<p><strong>ಬೆಂಗಳೂರು:</strong> ಗ್ರಂಥಾಲಯ ಇಲಾಖೆಯಲ್ಲಿ ಆಯಾಕಟ್ಟಿನ ‘ಗ್ರಂಥಾಲಯ’ಗಳಿಗೆ ವರ್ಗಾವಣೆ ಹೊಂದಲು ಅಧಿಕಾರಿಗಳು ಪ್ರಭಾವ ಬೀರಿದರೆ, ಅಮಾನತು ಮಾಡಲಾಗುವುದು ಎಂದುಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ.</p>.<p>ಈಚೆಗೆ ನಡೆದ ಗ್ರಂಥಾಲಯ ಪ್ರಾಧಿಕಾರದ ಸಭೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿರುವ ಅವರು, ‘ಲಾಬಿ ನಡೆಸುವ ಅಧಿಕಾರಿಗಳ ವಿರುದ್ಧ ಸಿಸಿಎ ನಿಯಮದ ಅನ್ವಯ ಶಿಸ್ತು ಕ್ರಮ ತೆಗೆದುಕೊಳ್ಳುವುದರ ಜತೆಗೆ<br />ಅಮಾನತಿನಲ್ಲಿ ಇಡಲಾಗುವುದು’ ಎಂದು ಹೇಳಿದ್ದಾರೆ.</p>.<p>‘ಅಧಿಕಾರಿಗಳು ಹೊರಗಿನ ವ್ಯಕ್ತಿಗಳ ಮೂಲಕ ಪ್ರಭಾವ ಬೀರುತ್ತಿರುವ ವಿಷಯ ಗಮನಕ್ಕೆ ಬಂದಿದೆ. ಇದು ಕೆಟ್ಟ ಸಂಪ್ರದಾಯ. ಇದನ್ನು ಸಹಿಸಲು ಸಾಧ್ಯವಿಲ್ಲ’ ಎಂದಿದ್ದಾರೆ.ಸಭೆಯ ನಡಾವಳಿಯಲ್ಲೂ ಈ ವಿಷಯ ದಾಖಲಿಸಿದ್ದು, ಅದರ ಪ್ರತಿ ‘ಪ್ರಜಾವಾಣಿ’ಗೆ ಲಭ್ಯವಾಗಿದೆ.</p>.<p>‘ವರ್ಗಾವಣೆಗೆ ಸಂಬಂಧಿಸಿ ಇಲಾಖೆಯ ಅಧೀನ ಅಧಿಕಾರಿಗಳು ಪ್ರಭಾವ ಬೀರುತ್ತಿದ್ದಾರೆ. ಇದರಿಂದಾಗಿ ಆದೇಶ ಜಾರಿ ಮಾಡಲು ಮುಜುಗರ ಉಂಟಾಗುತ್ತಿದೆ’ ಎಂದು ಹಿರಿಯ ಅಧಿಕಾರಿಗಳು ಸಭೆಯ ಗಮನಕ್ಕೆ ತಂದರು ಎಂದು ಮೂಲಗಳು ತಿಳಿಸಿವೆ.</p>.<p>ರಾಜ್ಯದ ಪ್ರಮುಖ ನಗರ/ಜಿಲ್ಲಾ ಗ್ರಂಥಾಲಯಗಳು ಹಾಗೂ ಬೆಂಗಳೂರಿನ ಐದು ಕೇಂದ್ರ ವಲಯಗಳ ಗ್ರಂಥಾಲಗಳಿಗೆ ಭಾರಿ ಬೇಡಿಕೆ ಇದೆ. ಇವುಗಳಿಗೆ ವರ್ಷದಲ್ಲಿ ಕೋಟಿಗಟ್ಟಲೆ ಅನುದಾನ ಲಭಿಸುತ್ತದೆ. ಹೀಗಾಗಿ ಈ ಕೇಂದ್ರಗಳಿಗೆ ವರ್ಗಾವಣೆ ಪಡೆಯಲು ಲಾಬಿ ಹೆಚ್ಚಾಗಿದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.</p>.<p>‘ಗ್ರಂಥಾಲಯ ಇಲಾಖೆ ಅಧಿಕಾರಿಗಳ ಪಾಲಿಗೆ ಆಯಕಟ್ಟಿನ ಸ್ಥಳ ಎನಿಸಿರುವ ಗ್ರಂಥಾಲಯಗಳಿಗೆ ವರ್ಗಾವಣೆ ಪಡೆಯಲು ಪ್ರತಿ ವರ್ಷ ಅಧಿಕಾರಿಗಳ ಮಧ್ಯೆಯೇ ಪೈಪೋಟಿ ಜೋರಾಗಿರುತ್ತದೆ. ಹೆಚ್ಚುಪ್ರಭಾವ ಬೀರಲು<br />ಸಾಧ್ಯವಾಗವವರು ಮಾತ್ರ ಆಯಕಟ್ಟಿನ ಹುದ್ದೆಗಳಿಗೆ ವರ್ಗಾವಣೆ ಮಾಡಿಸಿಕೊಳ್ಳಲು ಶಕ್ತರಾಗುತ್ತಾರೆ’ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಗ್ರಂಥಾಲಯ ಇಲಾಖೆಯಲ್ಲಿ ಆಯಾಕಟ್ಟಿನ ‘ಗ್ರಂಥಾಲಯ’ಗಳಿಗೆ ವರ್ಗಾವಣೆ ಹೊಂದಲು ಅಧಿಕಾರಿಗಳು ಪ್ರಭಾವ ಬೀರಿದರೆ, ಅಮಾನತು ಮಾಡಲಾಗುವುದು ಎಂದುಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ.</p>.<p>ಈಚೆಗೆ ನಡೆದ ಗ್ರಂಥಾಲಯ ಪ್ರಾಧಿಕಾರದ ಸಭೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿರುವ ಅವರು, ‘ಲಾಬಿ ನಡೆಸುವ ಅಧಿಕಾರಿಗಳ ವಿರುದ್ಧ ಸಿಸಿಎ ನಿಯಮದ ಅನ್ವಯ ಶಿಸ್ತು ಕ್ರಮ ತೆಗೆದುಕೊಳ್ಳುವುದರ ಜತೆಗೆ<br />ಅಮಾನತಿನಲ್ಲಿ ಇಡಲಾಗುವುದು’ ಎಂದು ಹೇಳಿದ್ದಾರೆ.</p>.<p>‘ಅಧಿಕಾರಿಗಳು ಹೊರಗಿನ ವ್ಯಕ್ತಿಗಳ ಮೂಲಕ ಪ್ರಭಾವ ಬೀರುತ್ತಿರುವ ವಿಷಯ ಗಮನಕ್ಕೆ ಬಂದಿದೆ. ಇದು ಕೆಟ್ಟ ಸಂಪ್ರದಾಯ. ಇದನ್ನು ಸಹಿಸಲು ಸಾಧ್ಯವಿಲ್ಲ’ ಎಂದಿದ್ದಾರೆ.ಸಭೆಯ ನಡಾವಳಿಯಲ್ಲೂ ಈ ವಿಷಯ ದಾಖಲಿಸಿದ್ದು, ಅದರ ಪ್ರತಿ ‘ಪ್ರಜಾವಾಣಿ’ಗೆ ಲಭ್ಯವಾಗಿದೆ.</p>.<p>‘ವರ್ಗಾವಣೆಗೆ ಸಂಬಂಧಿಸಿ ಇಲಾಖೆಯ ಅಧೀನ ಅಧಿಕಾರಿಗಳು ಪ್ರಭಾವ ಬೀರುತ್ತಿದ್ದಾರೆ. ಇದರಿಂದಾಗಿ ಆದೇಶ ಜಾರಿ ಮಾಡಲು ಮುಜುಗರ ಉಂಟಾಗುತ್ತಿದೆ’ ಎಂದು ಹಿರಿಯ ಅಧಿಕಾರಿಗಳು ಸಭೆಯ ಗಮನಕ್ಕೆ ತಂದರು ಎಂದು ಮೂಲಗಳು ತಿಳಿಸಿವೆ.</p>.<p>ರಾಜ್ಯದ ಪ್ರಮುಖ ನಗರ/ಜಿಲ್ಲಾ ಗ್ರಂಥಾಲಯಗಳು ಹಾಗೂ ಬೆಂಗಳೂರಿನ ಐದು ಕೇಂದ್ರ ವಲಯಗಳ ಗ್ರಂಥಾಲಗಳಿಗೆ ಭಾರಿ ಬೇಡಿಕೆ ಇದೆ. ಇವುಗಳಿಗೆ ವರ್ಷದಲ್ಲಿ ಕೋಟಿಗಟ್ಟಲೆ ಅನುದಾನ ಲಭಿಸುತ್ತದೆ. ಹೀಗಾಗಿ ಈ ಕೇಂದ್ರಗಳಿಗೆ ವರ್ಗಾವಣೆ ಪಡೆಯಲು ಲಾಬಿ ಹೆಚ್ಚಾಗಿದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.</p>.<p>‘ಗ್ರಂಥಾಲಯ ಇಲಾಖೆ ಅಧಿಕಾರಿಗಳ ಪಾಲಿಗೆ ಆಯಕಟ್ಟಿನ ಸ್ಥಳ ಎನಿಸಿರುವ ಗ್ರಂಥಾಲಯಗಳಿಗೆ ವರ್ಗಾವಣೆ ಪಡೆಯಲು ಪ್ರತಿ ವರ್ಷ ಅಧಿಕಾರಿಗಳ ಮಧ್ಯೆಯೇ ಪೈಪೋಟಿ ಜೋರಾಗಿರುತ್ತದೆ. ಹೆಚ್ಚುಪ್ರಭಾವ ಬೀರಲು<br />ಸಾಧ್ಯವಾಗವವರು ಮಾತ್ರ ಆಯಕಟ್ಟಿನ ಹುದ್ದೆಗಳಿಗೆ ವರ್ಗಾವಣೆ ಮಾಡಿಸಿಕೊಳ್ಳಲು ಶಕ್ತರಾಗುತ್ತಾರೆ’ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>