್ರವೇಶ ಅರ್ಜಿ ಸಲ್ಲಿಸಿದ್ದರು. ನ್ಯಾಯಪೀಠದ ಸೂಚನೆಯ ಮೇರೆಗೆ ಹೊಸದಾಗಿ ಮೇಲ್ಮನವಿ ಸಲ್ಲಿಸಿದ್ದರಿಂದ ವಿಚಾರಣೆ ಕೈಗೆತ್ತಿಕೊಳ್ಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಕಾಂಗ್ರೆಸ್ ಶಾಸಕ ಡಿ.ಕೆ. ಶಿವಕುಮಾರ್ ಭಾಗಿಯಾಗಿದ್ದಾರೆ ಎನ್ನಲಾದ ಬೆನ್ನಿಗಾನಹಳ್ಳಿ ಜಮೀನು ಅಕ್ರಮ ಡಿನೋಟಿಫೈ ಪ್ರಕರಣ ಕುರಿತಂತೆ ತನ್ನ ಪಾತ್ರವೇನು ಎಂಬ ಬಗ್ಗೆ ಹೇಳಿಕೆ ಸಲ್ಲಿಸುವಂತೆ ಸಮಾಜ ಪರಿವರ್ತನ ಸಮುದಾಯಕ್ಕೆ ಸುಪ್ರೀಂಕೋರ್ಟ್ ಮಂಗಳವಾರ ಸೂಚಿಸಿದೆ.</p>.<p>ಬೇರೆಯವರು ಸಲ್ಲಿಸಿರುವ ದೂರುಗಳನ್ನು ಆಧರಿಸಿ ಪ್ರಕರಣದ ಮರು ವಿಚಾರಣೆ ಕೋರಲಾಗದು ಎಂದು ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬಡೆ ನೇತೃತ್ವದ ತ್ರಿಸದಸ್ಯ ಪೀಠ ಅಭಿಪ್ರಾಯಪಟ್ಟಿತು.</p>.<p>‘ಸದರಿ ಪ್ರಕರಣದಲ್ಲಿ ನಿಮ್ಮ ಪಾತ್ರವೇನು ಎಂಬುದು ನಮಗೆ ಮನವರಿಕೆಯಾಗಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ನೀವು ಲೋಕಾಯುಕ್ತದಲ್ಲಿ ದೂರು ಸಲ್ಲಿಸಿದ್ದಲ್ಲಿ ಅದರ ಪ್ರತಿಯನ್ನೂ ಎರಡು ವಾರಗಳಲ್ಲಿ ಹೇಳಿಕೆಯ ಜೊತೆ ಲಗತ್ತಿಸಿ’ ಎಂದು ಅರ್ಜಿದಾರ ಎಸ್.ಆರ್. ಹಿರೇಮಠ ಪರ ವಕೀಲ ಪ್ರಶಾಂತ್ ಭೂಷಣ್ ಅವರಿಗೆ ಪೀಠ ಸೂಚಿಸಿತು.</p>.<p>ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಅಪರಾಧ ಪ್ರಕರಣದಲ್ಲಿ ಇಬ್ಬರು ಮುಖಂಡರು ಭಾಗಿಯಾಗಿದ್ದರಿಂದ ಅವರ ವಿರುದ್ಧ ಸಲ್ಲಿಸಿರುವ ಮೇಲ್ಮನವಿ ಆಧರಿಸಿ ವಿಚಾರಣೆ ನಡೆಸುವ ಮೂಲಕ ಕ್ರಮ ಕೈಗೊಳ್ಳಬೇಕು ಎಂದು ಪ್ರಶಾಂತ್ ಭೂಷಣ್ ಕೋರಿದರು.</p>.<p>ಅಪರಾಧ ಪ್ರಕರಣದ ವಿಚಾರಣೆಯ ವೇಳೆ ಅರ್ಜಿದಾರರು ಭಾಗಿಯಾಗಿರಲಿಲ್ಲ ಎಂದು ಆರೋಪಿಗಳ ಪರ ವಕೀಲರಾದ ಮುಕುಲ್ ರೋಹಟ್ಗಿ ಹಾಗೂ ಪಿ.ಎಸ್. ನರಸಿಂಹ ಅವರು ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಹಾಗೂ ಸೂರ್ಯಕಾಂತ್ ಅವರನ್ನು ಒಳಗೊಂಡಿರುವ ನ್ಯಾಯಪೀಠಕ್ಕೆ ವಿವರಿಸಿದರು.</p>.<p>ಬೆಂಗಳೂರಿನ ಕೆ.ಆರ್.ಪುರ ಹೋಬಳಿಯ ಬೆನ್ನಿಗಾನಹಳ್ಳಿ ಬಳಿ 4.20 ಎಕರೆ ಜಮೀನನ್ನು 2010ರಲ್ಲಿ ಅಕ್ರಮವಾಗಿ ಡಿನೋಟಿಫೈ ಮಾಡಲಾಗಿದೆ ಎಂಬ ಈ ಪ್ರಕರಣದಲ್ಲಿ ಇಬ್ಬರೂ ಮುಖಂಡರು ಸೇರಿದಂತೆ ಉಪ ನೋಂದಣಾಧಿಕಾರಿ ಆಗಿದ್ದ ಹಮೀದ್ ಅಲಿ ವಿರುದ್ಧ ಲೋಕಾಯುಕ್ತದಲ್ಲಿ ದಾಖಲಾಗಿದ್ದ ಎಫ್ಐಆರ್ ಅನ್ನು ರಾಜ್ಯ ಹೈಕೋರ್ಟ್ 2015ರಲ್ಲಿ ರದ್ದುಪಡಿಸಿತ್ತು.</p>.<p>ಈ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ರಾಮನಗರದ ಸಾಮಾಜಿಕ ಕಾರ್ಯಕರ್ತ ಕಬ್ಬಾಳೆಗೌಡ ಅವರು ಹಿಂದೆ ಪಡೆದಿದ್ದರಿಂದ ಕಳೆದ ಫೆಬ್ರುವರಿ 21ರಂದು ಸುಪ್ರೀಂ ಕೋರ್ಟ್ ಪ್ರಕರಣವನ್ನು ವಜಾಗೊಳಿಸಿತ್ತು. ಇದಕ್ಕೂ ಮುನ್ನ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಅವರೂ ತಮ್ಮ ಅರ್ಜಿ ಹಿಂದೆ ಪಡೆದಿದ್ದರು.</p>.<p>‘ಗಂಭೀರವಾದ ಈ ಅಪರಾಧ ಪ್ರಕರಣದ ವಿಚಾರಣೆ ಪುನರಾರಂಭಿಸಬೇಕು’ ಎಂದು ಕೋರಿ ಎಸ್.ಆರ್. ಹಿರೇಮಠ ಅವರು ಸುಪ್ರೀಂ ಕೋರ್ಟ್ನಲ್ಲಿ ಮಧ್ಯ ಪ್ರವೇಶ ಅರ್ಜಿ ಸಲ್ಲಿಸಿದ್ದರು. ನ್ಯಾಯಪೀಠದ ಸೂಚನೆಯ ಮೇರೆಗೆ ಹೊಸದಾಗಿ ಮೇಲ್ಮನವಿ ಸಲ್ಲಿಸಿದ್ದರಿಂದ ವಿಚಾರಣೆ ಕೈಗೆತ್ತಿಕೊಳ್ಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>