ಒಳರೋಗಿ ವಿಭಾಗ ಹಾಗೂ ವಿವಿಧ ವಾರ್ಡ್ಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಅವರು, ರೋಗಿಗಳು ಹಾಗೂ ಅವರ ಸಂಬಂಧಿಗಳಿಂದ ಕುಂದು ಕೊರತೆಗಳನ್ನು ಆಲಿಸಿದರು. ಈ ವೇಳೆ ಕೆಲವರು ಆಸ್ಪತ್ರೆಯ ವ್ಯವಸ್ಥೆ ಹಾಗೂ ವೈದ್ಯಕೀಯ ಸಿಬ್ಬಂದಿಯ ವರ್ತನೆ ಬಗ್ಗೆ ದೂರಿದರು. ಈ ಬಗ್ಗೆ ಕ್ರಮವಹಿಸಿ, ವ್ಯವಸ್ಥೆ ಸುಧಾರಿಸುವಂತೆ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಕೆ. ಕೆಂಪರಾಜು ಅವರಿಗೆ ನ್ಯಾ.ಪಿ.ಎಸ್. ದಿನೇಶ್ ಕುಮಾರ್ ಸೂಚಿಸಿದರು.