ಸುವರ್ಣಶ್ರೀ ಪ್ರಶಸ್ತಿಯು ₹50 ಸಾವಿರ ನಗದು, ಕಂಚಿನ ಪ್ರಶಸ್ತಿ ಪತ್ರ ಮತ್ತು ನೆನಪಿನ ಕಾಣಿಕೆ ಹೊಂದಿದೆ. ಪ್ರಶಸ್ತಿ ಪ್ರದಾನ ಸಮಾರಂಭ ಇದೇ 21ರಂದು ನಡೆಯಲಿದೆ. ಅದೇ ದಿನ ಮಠದ ಶ್ರೀ ಜಗದ್ಗುರು ಪಂಚಾಚಾರ್ಯ ಕಲ್ಯಾಣ ಮಂಟಪದಲ್ಲಿ ನಡೆಯುವ ವೀರಭದ್ರಸ್ವಾಮಿ ಜಾತ್ರಾ ಮಹೋತ್ಸವ, ಜಗದ್ಗುರು ರೇಣುಕಾದಿ ಪಂಚಾಚಾರ್ಯ ಯುಗಮಾನೋತ್ಸವ, ಬಸವಾದಿ ಶಿವಶರಣರ ಮತ್ತು ಪೂಜ್ಯಶ್ರೀ ಸುವರ್ಣಲಿಂಗ ಶಿವಾಚಾರ್ಯ ಸ್ವಾಮೀಜಿ ಅವರ 21ನೇ ಸಂಸ್ಮರಣೋತ್ಸವ ನಡೆಯಲಿದೆ.