ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೈಕ್ಷಣಿಕ ಕ್ರಾಂತಿಯಿಂದ ದೇಶದ ಪ್ರಗತಿ: ಸ್ವರೂಪ್ ಕುಮಾರ್‌

Last Updated 10 ಅಕ್ಟೋಬರ್ 2021, 1:40 IST
ಅಕ್ಷರ ಗಾತ್ರ

ಬೆಂಗಳೂರು: ‘ಶೈಕ್ಷಣಿಕ ಕ್ರಾಂತಿಯಿಂದ ದೇಶದ ಪ್ರಗತಿ ಮತ್ತು‌ ಸಾಮಾಜಿಕ ನ್ಯಾಯ ಸ್ಥಾಪನೆ ಸಾಧ್ಯ’ ಎಂದು ಸಮಾಜ ಸೇವಕ ಎನ್.ಸ್ವರೂಪ್ ಕುಮಾರ್‌ ತಿಳಿಸಿದರು.

ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಬೆಂಗಳೂರು ದಕ್ಷಿಣ ವಲಯದ ವತಿಯಿಂದ ಬೊಮ್ಮನಹಳ್ಳಿಯಲ್ಲಿ ಆಯೋಜಿಸಿದ್ದ ಶೈಕ್ಷಣಿಕ ಕಾರ್ಯಾಗಾರ ಮತ್ತು ನಿವೃತ್ತ ಶಿಕ್ಷಕರ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಆಧುನಿಕತೆಯ ಅಬ್ಬರದದಲ್ಲಿ ಪರಂಪರೆ ಮತ್ತು ಮೌಲ್ಯಗಳು ಕುಸಿಯುತ್ತಿವೆ. ಗುರುಗಳ ಬಗ್ಗೆ ವಿದ್ಯಾರ್ಥಿಗಳಿಗೆ ಗೌರವ ಇಲ್ಲ. ಎಲ್ಲವೂ ಇಂಟರ್‌ನೆಟ್‌ನಲ್ಲಿ ಸಿಗುತ್ತದೆ ಎನ್ನುವಸಮೂಹ ಸನ್ನಿಗೆ ಒಳಗಾಗಿದ್ದೇವೆ. ಇದರ ಬಗ್ಗೆ ಶಿಕ್ಷಕರು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಬೇಕು’ ಎಂದರು.

ಸಂಘದ ನಿಕಟಪೂರ್ವ ಅಧ್ಯಕ್ಷ ವಿ.ಎಂ.ನಾರಾಯಣಸ್ವಾಮಿ, ‘ಶಿಕ್ಷಕರು ಜ್ಞಾನದ ಬೆಳಕು ಎಂದು ಶಿಕ್ಷಕರ ದಿನದಂದು ಭಾಷಣ ಬಿಗಿಯುತ್ತಾರೆ. ಆದರೆ, ಹೋರಾಟ ನಡೆಸಿಯೇ ಶಿಕ್ಷಕರುವೇತನ, ಸೌಲಭ್ಯ ಪಡೆಯುವ ಅನಿವಾರ್ಯ ಸ್ಥಿತಿ ಇದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT