ಸ್ವಿಗ್ಗಿ ಡೆಲಿವರಿ ಬಾಯ್ ಕೆಲಸ ಮಾಡುತ್ತಿದ್ದ ಮಂಜುನಾಥ್ ಅವರು ರಾತ್ರಿ 12.30ರ ಸುಮಾರಿಗೆ ಬೈಕ್ನಲ್ಲಿ ಮನೆಗೆ ಮರಳುತ್ತಿದ್ದರು. ಅದೇ ವೇಳೆಯಲ್ಲಿ ಮೊಹಮ್ಮದ್ ಹನೀಫ್ ಅವರು ಚಲಾಯಿಸುತ್ತಿದ್ದ ಬೈಕ್, ಚೊಕ್ಕನಹಳ್ಳಿ ಕ್ರಾಸ್ ಬಳಿ ಮಂಜುನಾಥ್ ಬೈಕ್ಗೆ ಡಿಕ್ಕಿಯಾಗಿದೆ. ಗಂಭೀರ ಸ್ಥಿತಿಯಲ್ಲಿದ್ದ ಮಂಜುನಾಥ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹೆಬ್ಬಾಳದ ಆಸ್ಪತ್ರೆಗೆ ಕರೆದೊಯ್ದರೂ ಪ್ರಯೋಜನ ಆಗಲಿಲ್ಲ. ಚಿಕ್ಕಜಾಲ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.