ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿರಿಯ ಛಾಯಾಗ್ರಾಹಕ ಟಿ.ಎಲ್.ರಾಮಸ್ವಾಮಿ ನಿಧನ

Last Updated 3 ಏಪ್ರಿಲ್ 2020, 14:55 IST
ಅಕ್ಷರ ಗಾತ್ರ

ಬೆಂಗಳೂರು: ಹಿರಿಯ ಛಾಯಾಗ್ರಾಹಕ ಟಿ.ಎಲ್. ರಾಮಸ್ವಾಮಿ (89) ಅವರು ಶುಕ್ರವಾರ ಬೆಳಿಗ್ಗೆ ನಿಧನರಾದರು. ಅವರಿಗೆ ಪತ್ನಿ ಹಾಗೂ ಇಬ್ಬರು ಪುತ್ರ ಇದ್ದಾರೆ. ಬನಶಂಕರಿಯಲ್ಲಿ ಅಂತ್ಯಕ್ರಿಯೆ ನೆರವೇರಿತು ಎಂದು ಕುಟುಂಬದವರು ತಿಳಿಸಿದರು.

1950ರಿಂದ 1985ರವರೆಗೆ ‘ಡೆಕ್ಕನ್ ಹೆರಾಲ್ಡ್’ ಹಾಗೂ ‘ಪ್ರಜಾವಾಣಿ’ ಪತ್ರಿಕೆಗೆ ರಾಮಸ್ವಾಮಿ ಅವರು ನಿಯಮಿತವಾಗಿ ಚಿತ್ರಗಳನ್ನು ಒದಗಿಸುತ್ತಿದ್ದರು.

ಜಪಾನ್‌ನ ನಿಹಾನ್ ಸಿನ್‌ಬುನ್ ಕ್ಯೊಕಾಯಿ ಸಂಸ್ಥೆ ಮತ್ತು ಲಂಡನ್‌ನ ಥಾಮ್ಸನ್ ಪ್ರತಿಷ್ಠಾನದಿಂದ ಛಾಯಾಚಿತ್ರಕಲೆಯಲ್ಲಿ ಡಿಪ್ಲೊಮಾ ಪಡೆದಿದ್ದರು.ಜಪಾನ್‌ನ ಅಸಾಹಿ ಶಿನ್‌ಬುನ್, ಮೈನಿಚಿ ಶಿನ್‌ಬುನ್, ಯೊಮಿಯುರಿ ಮತ್ತು ಕ್ಯೋಟೋ ಶಿನ್‌ಬುನ್ ಪತ್ರಿಕೆಗಳಲ್ಲೂ ಕೆಲಸ ಮಾಡಿದ್ದರು.

ರಾಜ್ಯದ ಮೊದಲ ಸುದ್ದಿ ಛಾಯಾಗ್ರಾಹಕರಾಗಿದ್ದ ಇವರಿಗೆ ರಾಜ್ಯೋತ್ಸವ ಪ್ರಶಸ್ತಿ ಹಾಗೂ ಮಾಧ್ಯಮ ಅಕಾಡೆಮಿ ಗೌರವ ಪ್ರಶಸ್ತಿ ಲಭಿಸಿತ್ತು. ರಾಜ್ಯ ಕ್ರಿಕೆಟ್ ಅಸೋಸಿಯೇಷನ್‌ನ ಆಜೀವ ಸದಸ್ಯರೂ ಆಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT