<p><strong>ಬೆಂಗಳೂರು:</strong> ನಗರದಲ್ಲಿ ಅಹಿತಕರ ಘಟನೆಗಳು, ವಿಶೇಷ ಕರ್ತವ್ಯ ಹಾಗೂ ತುರ್ತು ಸಂದರ್ಭಗಳಲ್ಲಿ ತ್ವರಿತವಾಗಿ ಸ್ಪಂದಿಸಲು ನುರಿತ(ಸ್ವ್ಯಾಟ್) ತಂಡಗಳನ್ನು ರಚಿಸಿ, ತರಬೇತಿ ನೀಡಿ ಪೊಲೀಸ್ ಇಲಾಖೆ ಸನ್ನದ್ಧಗೊಳಿಸಿದೆ.</p>.<p>ಇದಕ್ಕಾಗಿ ಸಿಎಆರ್ ಘಟಕಗಳಿಂದ ಒಟ್ಟು 120 ಸಿಬ್ಬಂದಿಯನ್ನು ಆಯ್ಕೆ ಮಾಡಲಾಗಿದೆ. ಈ ತಂಡಕ್ಕೆಭಯೋತ್ಪಾದನೆ ನಿಗ್ರಹ ಕೇಂದ್ರವು(ಸಿಸಿಟಿ) ಅಗರದ ಆಂತರಿಕ ಭದ್ರತೆ ವಿಭಾಗದಲ್ಲಿ ಎಂಟು ವಾರಗಳ ವಿಶೇಷ ತರಬೇತಿ ನೀಡಿದೆ.</p>.<p>‘ಭಯೋತ್ಪಾದಕ ಮತ್ತು ನಕ್ಸಲ್ ಕೃತ್ಯಗಳು, ಸಮಾಜ ವಿರೋಧಿ ಚಟುವಟಿಕೆಗಳು, ಅಂತರರಾಷ್ಟ್ರೀಯ ಮಹತ್ವವುಳ್ಳ ಕಾರ್ಯಕ್ರಮಗಳ ಭದ್ರತೆ ಹಾಗೂ ಆಧುನಿಕ ಆಯುಧಗಳ ಬಗ್ಗೆ ಈ ವಿಶೇಷ ತಂಡಗಳಿಗೆ ತರಬೇತಿ ನೀಡಲಾಗಿದೆ’ ಎಂದುಸಿಸಿಬಿ ಜಂಟಿ ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ ತಿಳಿಸಿದರು.</p>.<p>‘ತರಬೇತಿ ಪಡೆದವರನ್ನು ನಾಲ್ಕು ತಂಡಗಳಾಗಿ ವಿಭಜಿಸಿ, ನಗರದಲ್ಲಿ ಅಗತ್ಯವಿರುವ ಸ್ಥಳಗಳಿಗೆ ನಿಯೋಜಿಸಲಾಗಿದೆ.ಪ್ರತಿ ತಂಡದಲ್ಲಿ 30 ಸಿಬ್ಬಂದಿ ಹಾಗೂ ಇಬ್ಬರು ರಿಸರ್ವ್ ಸಬ್ ಇನ್ಸ್ಪೆಕ್ಟರ್ (ಆರ್ಎಸ್ಐ) ಕಾರ್ಯನಿರ್ವಹಿಸಲಿದ್ದಾರೆ. ಮುಂದಿನ ಹಂತದಲ್ಲಿ ಇನ್ನೂ ಎರಡು ತಂಡಗಳಿಗೆ ತರಬೇತಿ ನೀಡಲಾಗುವುದು’ ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರದಲ್ಲಿ ಅಹಿತಕರ ಘಟನೆಗಳು, ವಿಶೇಷ ಕರ್ತವ್ಯ ಹಾಗೂ ತುರ್ತು ಸಂದರ್ಭಗಳಲ್ಲಿ ತ್ವರಿತವಾಗಿ ಸ್ಪಂದಿಸಲು ನುರಿತ(ಸ್ವ್ಯಾಟ್) ತಂಡಗಳನ್ನು ರಚಿಸಿ, ತರಬೇತಿ ನೀಡಿ ಪೊಲೀಸ್ ಇಲಾಖೆ ಸನ್ನದ್ಧಗೊಳಿಸಿದೆ.</p>.<p>ಇದಕ್ಕಾಗಿ ಸಿಎಆರ್ ಘಟಕಗಳಿಂದ ಒಟ್ಟು 120 ಸಿಬ್ಬಂದಿಯನ್ನು ಆಯ್ಕೆ ಮಾಡಲಾಗಿದೆ. ಈ ತಂಡಕ್ಕೆಭಯೋತ್ಪಾದನೆ ನಿಗ್ರಹ ಕೇಂದ್ರವು(ಸಿಸಿಟಿ) ಅಗರದ ಆಂತರಿಕ ಭದ್ರತೆ ವಿಭಾಗದಲ್ಲಿ ಎಂಟು ವಾರಗಳ ವಿಶೇಷ ತರಬೇತಿ ನೀಡಿದೆ.</p>.<p>‘ಭಯೋತ್ಪಾದಕ ಮತ್ತು ನಕ್ಸಲ್ ಕೃತ್ಯಗಳು, ಸಮಾಜ ವಿರೋಧಿ ಚಟುವಟಿಕೆಗಳು, ಅಂತರರಾಷ್ಟ್ರೀಯ ಮಹತ್ವವುಳ್ಳ ಕಾರ್ಯಕ್ರಮಗಳ ಭದ್ರತೆ ಹಾಗೂ ಆಧುನಿಕ ಆಯುಧಗಳ ಬಗ್ಗೆ ಈ ವಿಶೇಷ ತಂಡಗಳಿಗೆ ತರಬೇತಿ ನೀಡಲಾಗಿದೆ’ ಎಂದುಸಿಸಿಬಿ ಜಂಟಿ ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ ತಿಳಿಸಿದರು.</p>.<p>‘ತರಬೇತಿ ಪಡೆದವರನ್ನು ನಾಲ್ಕು ತಂಡಗಳಾಗಿ ವಿಭಜಿಸಿ, ನಗರದಲ್ಲಿ ಅಗತ್ಯವಿರುವ ಸ್ಥಳಗಳಿಗೆ ನಿಯೋಜಿಸಲಾಗಿದೆ.ಪ್ರತಿ ತಂಡದಲ್ಲಿ 30 ಸಿಬ್ಬಂದಿ ಹಾಗೂ ಇಬ್ಬರು ರಿಸರ್ವ್ ಸಬ್ ಇನ್ಸ್ಪೆಕ್ಟರ್ (ಆರ್ಎಸ್ಐ) ಕಾರ್ಯನಿರ್ವಹಿಸಲಿದ್ದಾರೆ. ಮುಂದಿನ ಹಂತದಲ್ಲಿ ಇನ್ನೂ ಎರಡು ತಂಡಗಳಿಗೆ ತರಬೇತಿ ನೀಡಲಾಗುವುದು’ ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>