<p>ಬೆಂಗಳೂರು: ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿ ಮುಖ್ಯವಾಹಿನಿಗೆ ತರಲು ಸಮೀಕ್ಷೆ ನಡೆಸುವುದಕ್ಕಾಗಿ ಪ್ರತಿ ತಿಂಗಳು 8 ಮತ್ತು 9ರಂದು ಸಂಜೆ 6ರಿಂದ ರಾತ್ರಿ 11ರವರೆಗೆ ಪ್ರಾಥಮಿಕ ಶಾಲಾ ಶಿಕ್ಷಕರು ಮನೆ ಮನೆಗೆ ಭೇಟಿ ನೀಡಬೇಕು ಎಂಬ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಸುತ್ತೋಲೆ ವಿವಾದ ಸೃಷ್ಟಿಸಿದೆ.</p>.<p>ಈ ಸುತ್ತೋಲೆ ಹೊರಬೀಳುತ್ತಿದ್ದಂತೆಯೇಗುರುವಾರ ಹಲವಾರು ಶಿಕ್ಷಕರು ಅದರಲ್ಲೂ ಮುಖ್ಯವಾಗಿ ಮಹಿಳೆಯರು ಅಸಹನೆ ವ್ಯಕ್ತಪಡಿಸಿದ್ದು, ತಮ್ಮ ಸಂಘದ ಮೂಲಕ ಸರ್ಕಾರಕ್ಕೆ ಮನವರಿಕೆ ಮಾಡುವ ಪ್ರಯತ್ನ ಮಾಡಿದರು.</p>.<p>ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಎನ್.ಚಂದ್ರಶೇಖರ್ ಅವರು ಮುಖ್ಯ ಕಾರ್ಯದರ್ಶಿ ಟಿ.ಎನ್.ವಿಜಯಭಾಸ್ಕರ್ ಅವರನ್ನು ಭೇಟಿ ಮಾಡಿ ವಾಸ್ತವ ಸಮಸ್ಯೆಗಳನ್ನು ವಿವರಿಸಿದರು.</p>.<p>’ಸಮೀಕ್ಷೆಯಲ್ಲಿ ಶಿಕ್ಷಕಿಯರನ್ನು ಸೇರಿಸಿಕೊಳ್ಳುವುದು ಬೇಡ, ಪುರುಷ ಶಿಕ್ಷಕರೂ ರಾತ್ರಿ 9 ಗಂಟೆಯವರೆಗೆ ಸಮೀಕ್ಷೆ ನಡೆಸಿದರೆ ಸಾಕು’ ಎಂದು ಮುಖ್ಯ ಕಾರ್ಯದರ್ಶಿಯವರು ಮೌಖಿಕವಾಗಿ ಸೂಚಿಸಿದರು ಎಂದು ಚಂದ್ರಶೇಖರ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಆಯುಕ್ತ ಡಾ.ಕೆ.ಜಿ.ಜಗದೀಶ್ ಅವರನ್ನೂ ಭೇಟಿ ಮಾಡಿ ಸಮಸ್ಯೆಯನ್ನು ಗಮನಕ್ಕೆ ತರಲಾಗಿದೆ. ಅವರು ಸಹ ಶಿಕ್ಷಕರಿಂದ ರಾತ್ರಿ 9 ಗಂಟೆಯವರೆಗೆ ಮಾತ್ರ ಸಮೀಕ್ಷೆ ನಡೆಸುವುದಕ್ಕೆ ಸಮ್ಮತಿ ಸೂಚಿಸಿದರು ಎಂದು ಅವರು ವಿವರಿಸಿದರು.</p>.<p><strong>13–14ರಂದು ಸಮೀಕ್ಷೆ: </strong>ಈ ಬಾರಿ ವರಮಹಾಲಕ್ಷ್ಮಿ ವ್ರತ ಇರುವುದರಿಂದ ಇದೇ 13 ಮತ್ತು 14ರಂದು ಸಮೀಕ್ಷೆ ನಡೆಸಲಾಗುವುದು ಎಂದು ಆಯುಕ್ತರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿ ಮುಖ್ಯವಾಹಿನಿಗೆ ತರಲು ಸಮೀಕ್ಷೆ ನಡೆಸುವುದಕ್ಕಾಗಿ ಪ್ರತಿ ತಿಂಗಳು 8 ಮತ್ತು 9ರಂದು ಸಂಜೆ 6ರಿಂದ ರಾತ್ರಿ 11ರವರೆಗೆ ಪ್ರಾಥಮಿಕ ಶಾಲಾ ಶಿಕ್ಷಕರು ಮನೆ ಮನೆಗೆ ಭೇಟಿ ನೀಡಬೇಕು ಎಂಬ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಸುತ್ತೋಲೆ ವಿವಾದ ಸೃಷ್ಟಿಸಿದೆ.</p>.<p>ಈ ಸುತ್ತೋಲೆ ಹೊರಬೀಳುತ್ತಿದ್ದಂತೆಯೇಗುರುವಾರ ಹಲವಾರು ಶಿಕ್ಷಕರು ಅದರಲ್ಲೂ ಮುಖ್ಯವಾಗಿ ಮಹಿಳೆಯರು ಅಸಹನೆ ವ್ಯಕ್ತಪಡಿಸಿದ್ದು, ತಮ್ಮ ಸಂಘದ ಮೂಲಕ ಸರ್ಕಾರಕ್ಕೆ ಮನವರಿಕೆ ಮಾಡುವ ಪ್ರಯತ್ನ ಮಾಡಿದರು.</p>.<p>ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಎನ್.ಚಂದ್ರಶೇಖರ್ ಅವರು ಮುಖ್ಯ ಕಾರ್ಯದರ್ಶಿ ಟಿ.ಎನ್.ವಿಜಯಭಾಸ್ಕರ್ ಅವರನ್ನು ಭೇಟಿ ಮಾಡಿ ವಾಸ್ತವ ಸಮಸ್ಯೆಗಳನ್ನು ವಿವರಿಸಿದರು.</p>.<p>’ಸಮೀಕ್ಷೆಯಲ್ಲಿ ಶಿಕ್ಷಕಿಯರನ್ನು ಸೇರಿಸಿಕೊಳ್ಳುವುದು ಬೇಡ, ಪುರುಷ ಶಿಕ್ಷಕರೂ ರಾತ್ರಿ 9 ಗಂಟೆಯವರೆಗೆ ಸಮೀಕ್ಷೆ ನಡೆಸಿದರೆ ಸಾಕು’ ಎಂದು ಮುಖ್ಯ ಕಾರ್ಯದರ್ಶಿಯವರು ಮೌಖಿಕವಾಗಿ ಸೂಚಿಸಿದರು ಎಂದು ಚಂದ್ರಶೇಖರ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಆಯುಕ್ತ ಡಾ.ಕೆ.ಜಿ.ಜಗದೀಶ್ ಅವರನ್ನೂ ಭೇಟಿ ಮಾಡಿ ಸಮಸ್ಯೆಯನ್ನು ಗಮನಕ್ಕೆ ತರಲಾಗಿದೆ. ಅವರು ಸಹ ಶಿಕ್ಷಕರಿಂದ ರಾತ್ರಿ 9 ಗಂಟೆಯವರೆಗೆ ಮಾತ್ರ ಸಮೀಕ್ಷೆ ನಡೆಸುವುದಕ್ಕೆ ಸಮ್ಮತಿ ಸೂಚಿಸಿದರು ಎಂದು ಅವರು ವಿವರಿಸಿದರು.</p>.<p><strong>13–14ರಂದು ಸಮೀಕ್ಷೆ: </strong>ಈ ಬಾರಿ ವರಮಹಾಲಕ್ಷ್ಮಿ ವ್ರತ ಇರುವುದರಿಂದ ಇದೇ 13 ಮತ್ತು 14ರಂದು ಸಮೀಕ್ಷೆ ನಡೆಸಲಾಗುವುದು ಎಂದು ಆಯುಕ್ತರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>