<p><strong>ಬೆಂಗಳೂರು</strong>: ವಿಧಾನಸಭೆ ಚರ್ಚೆ ವೇಳೆ ಶಾಸಕರು ಮತ್ತು ಅವರ ಕುಟುಂಬದವರಿಗೆ ಐಪಿಎಲ್ನ ಐದು ವಿಐಪಿ ಟಿಕೆಟ್ ಉಚಿತ ಕೊಡಬೇಕು ಎಂದು ಬೇಡಿಕೆ ಇತ್ತು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿರುವ ಕಾಂಗ್ರೆಸ್ ಶಾಸಕರನ್ನು ಬಿಜೆಪಿ ಹಿರಿಯ ಶಾಸಕ ಸುರೇಶ್ ಕುಮಾರ್ ಅವರು ತಮ್ಮ ಹರಿತ ಮಾತುಗಳಿಂದ ತಿವಿದಿದ್ದಾರೆ.</p><p>ಟಿಕೆಟ್ಗೆ ಬೇಡಿಕೆ ಇತ್ತ ಶಾಸಕರ ನಡೆ ಕುರಿತು ತೀವ್ರ ಬೇಸರ ಹಾಗೂ ತಿರಸ್ಕಾರ ವ್ಯಕ್ತಪಡಿಸಿ ತಮ್ಮ ಫೇಸ್ಬುಕ್ನಲ್ಲಿ ಬರೆದುಕೊಂಡಿರುವ ಅವರು, ಟಿಕೆಟ್ ಕೇಳುವವರು ಸಮಾಜವಾದಿ ಎನಿಸಿಕೊಂಡ ಸಿದ್ದರಾಮಯ್ಯನವರ ಸಂಗಡಿಗರು ಎಂದು ಸಿಎಂ ಅವರ ಕಾಲೆಳೆದಿದ್ದಾರೆ.</p><p>ಸುರೇಶ್ ಕುಮಾರ್ ಅವರ ಪೋಸ್ಟ್ನಲ್ಲಿ ಏನಿದೆ?</p><p>ರಾಜ್ಯದಲ್ಲಿ ತಾವು "ಸಮಾಜವಾದಿ" ಎಂದು ಎಲ್ಲೆಡೆ ಹೇಳಿಕೊಳ್ಳುವ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರವಿದೆ.</p><p>ಈ ಸಮಾಜವಾದಿ ಎಂಬ ಸ್ವಯಂ ಘೋಷಿತ ಮುಖ್ಯಮಂತ್ರಿಯ ಆಡಳಿತದಲ್ಲೂ ವಿಐಪಿ ಸಂಸ್ಕೃತಿ ಮುಂದುವರಿಯುತ್ತಿರುವುದು ನಿಜಕ್ಕೂ ಅಚ್ಚರ</p><p>ಓ ಮರೆತಿದ್ದೆ! ಇದೇ ಸಮಾಜವಾದಿ ಮುಖ್ಯಮಂತ್ರಿ ಕಳೆದ ವರ್ಷ ಐಪಿಎಲ್ನಲ್ಲಿ ಆರ್.ಸಿ.ಬಿ ಗೆದ್ದಾಗ, ವಿಧಾನಸೌಧದ ಮುಂದೆ ನಿರ್ಮಿಸಲಾಗಿದ್ದ ವಿಜಯೋತ್ಸವದ ವೇದಿಕೆಗೆ ತಮ್ಮ ಮೊಮ್ಮಗನನ್ನು ಕರೆದುಕೊಂಡು ಹೋಗಿದ್ದ ದೃಶ್ಯವನ್ನು ನಾವೆಲ್ಲರೂ ಕಂಡಿದ್ದೇವೆ.</p><p>ಮೊನ್ನೆ ವಿಧಾನಸಭೆಯಲ್ಲಿ ಗ್ರೇಟರ್ ಬೆಂಗಳೂರು ಅಥಾರಿಟಿ (GBA) ವ್ಯಾಪ್ತಿಯಲ್ಲಿ ಜನಸಾಮಾನ್ಯರು ಅನುಭವಿಸುತ್ತಿರುವ ವಿವಿಧ ಸಮಸ್ಯೆಗಳ ಬಗ್ಗೆ ಚರ್ಚೆ ನಡೆದ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿಗಳು ಉತ್ತರಿಸುತ್ತಿದ್ದರು.</p><p>ಆ ಸಮಯದಲ್ಲಿ ಇದ್ದಕ್ಕಿದ್ದಂತೆ ಚಿನ್ನಸ್ವಾಮಿ ಸ್ಟೇಡಿಯಂ, ಐಪಿಎಲ್ ಪಂದ್ಯ, ಶಾಸಕರುಗಳಿಗೆ ಟಿಕೆಟ್ ಕೊಡುತ್ತಿಲ್ಲ ಹಾಗೂ ಶಾಸಕರಿಗೆ ಮರ್ಯಾದೆ ಸಿಗುತ್ತಿಲ್ಲ ಎಂಬ ಚರ್ಚೆ ಪಕ್ಷಾತೀತವಾಗಿ ಪ್ರಾರಂಭವಾಯಿತು. </p><p>ನಾನು ಆಗಲೇ ಮಧ್ಯಪ್ರವೇಶಿಸಿ ಮಾತನಾಡಬೇಕೆಂದಿದ್ದೆ. ಆದರೆ ನಡೆಯುತ್ತಿದ್ದ ಆ ವಿಚಿತ್ರ ವಿದ್ಯಮಾನಕ್ಕೆ ಸ್ವತಃ ಸಭಾಧ್ಯಕ್ಷರೇ ದನಿಗೂಡಿಸಿದ್ದು ನನಗೆ ಆಶ್ಚರ್ಯವನ್ನುಂಟುಮಾಡಿ, ನನ್ನನ್ನು ನಾನೇ ನಿಯಂತ್ರಿಸಿಕೊಂಡೆ.</p><p>ಸದನ ಮುಗಿದ ಮೇಲೆ ಎಲ್ಲಿ ಹೋದರೂ ಕೇಳಿ ಬರುತ್ತಿರುವ ಪ್ರಶ್ನೆಯೆಂದರೆ, ಸರ್, ವಿಧಾನಸಭೆಯಲ್ಲಿ ಜನಸಾಮಾನ್ಯರ ಸಮಸ್ಯೆಗಳ ಬಗ್ಗೆ ಮಾತನಾಡುತ್ತೀರೋ ಅಥವಾ ನಿಮಗೆ ಬೇಕಾದ ಸೌಲಭ್ಯ, ಸವಲತ್ತು, ಸ್ಥಾನಮಾನ, ಗೌರವಗಳ ಕುರಿತು ಮಾತನಾಡುತ್ತೀರೋ? ಎಂದು.</p><p>ಒಂದು ವರ್ಷದ ಹಿಂದೆ ಇದೇ ವಿಧಾನಸಭೆಯಲ್ಲಿ, ಐಪಿಎಲ್ ಪಂದ್ಯದಲ್ಲಿ ಆರ್.ಸಿ.ಬಿ ಗೆದ್ದಾಗ, ಸರ್ಕಾರದ ಅವಿವೇಕತನದಿಂದ ಅಥವಾ ಅತ್ಯುತ್ಸಾಹದಿಂದ, ಆರ್.ಸಿ.ಬಿ ಗೆಲುವನ್ನು ತಮ್ಮ ರಾಜಕೀಯಕ್ಕೆ ಉಪಯೋಗಿಸಿಕೊಳ್ಳುವ ಹಪಾಹಪಿತನದಿಂದ 11 ಜನ ಮೃತಪಟ್ಟ ಬಗ್ಗೆ ತುಂಬಾ ಚರ್ಚೆ ನಡೆದಿತ್ತು. </p><p>ಬಹಳಷ್ಟು ಜನ ಆಕ್ರೋಶ ವ್ಯಕ್ತಪಡಿಸಿದ್ದರು, ನೋವು ಅನುಭವಿಸಿದ್ದರು ಹಾಗೂ ಆ ನೋವನ್ನು ತೋಡಿಕೊಂಡಿದ್ದರು.</p><p>ಆದರೆ, ಇವತ್ತು ಅದೇ ವಿಧಾನಸೌಧದಲ್ಲಿ, ಅದೇ ಐಪಿಎಲ್ ಪಂದ್ಯದ ಟಿಕೆಟ್ ಬಗ್ಗೆ ಬಹಳ ಆಕ್ರೋಶದಿಂದ ಚರ್ಚೆ ನಡೆಸಿ, “ನಮಗೆ ಮರ್ಯಾದೆ ಸಿಗಲೇಬೇಕು” ಎಂದು ಹೇಳುತ್ತಿರುವುದು ಜನಸಾಮಾನ್ಯರಲ್ಲಿ ರಾಜಕಾರಣಿಗಳ ಬಗೆಗಿನ ತಿರಸ್ಕಾರವನ್ನು ಇನ್ನಷ್ಟು ಹೆಚ್ಚಿಸುವಂತೆ ಮಾಡಿದೆ.</p><p>ನಾವೆಲ್ಲರೂ ವೇದಿಕೆಯ ಮೇಲೆ ನಮ್ಮನ್ನು “ಜನಸೇವಕರು” ಎಂದು ಕರೆದುಕೊಳ್ಳುತ್ತೇವೆ. ಇಂತಹ ಹಿನ್ನೆಲೆಯಲ್ಲಿ ಈ ವಿಐಪಿ ಸಂಸ್ಕೃತಿಗೆ ಇಂದು ಪುರಸ್ಕಾರ ಸಿಗುತ್ತಿರುವುದು ಆಶ್ಚರ್ಯವನ್ನುಂಟು ಮಾಡುತ್ತಿದೆ.</p><p>ನಾನು ಇವತ್ತು ಮಾಧ್ಯಮಗಳ ಮೂಲಕ, ಸದ್ಯದಲ್ಲೇ ನಡೆಯಲಿರುವ ಐಪಿಎಲ್ ಪಂದ್ಯಕ್ಕೆ ಪ್ರತಿಯೊಬ್ಬ ಶಾಸಕರಿಗೆ ತಲಾ ಎರಡು ಟಿಕೆಟ್ ಹಾಗೂ ಮುಂದಿನ ದಿನಗಳಲ್ಲಿ ಐದು ಟಿಕೆಟ್ ಕೊಡುವ ಸುದ್ಧಿ ಓದಿ ತಿಳಿದೆ.</p><p>ಇದು ಖಂಡಿತಾ ಸರಿಯಾದ ನಿರ್ಧಾರವಲ್ಲ. ವಿಧಾನಸಭೆಯಲ್ಲಿ ಈ ಚರ್ಚೆ ನಡೆದ ಕೇವಲ 24 ಗಂಟೆಯಲ್ಲೇ ಸರ್ಕಾರ ಈ ರೀತಿ ಘೋಷಣೆ ಮಾಡಲು ಉತ್ಸುಕತೆ ತೋರಿರುವುದು ನನಗೂ ಆಶ್ಚರ್ಯ ತಂದಿದೆ. </p><p>ನಮ್ಮ ಅದೆಷ್ಟೋ ಪ್ರಶ್ನೆಗಳಿಗೆ ವರ್ಷಾನುಗಟ್ಟಲೆ ಫಲಿತಾಂಶ ಸಿಕ್ಕಿರುವುದಿಲ್ಲ. ಆದರೆ, ಶಾಸಕರ ವಿಷಯ ಬಂದ ತಕ್ಷಣ ಇಷ್ಟು ಬೇಗ ಕೆಲಸ ಮಾಡಿಬಿಟ್ಟರು ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ.</p><p>ಈ ಹಿನ್ನೆಲೆಯಲ್ಲಿ, ಮಾಧ್ಯಮಗಳ ಮೂಲಕ ಶಾಸಕರಿಗೆ ಟಿಕೆಟ್ ಕೊಡುತ್ತಾರೆ ಎಂದು ನಾನು ಏನು ತಿಳಿದುಕೊಂಡಿದ್ದೇನೋ, ಆ ಪಾಸ್ಗಳನ್ನು ಅಥವಾ ಆ ಟಿಕೆಟ್ಗಳನ್ನು ಸವಿನಯವಾಗಿ ನಿರಾಕರಿಸುತ್ತೇನೆ. </p><p>ಸ್ಪಷ್ಟ ಮಾತುಗಳಲ್ಲಿ ಹೇಳುವುದಾದರೆ, ದಯವಿಟ್ಟು ನನಗೆ ಆ ಟಿಕೆಟ್ಗಳು ಖಂಡಿತ ಬೇಡ. ಈ ರೀತಿ ವಿಐಪಿ ಸಂಸ್ಕೃತಿಯನ್ನು ಮುಂದುವರೆಸಿದಷ್ಟು, ರಾಜಕಾರಣಿಗಳಾದ ನಾವು ಜನಸಾಮಾನ್ಯರ ದೃಷ್ಟಿಯಲ್ಲಿ ಇನ್ನಷ್ಟು ಕನಿಷ್ಠರಾಗುತ್ತಾ ಹೋಗುತ್ತೇವೆ ಎಂಬುದನ್ನು ನಾವೆಲ್ಲರೂ ಜ್ಞಾಪಕದಲ್ಲಿಟ್ಟುಕೊಳ್ಳಬೇಕು ಎಂದು ಕಾಂಗ್ರೆಸ್ ಸರ್ಕಾರವನ್ನು ಎಚ್ಚರಿಸಿದ್ದಾರೆ.</p><p>–––</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ವಿಧಾನಸಭೆ ಚರ್ಚೆ ವೇಳೆ ಶಾಸಕರು ಮತ್ತು ಅವರ ಕುಟುಂಬದವರಿಗೆ ಐಪಿಎಲ್ನ ಐದು ವಿಐಪಿ ಟಿಕೆಟ್ ಉಚಿತ ಕೊಡಬೇಕು ಎಂದು ಬೇಡಿಕೆ ಇತ್ತು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿರುವ ಕಾಂಗ್ರೆಸ್ ಶಾಸಕರನ್ನು ಬಿಜೆಪಿ ಹಿರಿಯ ಶಾಸಕ ಸುರೇಶ್ ಕುಮಾರ್ ಅವರು ತಮ್ಮ ಹರಿತ ಮಾತುಗಳಿಂದ ತಿವಿದಿದ್ದಾರೆ.</p><p>ಟಿಕೆಟ್ಗೆ ಬೇಡಿಕೆ ಇತ್ತ ಶಾಸಕರ ನಡೆ ಕುರಿತು ತೀವ್ರ ಬೇಸರ ಹಾಗೂ ತಿರಸ್ಕಾರ ವ್ಯಕ್ತಪಡಿಸಿ ತಮ್ಮ ಫೇಸ್ಬುಕ್ನಲ್ಲಿ ಬರೆದುಕೊಂಡಿರುವ ಅವರು, ಟಿಕೆಟ್ ಕೇಳುವವರು ಸಮಾಜವಾದಿ ಎನಿಸಿಕೊಂಡ ಸಿದ್ದರಾಮಯ್ಯನವರ ಸಂಗಡಿಗರು ಎಂದು ಸಿಎಂ ಅವರ ಕಾಲೆಳೆದಿದ್ದಾರೆ.</p><p>ಸುರೇಶ್ ಕುಮಾರ್ ಅವರ ಪೋಸ್ಟ್ನಲ್ಲಿ ಏನಿದೆ?</p><p>ರಾಜ್ಯದಲ್ಲಿ ತಾವು "ಸಮಾಜವಾದಿ" ಎಂದು ಎಲ್ಲೆಡೆ ಹೇಳಿಕೊಳ್ಳುವ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರವಿದೆ.</p><p>ಈ ಸಮಾಜವಾದಿ ಎಂಬ ಸ್ವಯಂ ಘೋಷಿತ ಮುಖ್ಯಮಂತ್ರಿಯ ಆಡಳಿತದಲ್ಲೂ ವಿಐಪಿ ಸಂಸ್ಕೃತಿ ಮುಂದುವರಿಯುತ್ತಿರುವುದು ನಿಜಕ್ಕೂ ಅಚ್ಚರ</p><p>ಓ ಮರೆತಿದ್ದೆ! ಇದೇ ಸಮಾಜವಾದಿ ಮುಖ್ಯಮಂತ್ರಿ ಕಳೆದ ವರ್ಷ ಐಪಿಎಲ್ನಲ್ಲಿ ಆರ್.ಸಿ.ಬಿ ಗೆದ್ದಾಗ, ವಿಧಾನಸೌಧದ ಮುಂದೆ ನಿರ್ಮಿಸಲಾಗಿದ್ದ ವಿಜಯೋತ್ಸವದ ವೇದಿಕೆಗೆ ತಮ್ಮ ಮೊಮ್ಮಗನನ್ನು ಕರೆದುಕೊಂಡು ಹೋಗಿದ್ದ ದೃಶ್ಯವನ್ನು ನಾವೆಲ್ಲರೂ ಕಂಡಿದ್ದೇವೆ.</p><p>ಮೊನ್ನೆ ವಿಧಾನಸಭೆಯಲ್ಲಿ ಗ್ರೇಟರ್ ಬೆಂಗಳೂರು ಅಥಾರಿಟಿ (GBA) ವ್ಯಾಪ್ತಿಯಲ್ಲಿ ಜನಸಾಮಾನ್ಯರು ಅನುಭವಿಸುತ್ತಿರುವ ವಿವಿಧ ಸಮಸ್ಯೆಗಳ ಬಗ್ಗೆ ಚರ್ಚೆ ನಡೆದ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿಗಳು ಉತ್ತರಿಸುತ್ತಿದ್ದರು.</p><p>ಆ ಸಮಯದಲ್ಲಿ ಇದ್ದಕ್ಕಿದ್ದಂತೆ ಚಿನ್ನಸ್ವಾಮಿ ಸ್ಟೇಡಿಯಂ, ಐಪಿಎಲ್ ಪಂದ್ಯ, ಶಾಸಕರುಗಳಿಗೆ ಟಿಕೆಟ್ ಕೊಡುತ್ತಿಲ್ಲ ಹಾಗೂ ಶಾಸಕರಿಗೆ ಮರ್ಯಾದೆ ಸಿಗುತ್ತಿಲ್ಲ ಎಂಬ ಚರ್ಚೆ ಪಕ್ಷಾತೀತವಾಗಿ ಪ್ರಾರಂಭವಾಯಿತು. </p><p>ನಾನು ಆಗಲೇ ಮಧ್ಯಪ್ರವೇಶಿಸಿ ಮಾತನಾಡಬೇಕೆಂದಿದ್ದೆ. ಆದರೆ ನಡೆಯುತ್ತಿದ್ದ ಆ ವಿಚಿತ್ರ ವಿದ್ಯಮಾನಕ್ಕೆ ಸ್ವತಃ ಸಭಾಧ್ಯಕ್ಷರೇ ದನಿಗೂಡಿಸಿದ್ದು ನನಗೆ ಆಶ್ಚರ್ಯವನ್ನುಂಟುಮಾಡಿ, ನನ್ನನ್ನು ನಾನೇ ನಿಯಂತ್ರಿಸಿಕೊಂಡೆ.</p><p>ಸದನ ಮುಗಿದ ಮೇಲೆ ಎಲ್ಲಿ ಹೋದರೂ ಕೇಳಿ ಬರುತ್ತಿರುವ ಪ್ರಶ್ನೆಯೆಂದರೆ, ಸರ್, ವಿಧಾನಸಭೆಯಲ್ಲಿ ಜನಸಾಮಾನ್ಯರ ಸಮಸ್ಯೆಗಳ ಬಗ್ಗೆ ಮಾತನಾಡುತ್ತೀರೋ ಅಥವಾ ನಿಮಗೆ ಬೇಕಾದ ಸೌಲಭ್ಯ, ಸವಲತ್ತು, ಸ್ಥಾನಮಾನ, ಗೌರವಗಳ ಕುರಿತು ಮಾತನಾಡುತ್ತೀರೋ? ಎಂದು.</p><p>ಒಂದು ವರ್ಷದ ಹಿಂದೆ ಇದೇ ವಿಧಾನಸಭೆಯಲ್ಲಿ, ಐಪಿಎಲ್ ಪಂದ್ಯದಲ್ಲಿ ಆರ್.ಸಿ.ಬಿ ಗೆದ್ದಾಗ, ಸರ್ಕಾರದ ಅವಿವೇಕತನದಿಂದ ಅಥವಾ ಅತ್ಯುತ್ಸಾಹದಿಂದ, ಆರ್.ಸಿ.ಬಿ ಗೆಲುವನ್ನು ತಮ್ಮ ರಾಜಕೀಯಕ್ಕೆ ಉಪಯೋಗಿಸಿಕೊಳ್ಳುವ ಹಪಾಹಪಿತನದಿಂದ 11 ಜನ ಮೃತಪಟ್ಟ ಬಗ್ಗೆ ತುಂಬಾ ಚರ್ಚೆ ನಡೆದಿತ್ತು. </p><p>ಬಹಳಷ್ಟು ಜನ ಆಕ್ರೋಶ ವ್ಯಕ್ತಪಡಿಸಿದ್ದರು, ನೋವು ಅನುಭವಿಸಿದ್ದರು ಹಾಗೂ ಆ ನೋವನ್ನು ತೋಡಿಕೊಂಡಿದ್ದರು.</p><p>ಆದರೆ, ಇವತ್ತು ಅದೇ ವಿಧಾನಸೌಧದಲ್ಲಿ, ಅದೇ ಐಪಿಎಲ್ ಪಂದ್ಯದ ಟಿಕೆಟ್ ಬಗ್ಗೆ ಬಹಳ ಆಕ್ರೋಶದಿಂದ ಚರ್ಚೆ ನಡೆಸಿ, “ನಮಗೆ ಮರ್ಯಾದೆ ಸಿಗಲೇಬೇಕು” ಎಂದು ಹೇಳುತ್ತಿರುವುದು ಜನಸಾಮಾನ್ಯರಲ್ಲಿ ರಾಜಕಾರಣಿಗಳ ಬಗೆಗಿನ ತಿರಸ್ಕಾರವನ್ನು ಇನ್ನಷ್ಟು ಹೆಚ್ಚಿಸುವಂತೆ ಮಾಡಿದೆ.</p><p>ನಾವೆಲ್ಲರೂ ವೇದಿಕೆಯ ಮೇಲೆ ನಮ್ಮನ್ನು “ಜನಸೇವಕರು” ಎಂದು ಕರೆದುಕೊಳ್ಳುತ್ತೇವೆ. ಇಂತಹ ಹಿನ್ನೆಲೆಯಲ್ಲಿ ಈ ವಿಐಪಿ ಸಂಸ್ಕೃತಿಗೆ ಇಂದು ಪುರಸ್ಕಾರ ಸಿಗುತ್ತಿರುವುದು ಆಶ್ಚರ್ಯವನ್ನುಂಟು ಮಾಡುತ್ತಿದೆ.</p><p>ನಾನು ಇವತ್ತು ಮಾಧ್ಯಮಗಳ ಮೂಲಕ, ಸದ್ಯದಲ್ಲೇ ನಡೆಯಲಿರುವ ಐಪಿಎಲ್ ಪಂದ್ಯಕ್ಕೆ ಪ್ರತಿಯೊಬ್ಬ ಶಾಸಕರಿಗೆ ತಲಾ ಎರಡು ಟಿಕೆಟ್ ಹಾಗೂ ಮುಂದಿನ ದಿನಗಳಲ್ಲಿ ಐದು ಟಿಕೆಟ್ ಕೊಡುವ ಸುದ್ಧಿ ಓದಿ ತಿಳಿದೆ.</p><p>ಇದು ಖಂಡಿತಾ ಸರಿಯಾದ ನಿರ್ಧಾರವಲ್ಲ. ವಿಧಾನಸಭೆಯಲ್ಲಿ ಈ ಚರ್ಚೆ ನಡೆದ ಕೇವಲ 24 ಗಂಟೆಯಲ್ಲೇ ಸರ್ಕಾರ ಈ ರೀತಿ ಘೋಷಣೆ ಮಾಡಲು ಉತ್ಸುಕತೆ ತೋರಿರುವುದು ನನಗೂ ಆಶ್ಚರ್ಯ ತಂದಿದೆ. </p><p>ನಮ್ಮ ಅದೆಷ್ಟೋ ಪ್ರಶ್ನೆಗಳಿಗೆ ವರ್ಷಾನುಗಟ್ಟಲೆ ಫಲಿತಾಂಶ ಸಿಕ್ಕಿರುವುದಿಲ್ಲ. ಆದರೆ, ಶಾಸಕರ ವಿಷಯ ಬಂದ ತಕ್ಷಣ ಇಷ್ಟು ಬೇಗ ಕೆಲಸ ಮಾಡಿಬಿಟ್ಟರು ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ.</p><p>ಈ ಹಿನ್ನೆಲೆಯಲ್ಲಿ, ಮಾಧ್ಯಮಗಳ ಮೂಲಕ ಶಾಸಕರಿಗೆ ಟಿಕೆಟ್ ಕೊಡುತ್ತಾರೆ ಎಂದು ನಾನು ಏನು ತಿಳಿದುಕೊಂಡಿದ್ದೇನೋ, ಆ ಪಾಸ್ಗಳನ್ನು ಅಥವಾ ಆ ಟಿಕೆಟ್ಗಳನ್ನು ಸವಿನಯವಾಗಿ ನಿರಾಕರಿಸುತ್ತೇನೆ. </p><p>ಸ್ಪಷ್ಟ ಮಾತುಗಳಲ್ಲಿ ಹೇಳುವುದಾದರೆ, ದಯವಿಟ್ಟು ನನಗೆ ಆ ಟಿಕೆಟ್ಗಳು ಖಂಡಿತ ಬೇಡ. ಈ ರೀತಿ ವಿಐಪಿ ಸಂಸ್ಕೃತಿಯನ್ನು ಮುಂದುವರೆಸಿದಷ್ಟು, ರಾಜಕಾರಣಿಗಳಾದ ನಾವು ಜನಸಾಮಾನ್ಯರ ದೃಷ್ಟಿಯಲ್ಲಿ ಇನ್ನಷ್ಟು ಕನಿಷ್ಠರಾಗುತ್ತಾ ಹೋಗುತ್ತೇವೆ ಎಂಬುದನ್ನು ನಾವೆಲ್ಲರೂ ಜ್ಞಾಪಕದಲ್ಲಿಟ್ಟುಕೊಳ್ಳಬೇಕು ಎಂದು ಕಾಂಗ್ರೆಸ್ ಸರ್ಕಾರವನ್ನು ಎಚ್ಚರಿಸಿದ್ದಾರೆ.</p><p>–––</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>