ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಗುರಿ ತಲುಪಲು ರಾಜ್ಯ ಸರ್ಕಾರ ಪ್ರಯತ್ನ ಮುಂದುವರಿಸಿದೆ, ಹಿಂದಿನ ವರ್ಷಗಳಿಗೆ ಹೋಲಿಸಿದರೆ 2020–21ರಲ್ಲಿ ರಾಜ್ಯ 9 ಗುರಿಗಳಲ್ಲಿ ಸುಧಾರಣೆ ಕಂಡಿದೆ. ಇದೇ 29 ರಂದು ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಸುಸ್ಥಿರ ಅಭಿವೃದ್ಧಿ ಗುರಿಗಳಿಗೆ ಸಂಬಂಧಿಸಿದ ಸಭೆ ನಡೆಯಲಿದ್ದು, ಸಭೆಯಲ್ಲಿ ಯೋಜನಾ ಮಂಡಳಿಯ ಉಪಾಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿ, ಯೋಜನೆ, ಸಾಂಖ್ಯಿಕ ಮತ್ತು ಕಾರ್ಯಕ್ರಮಗಳ ಸಚಿವ ಕೆ.ಸಿ.ನಾರಾಯಣ ಗೌಡ ಭಾಗವಹಿಸಲಿದ್ದಾರೆ. ಸುಸ್ಥಿರ ಅಭಿವೃದ್ಧಿ ಗುರಿಗಳಿಗೆ ಸಂಬಂಧಿಸಿದಂತೆ ರಾಜ್ಯದ ಸಾಧನೆ ಕುರಿತು ಮುಖ್ಯಮಂತ್ರಿ ಕಿರುಹೊತ್ತಿಗೆ ಬಿಡುಗಡೆ ಮಾಡಲಿದ್ದಾರೆ.