ಜಿ.ಟಿ.ದೇವೇಗೌಡರು ಉನ್ನತ ಶಿಕ್ಷಣ ಸಚಿವರಾದ ಬಳಿಕ ತೆಗೆದುಕೊಂಡ ನಿರ್ಧಾರಗಳಲ್ಲಿ ಇದೂ ಒಂದಾಗಿತ್ತು. ಹಿಂದಿನ ಸರ್ಕಾರ ನೇಮಿಸಿದವರನ್ನು ಕಿತ್ತು ಹಾಕುವುದು ಅನೂಚಾನವಾಗಿ ನಡೆದುಬಂದ ಪದ್ಧತಿ. ಒಂದೇ ಪಕ್ಷ ಅಧಿಕಾರದಲ್ಲಿದ್ದಾಗ ತಮಗೆ ಬೇಕಾದವರನ್ನು ನೇಮಕ ಮಾಡಲಾಗುತ್ತಿತ್ತು. ಮೈತ್ರಿ ಸರ್ಕಾರ ಬಂದ ಬಳಿಕ, ಸಿಂಡಿಕೇಟ್ ಸದಸ್ಯರಾಗಿ ನೇಮಕವಾಗಲು ಎರಡೂ ಪಕ್ಷಗಳಲ್ಲಿ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಯಿತು. ಯಾವ ಪಕ್ಷದವರನ್ನು ನಾಮನಿರ್ದೇಶನ ಮಾಡಬೇಕು ಎಂಬ ಗೊಂದಲ, ಒಂದು ವೇಳೆ ನಾಮನಿರ್ದೇಶನ ಮಾಡಿದರೆ ಉಂಟಾಗಬಹುದಾದ ಪರ–ವಿರೋಧದ ಪರಿಣಾಮದ ಕಾರಣಕ್ಕೆ ಈ ಪ್ರಕ್ರಿಯೆ ನನೆಗುದಿಗೆ ಬಿದ್ದಿದೆ ಎಂದು ಹೇಳಲಾಗುತ್ತಿದೆ.