<p><strong>ಬೆಂಗಳೂರು:</strong> ‘ಶೈಕ್ಷಣಿಕ ಕ್ರಾಂತಿಯಿಂದ ದೇಶದ ಪ್ರಗತಿ ಮತ್ತು ಸಾಮಾಜಿಕ ನ್ಯಾಯ ಸ್ಥಾಪನೆ ಸಾಧ್ಯ’ ಎಂದು ಸಮಾಜ ಸೇವಕ ಎನ್.ಸ್ವರೂಪ್ ಕುಮಾರ್ ತಿಳಿಸಿದರು.</p>.<p>ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಬೆಂಗಳೂರು ದಕ್ಷಿಣ ವಲಯದ ವತಿಯಿಂದ ಬೊಮ್ಮನಹಳ್ಳಿಯಲ್ಲಿ ಆಯೋಜಿಸಿದ್ದ ಶೈಕ್ಷಣಿಕ ಕಾರ್ಯಾಗಾರ ಮತ್ತು ನಿವೃತ್ತ ಶಿಕ್ಷಕರ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಆಧುನಿಕತೆಯ ಅಬ್ಬರದದಲ್ಲಿ ಪರಂಪರೆ ಮತ್ತು ಮೌಲ್ಯಗಳು ಕುಸಿಯುತ್ತಿವೆ. ಗುರುಗಳ ಬಗ್ಗೆ ವಿದ್ಯಾರ್ಥಿಗಳಿಗೆ ಗೌರವ ಇಲ್ಲ. ಎಲ್ಲವೂ ಇಂಟರ್ನೆಟ್ನಲ್ಲಿ ಸಿಗುತ್ತದೆ ಎನ್ನುವಸಮೂಹ ಸನ್ನಿಗೆ ಒಳಗಾಗಿದ್ದೇವೆ. ಇದರ ಬಗ್ಗೆ ಶಿಕ್ಷಕರು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಬೇಕು’ ಎಂದರು.</p>.<p>ಸಂಘದ ನಿಕಟಪೂರ್ವ ಅಧ್ಯಕ್ಷ ವಿ.ಎಂ.ನಾರಾಯಣಸ್ವಾಮಿ, ‘ಶಿಕ್ಷಕರು ಜ್ಞಾನದ ಬೆಳಕು ಎಂದು ಶಿಕ್ಷಕರ ದಿನದಂದು ಭಾಷಣ ಬಿಗಿಯುತ್ತಾರೆ. ಆದರೆ, ಹೋರಾಟ ನಡೆಸಿಯೇ ಶಿಕ್ಷಕರುವೇತನ, ಸೌಲಭ್ಯ ಪಡೆಯುವ ಅನಿವಾರ್ಯ ಸ್ಥಿತಿ ಇದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಶೈಕ್ಷಣಿಕ ಕ್ರಾಂತಿಯಿಂದ ದೇಶದ ಪ್ರಗತಿ ಮತ್ತು ಸಾಮಾಜಿಕ ನ್ಯಾಯ ಸ್ಥಾಪನೆ ಸಾಧ್ಯ’ ಎಂದು ಸಮಾಜ ಸೇವಕ ಎನ್.ಸ್ವರೂಪ್ ಕುಮಾರ್ ತಿಳಿಸಿದರು.</p>.<p>ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಬೆಂಗಳೂರು ದಕ್ಷಿಣ ವಲಯದ ವತಿಯಿಂದ ಬೊಮ್ಮನಹಳ್ಳಿಯಲ್ಲಿ ಆಯೋಜಿಸಿದ್ದ ಶೈಕ್ಷಣಿಕ ಕಾರ್ಯಾಗಾರ ಮತ್ತು ನಿವೃತ್ತ ಶಿಕ್ಷಕರ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಆಧುನಿಕತೆಯ ಅಬ್ಬರದದಲ್ಲಿ ಪರಂಪರೆ ಮತ್ತು ಮೌಲ್ಯಗಳು ಕುಸಿಯುತ್ತಿವೆ. ಗುರುಗಳ ಬಗ್ಗೆ ವಿದ್ಯಾರ್ಥಿಗಳಿಗೆ ಗೌರವ ಇಲ್ಲ. ಎಲ್ಲವೂ ಇಂಟರ್ನೆಟ್ನಲ್ಲಿ ಸಿಗುತ್ತದೆ ಎನ್ನುವಸಮೂಹ ಸನ್ನಿಗೆ ಒಳಗಾಗಿದ್ದೇವೆ. ಇದರ ಬಗ್ಗೆ ಶಿಕ್ಷಕರು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಬೇಕು’ ಎಂದರು.</p>.<p>ಸಂಘದ ನಿಕಟಪೂರ್ವ ಅಧ್ಯಕ್ಷ ವಿ.ಎಂ.ನಾರಾಯಣಸ್ವಾಮಿ, ‘ಶಿಕ್ಷಕರು ಜ್ಞಾನದ ಬೆಳಕು ಎಂದು ಶಿಕ್ಷಕರ ದಿನದಂದು ಭಾಷಣ ಬಿಗಿಯುತ್ತಾರೆ. ಆದರೆ, ಹೋರಾಟ ನಡೆಸಿಯೇ ಶಿಕ್ಷಕರುವೇತನ, ಸೌಲಭ್ಯ ಪಡೆಯುವ ಅನಿವಾರ್ಯ ಸ್ಥಿತಿ ಇದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>