<p><strong>ದಾಬಸ್ ಪೇಟೆ</strong>: ‘ಮೌನ ತಪಸ್ವಿ ಜಡೆಯ ಶಾಂತಲಿಂಗೇಶ್ವರ ಸ್ವಾಮೀಜಿ ಅವರು ಸಮಾಜದಲ್ಲಿ ಬೇರೂರಿರುವ ಅಜ್ಞಾನ ಮತ್ತು ಮೂಢನಂಬಿಕೆಗಳ ವಿರುದ್ಧ ಜನ ಜಾಗೃತಿ ಮೂಡಿಸಿದ್ದಾರೆ’ ಎಂದು ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಹೇಳಿದರು.</p>.<p>ನೆಲಮಂಗಲ ತಾಲ್ಲೂಕಿನ ಸೋಂಪುರ ಹೋಬಳಿಯ ಕೆರೆಕತ್ತಿಗನೂರು ಗ್ರಾಮದಲ್ಲಿನ ಗುರುದೇವ ಸೇವಾ ಸಂಸ್ಥೆಯ (ಸಮಾಧಾನ ಮಠ) ಮೌನ ತಪಸ್ವಿ ಜಡೆಯ ಶಾಂತಲಿಂಗೇಶ್ವರ ಮಹಾಸ್ವಾಮಿಗಳ 'ಗುರುಹಿರಿಯರ ವಂದನೆ' ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.</p>.<p>’ಶಾಂತಲಿಂಗೇಶ್ವರ ಸ್ವಾಮೀಜಿ, ಪ್ರಾಣಿ ಬಲಿ, ಅಂದ ಶ್ರದ್ದೆ, ಬಾಲ್ಯ ವಿವಾಹದಂತಹ ಅನಿಷ್ಟ ಪದ್ದತಿಗಳನ್ನು ನಿರ್ಮೂಲನೆ ಮಾಡಿ, ಮಹಾತ್ಮ ಗಾಂಧೀಜಿಯವರ ಆಶಯದಂತೆ ಗ್ರಾಮಗಳ ಅಭಿವೃದ್ದಿಗೆ ಮುಂದಾಗಿದ್ದಾರೆ’ ಎಂದು ಹೇಳಿದರು.</p>.<p>ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿ, ‘ಶಾಂತಲಿಂಗೇಶ್ವರ ಸ್ವಾಮೀಜಿ ಅವರು, ಮೌನವಾಗಿದ್ದುಕೊಂಡೇ ಅನೇಕ ಸಮಾಜಮುಖಿ ಕಾರ್ಯಗಳನ್ನು ಮಾಡಿದ್ದಾರೆ. ಇವರ ಸಹಕಾರದಿಂದ ಗ್ರಾಮಗಳು ಅಭಿವೃದ್ದಿಯಾಗುತ್ತವೆ’ ಎಂದರು.</p>.<p>ಮೇಲಣ ಗವಿ ಮಠದ ಮಲಯ ಶಾಂತಮುನಿ ಶಿವಾಚಾರ್ಯ ಸ್ವಾಮೀಜಿ, ಹಳೇನಿಜಗಲ್ ತಪೋವನದ ಶಿವಾನಂದ ಶಿವಾಚಾರ್ಯ ಸ್ವಾಮಿಜಿ, ಮಾಜಿ ಸಚಿವರಾದ ಚರಂತಿ ಮಠ, ಅಕ್ಕಲಕೋಟೆ ಶಾಸಕ ಸಚಿನ್ ಕಲ್ಯಾಣ ಶೆಟ್ಟಿ, ಅಲ್ಲಂ ವೀರಭದ್ರಪ್ಪ ಹಾಗೂ ಇತರರು ಭಾಗವಹಿಸಿದ್ದರು.</p>.<p>ಇದೇ ಸಂದರ್ಭದಲ್ಲಿ ಭಕ್ತರಿಂದ ಮೌನ ತಪಸ್ವಿ ಜಡೆಯ ಶಾಂತಲಿಂಗೇಶ್ವರ ಸ್ವಾಮೀಜಿಯವರ ತುಲಾಭಾರ ಕಾರ್ಯಕ್ರಮ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾಬಸ್ ಪೇಟೆ</strong>: ‘ಮೌನ ತಪಸ್ವಿ ಜಡೆಯ ಶಾಂತಲಿಂಗೇಶ್ವರ ಸ್ವಾಮೀಜಿ ಅವರು ಸಮಾಜದಲ್ಲಿ ಬೇರೂರಿರುವ ಅಜ್ಞಾನ ಮತ್ತು ಮೂಢನಂಬಿಕೆಗಳ ವಿರುದ್ಧ ಜನ ಜಾಗೃತಿ ಮೂಡಿಸಿದ್ದಾರೆ’ ಎಂದು ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಹೇಳಿದರು.</p>.<p>ನೆಲಮಂಗಲ ತಾಲ್ಲೂಕಿನ ಸೋಂಪುರ ಹೋಬಳಿಯ ಕೆರೆಕತ್ತಿಗನೂರು ಗ್ರಾಮದಲ್ಲಿನ ಗುರುದೇವ ಸೇವಾ ಸಂಸ್ಥೆಯ (ಸಮಾಧಾನ ಮಠ) ಮೌನ ತಪಸ್ವಿ ಜಡೆಯ ಶಾಂತಲಿಂಗೇಶ್ವರ ಮಹಾಸ್ವಾಮಿಗಳ 'ಗುರುಹಿರಿಯರ ವಂದನೆ' ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.</p>.<p>’ಶಾಂತಲಿಂಗೇಶ್ವರ ಸ್ವಾಮೀಜಿ, ಪ್ರಾಣಿ ಬಲಿ, ಅಂದ ಶ್ರದ್ದೆ, ಬಾಲ್ಯ ವಿವಾಹದಂತಹ ಅನಿಷ್ಟ ಪದ್ದತಿಗಳನ್ನು ನಿರ್ಮೂಲನೆ ಮಾಡಿ, ಮಹಾತ್ಮ ಗಾಂಧೀಜಿಯವರ ಆಶಯದಂತೆ ಗ್ರಾಮಗಳ ಅಭಿವೃದ್ದಿಗೆ ಮುಂದಾಗಿದ್ದಾರೆ’ ಎಂದು ಹೇಳಿದರು.</p>.<p>ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿ, ‘ಶಾಂತಲಿಂಗೇಶ್ವರ ಸ್ವಾಮೀಜಿ ಅವರು, ಮೌನವಾಗಿದ್ದುಕೊಂಡೇ ಅನೇಕ ಸಮಾಜಮುಖಿ ಕಾರ್ಯಗಳನ್ನು ಮಾಡಿದ್ದಾರೆ. ಇವರ ಸಹಕಾರದಿಂದ ಗ್ರಾಮಗಳು ಅಭಿವೃದ್ದಿಯಾಗುತ್ತವೆ’ ಎಂದರು.</p>.<p>ಮೇಲಣ ಗವಿ ಮಠದ ಮಲಯ ಶಾಂತಮುನಿ ಶಿವಾಚಾರ್ಯ ಸ್ವಾಮೀಜಿ, ಹಳೇನಿಜಗಲ್ ತಪೋವನದ ಶಿವಾನಂದ ಶಿವಾಚಾರ್ಯ ಸ್ವಾಮಿಜಿ, ಮಾಜಿ ಸಚಿವರಾದ ಚರಂತಿ ಮಠ, ಅಕ್ಕಲಕೋಟೆ ಶಾಸಕ ಸಚಿನ್ ಕಲ್ಯಾಣ ಶೆಟ್ಟಿ, ಅಲ್ಲಂ ವೀರಭದ್ರಪ್ಪ ಹಾಗೂ ಇತರರು ಭಾಗವಹಿಸಿದ್ದರು.</p>.<p>ಇದೇ ಸಂದರ್ಭದಲ್ಲಿ ಭಕ್ತರಿಂದ ಮೌನ ತಪಸ್ವಿ ಜಡೆಯ ಶಾಂತಲಿಂಗೇಶ್ವರ ಸ್ವಾಮೀಜಿಯವರ ತುಲಾಭಾರ ಕಾರ್ಯಕ್ರಮ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>