<p><strong>ಬೆಂಗಳೂರು: </strong>ಸ್ವಚ್ಛ ಭಾರತ ಯೋಜನೆಯ ಅನುದಾನವನ್ನು ನಿಯಮಾವಳಿಗೆ ವಿರುದ್ಧವಾಗಿ ಅನ್ಯ ಉದ್ದೇಶಕ್ಕೆ ಬಳಸಿದ ಹಾಗೂ ರಸ್ತೆ ಗುಂಡಿಗಳನ್ನು ಮುಚ್ಚುವ ಕಾಮಗಾರಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ತನಿಖೆಯನ್ನು ಸರ್ಕಾರ ಭ್ರಷ್ಟಾಚಾರ ನಿಗ್ರಹ ದಳಕ್ಕೆ ಒಪ್ಪಿಸಿದೆ.</p>.<p>ಕೇಂದ್ರ ಸರ್ಕಾರವು 2016-17 ಮತ್ತು 2017-18ನೇ ಸಾಲಿನಲ್ಲಿ ಸ್ವಚ್ಛ ಭಾರತ ಯೋಜನೆಯಡಿ ಪಾಲಿಕೆಗೆ ₹ 108.56 ಕೋಟಿ ಅನುದಾನ ಬಿಡುಗಡೆ ಮಾಡಿತ್ತು. ‘ಈ ಯೋಜನೆಯಡಿ ಸೂಚಿಸಿರುವ ಕಾಮಗಾರಿಗಳಿಗೆ (ಶೌಚಾಲಯ ನಿರ್ಮಾಣ, ಕಸ ನಿರ್ವಹಣೆ ಹಾಗೂ ಆರೋಗ್ಯ ಇಲಾಖೆಯ ಕಾಮಗಾರಿಗಳು... ಇತ್ಯಾದಿ) ₹ 16.28 ಕೋಟಿಯನ್ನು ಮಾತ್ರ ಬಳಸಲಾಗಿದೆ. ಇನ್ನುಳಿದ ₹ 92.27 ಕೋಟಿ ಅನುದಾನವನ್ನು ಅನ್ಯ ಉದ್ದೇಶಗಳಿಗೆ ಬಳಸಲಾಗಿದೆ’ ಎಂದು ಆರೋಪಿಸಿ ಬಿಜೆಪಿ ಮುಖಂಡ ಎನ್. ಆರ್. ರಮೇಶ್ ಎಸಿಬಿಗೆ ದೂರು ನೀಡಿದ್ದರು.</p>.<p>ಈ ಯೋಜನೆಗೆ ಸಂಬಂಧಪಡದ ರಸ್ತೆ, ಪಾದಚಾರಿ ಮಾರ್ಗ, ಚರಂಡಿ ಅಭಿವೃದ್ಧಿ ಕಾರ್ಯಗಳಿಗೂ ಅನುದಾನ ಬಳಸುವ ಮೂಲಕ ಬಿಬಿಎಂಪಿ ಅಧಿಕಾರಿಗಳು ತಪ್ಪೆಸಗಿರುವುದು ಮೇಲ್ನೋಟಕ್ಕೆ ದೃಢಪಟ್ಟಿದ್ದು, ತನಿಖೆ ನಡೆಸಬೇಕು ಎಂದು ನಗರಾಭಿವೃದ್ಧಿ ಇಲಾಖೆ ಇದೇ 14ರಂದು ಹೊರಡಿಸಿರುವ ಆದೇಶದಲ್ಲಿ ತಿಳಿಸಿದೆ.</p>.<p>‘ಈ ಅನುದಾನದಲ್ಲಿ ಕೆ.ಆರ್.ಮಾರುಕಟ್ಟೆಯ ಗೋಡೆಗೆ ಒಂದು ಬಾರಿ ಬಣ್ಣ ಬಳಿದು ಎರಡು ಬಾರಿ ಬಿಲ್ ಪಾವತಿಸಲಾಗಿದೆ’ ಎಂದು ರಮೇಶ್ ಆರೋಪಿಸಿದ್ದರು.</p>.<p>‘2015-16 ರಿಂದ 2017-18 ಅವಧಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಲು ₹ 1,116 ಕೋಟಿ ವೆಚ್ಚ ಮಾಡಲಾಗಿದೆ. ಈ ಕಾಮಗಾರಿಗಳಲ್ಲಿ ನೂರಾರು ಕೋಟಿ ರೂಪಾಯಿಗಳ ಅವ್ಯವಹಾರ ನಡೆದಿದೆ’ ಎಂದು ಆರೋಪಿಸಿ ರಮೇಶ್ ಎಸಿಬಿಗೆ ದೂರು ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಸ್ವಚ್ಛ ಭಾರತ ಯೋಜನೆಯ ಅನುದಾನವನ್ನು ನಿಯಮಾವಳಿಗೆ ವಿರುದ್ಧವಾಗಿ ಅನ್ಯ ಉದ್ದೇಶಕ್ಕೆ ಬಳಸಿದ ಹಾಗೂ ರಸ್ತೆ ಗುಂಡಿಗಳನ್ನು ಮುಚ್ಚುವ ಕಾಮಗಾರಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ತನಿಖೆಯನ್ನು ಸರ್ಕಾರ ಭ್ರಷ್ಟಾಚಾರ ನಿಗ್ರಹ ದಳಕ್ಕೆ ಒಪ್ಪಿಸಿದೆ.</p>.<p>ಕೇಂದ್ರ ಸರ್ಕಾರವು 2016-17 ಮತ್ತು 2017-18ನೇ ಸಾಲಿನಲ್ಲಿ ಸ್ವಚ್ಛ ಭಾರತ ಯೋಜನೆಯಡಿ ಪಾಲಿಕೆಗೆ ₹ 108.56 ಕೋಟಿ ಅನುದಾನ ಬಿಡುಗಡೆ ಮಾಡಿತ್ತು. ‘ಈ ಯೋಜನೆಯಡಿ ಸೂಚಿಸಿರುವ ಕಾಮಗಾರಿಗಳಿಗೆ (ಶೌಚಾಲಯ ನಿರ್ಮಾಣ, ಕಸ ನಿರ್ವಹಣೆ ಹಾಗೂ ಆರೋಗ್ಯ ಇಲಾಖೆಯ ಕಾಮಗಾರಿಗಳು... ಇತ್ಯಾದಿ) ₹ 16.28 ಕೋಟಿಯನ್ನು ಮಾತ್ರ ಬಳಸಲಾಗಿದೆ. ಇನ್ನುಳಿದ ₹ 92.27 ಕೋಟಿ ಅನುದಾನವನ್ನು ಅನ್ಯ ಉದ್ದೇಶಗಳಿಗೆ ಬಳಸಲಾಗಿದೆ’ ಎಂದು ಆರೋಪಿಸಿ ಬಿಜೆಪಿ ಮುಖಂಡ ಎನ್. ಆರ್. ರಮೇಶ್ ಎಸಿಬಿಗೆ ದೂರು ನೀಡಿದ್ದರು.</p>.<p>ಈ ಯೋಜನೆಗೆ ಸಂಬಂಧಪಡದ ರಸ್ತೆ, ಪಾದಚಾರಿ ಮಾರ್ಗ, ಚರಂಡಿ ಅಭಿವೃದ್ಧಿ ಕಾರ್ಯಗಳಿಗೂ ಅನುದಾನ ಬಳಸುವ ಮೂಲಕ ಬಿಬಿಎಂಪಿ ಅಧಿಕಾರಿಗಳು ತಪ್ಪೆಸಗಿರುವುದು ಮೇಲ್ನೋಟಕ್ಕೆ ದೃಢಪಟ್ಟಿದ್ದು, ತನಿಖೆ ನಡೆಸಬೇಕು ಎಂದು ನಗರಾಭಿವೃದ್ಧಿ ಇಲಾಖೆ ಇದೇ 14ರಂದು ಹೊರಡಿಸಿರುವ ಆದೇಶದಲ್ಲಿ ತಿಳಿಸಿದೆ.</p>.<p>‘ಈ ಅನುದಾನದಲ್ಲಿ ಕೆ.ಆರ್.ಮಾರುಕಟ್ಟೆಯ ಗೋಡೆಗೆ ಒಂದು ಬಾರಿ ಬಣ್ಣ ಬಳಿದು ಎರಡು ಬಾರಿ ಬಿಲ್ ಪಾವತಿಸಲಾಗಿದೆ’ ಎಂದು ರಮೇಶ್ ಆರೋಪಿಸಿದ್ದರು.</p>.<p>‘2015-16 ರಿಂದ 2017-18 ಅವಧಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಲು ₹ 1,116 ಕೋಟಿ ವೆಚ್ಚ ಮಾಡಲಾಗಿದೆ. ಈ ಕಾಮಗಾರಿಗಳಲ್ಲಿ ನೂರಾರು ಕೋಟಿ ರೂಪಾಯಿಗಳ ಅವ್ಯವಹಾರ ನಡೆದಿದೆ’ ಎಂದು ಆರೋಪಿಸಿ ರಮೇಶ್ ಎಸಿಬಿಗೆ ದೂರು ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>