ಪ್ರಶಸ್ತಿ ಪ್ರದಾನ ಮಾಡಿದ ಹೈಕೋರ್ಟ್ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರು ಮಾತನಾಡಿ, ‘ಸೂರ್ಯನ ಶಕ್ತಿಯೇ ಅಗಾಧವಾದ ಸಂಪನ್ಮೂಲ. ಹಿಂದೆ ಸೌರಶಕ್ತಿಯನ್ನು ಬಳಕೆ ಮಾಡಿಕೊಳ್ಳುವುದು ಕಡಿಮೆ ಇತ್ತು. ತಂತ್ರಜ್ಞಾನ ಬೆಳೆದಂತೆ ಸೌರ ಶಕ್ತಿಯ ಬಳಕೆ ಈಗ ಹೆಚ್ಚಾಗುತ್ತಿದೆ. ಸೌರ ಶಕ್ತಿ ಹಾಗೂ ಪವನ ಶಕ್ತಿ ಬಳಕೆ ಹೆಚ್ಚಿದಲ್ಲಿ ಯಾವುದೇ ದೇಶವು ಅಭಿವೃದ್ಧಿ ಆಗಲಿದೆ’ ಎಂದು ಹೇಳಿದರು.