<p><strong>ಬೆಂಗಳೂರು</strong>: ‘ನಮ್ಮದು ಹೇಡಿ ಸರ್ಕಾರವಲ್ಲ, ರಾಜಾ ಹುಲಿ ಸರ್ಕಾರ. ಪಿಎಫ್ಐ, ಎಸ್ಡಿಪಿಐ ಸಂಘಟನೆಗಳನ್ನು ಹತ್ತಿಕ್ಕುವ ಕೆಲಸ ಮಾಡುತ್ತೇವೆ’ ಎಂದು ಸರ್ಕಾರದ ಮುಖ್ಯ ಸಚೇತಕ ಸುನಿಲ್ ಕುಮಾರ್ ಹೇಳಿದರು.</p>.<p>ವಿಧಾನಸಭೆಯಲ್ಲಿ ಮಂಗಳೂರು ಗೋಲಿಬಾರ್ ಪ್ರಕರಣದ ಕುರಿತು ಮಾತನಾಡಿದ ಅವರು, ವಿರೋಧ ಪಕ್ಷಗಳು ಈ ಸಂಘಟನೆಗಳ ಪರವಾಗಿ ಮಾತನಾಡುವ ಮೂಲಕ ಪೊಲೀಸರ ಸ್ಥೈರ್ಯ ಕುಗ್ಗಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಹರಿಹಾಯ್ದರು.</p>.<p>‘ಪ್ರಕರಣದ ಬಗ್ಗೆ ಮ್ಯಾಜಿಸ್ಟ್ರೇಟ್ ತನಿಖೆ ಮುಗಿಯುವ ಮೊದಲೇವಿರೋಧ ಪಕ್ಷದವರು ಗಲಭೆಕೋರರಿಗೆ ಅಮಾಯಕರು ಎಂಬ ಪ್ರಮಾಣ ಪತ್ರವನ್ನು ನೀಡಿದ್ದಾರೆ. ಗಲಭೆ ಹಿಂದಿನ ಶಕ್ತಿಗಳು ಸೌದಿ ಅರೇಬಿಯಾದಲ್ಲಿದ್ದು, ಅವರು ನಮಗೆ ದೂರವಾಣಿ ಕರೆ ಮಾಡಿ ಜೀವ ಬೆದರಿಕೆ ಹಾಕುತ್ತಿದ್ದಾರೆ. ಈ ರೀತಿ ಬೆದರಿಕೆ ಹಾಕುತ್ತಿರುವವರು ಯಾರು? ಇವರನ್ನು ನೀವು ಏಕೆ ಸಮರ್ಥಿಸುತ್ತೀರಿ’ ಎಂದು ಸುನಿಲ್ ಪ್ರಶ್ನಿಸಿದರು.</p>.<p>ಆಗ ಮಧ್ಯ ಪ್ರವೇಶಿದ ಹಿರಿಯ ಶಾಸಕ ಆರ್.ವಿ.ದೇಶಪಾಂಡೆ, ‘ದೇಶದ್ರೋಹಿ ಸಂಘಟನೆಗಳಿಗೆ ಅದರಲ್ಲೂ ಪಿಎಫ್ಐಗೆ ಬೆಂಬಲ ನೀಡುವ ಪ್ರಶ್ನೆಯೇ ಇಲ್ಲ’ ಎಂದು ಸ್ಪಷ್ಟಪಡಿಸಿದರು.</p>.<p>‘ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಎರಡು– ಮೂರು ಸಂಘಟನೆಗಳು ಅಶಾಂತಿಯ ವಾತಾವರಣ ಸೃಷ್ಟಿಸಿವೆ.ಡಿ.17 ರಂದು ಕಾಂಗ್ರೆಸ್ ಶಾಸಕ ಖಾದರ್ ಅವರು ಸಿಎಎ ಜಾರಿ ಮಾಡಿದರೆ ದೇಶ ಹೊತ್ತಿ ಉರಿಯುತ್ತದೆ ಎಂದು ಹೇಳಿಕೆ ನೀಡಿದ್ದೇ ಡಿ.19ರ ಗಲಭೆಗೆ ಪ್ರಚೋದನೆ ಆಯಿತು. ಆ ಗಲಭೆಗೆ ಪಿಎಫ್ಐ ಮತ್ತು ಎಸ್ಡಿಪಿಐ ಕಾರಣವಾಗಿವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ನಮ್ಮದು ಹೇಡಿ ಸರ್ಕಾರವಲ್ಲ, ರಾಜಾ ಹುಲಿ ಸರ್ಕಾರ. ಪಿಎಫ್ಐ, ಎಸ್ಡಿಪಿಐ ಸಂಘಟನೆಗಳನ್ನು ಹತ್ತಿಕ್ಕುವ ಕೆಲಸ ಮಾಡುತ್ತೇವೆ’ ಎಂದು ಸರ್ಕಾರದ ಮುಖ್ಯ ಸಚೇತಕ ಸುನಿಲ್ ಕುಮಾರ್ ಹೇಳಿದರು.</p>.<p>ವಿಧಾನಸಭೆಯಲ್ಲಿ ಮಂಗಳೂರು ಗೋಲಿಬಾರ್ ಪ್ರಕರಣದ ಕುರಿತು ಮಾತನಾಡಿದ ಅವರು, ವಿರೋಧ ಪಕ್ಷಗಳು ಈ ಸಂಘಟನೆಗಳ ಪರವಾಗಿ ಮಾತನಾಡುವ ಮೂಲಕ ಪೊಲೀಸರ ಸ್ಥೈರ್ಯ ಕುಗ್ಗಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಹರಿಹಾಯ್ದರು.</p>.<p>‘ಪ್ರಕರಣದ ಬಗ್ಗೆ ಮ್ಯಾಜಿಸ್ಟ್ರೇಟ್ ತನಿಖೆ ಮುಗಿಯುವ ಮೊದಲೇವಿರೋಧ ಪಕ್ಷದವರು ಗಲಭೆಕೋರರಿಗೆ ಅಮಾಯಕರು ಎಂಬ ಪ್ರಮಾಣ ಪತ್ರವನ್ನು ನೀಡಿದ್ದಾರೆ. ಗಲಭೆ ಹಿಂದಿನ ಶಕ್ತಿಗಳು ಸೌದಿ ಅರೇಬಿಯಾದಲ್ಲಿದ್ದು, ಅವರು ನಮಗೆ ದೂರವಾಣಿ ಕರೆ ಮಾಡಿ ಜೀವ ಬೆದರಿಕೆ ಹಾಕುತ್ತಿದ್ದಾರೆ. ಈ ರೀತಿ ಬೆದರಿಕೆ ಹಾಕುತ್ತಿರುವವರು ಯಾರು? ಇವರನ್ನು ನೀವು ಏಕೆ ಸಮರ್ಥಿಸುತ್ತೀರಿ’ ಎಂದು ಸುನಿಲ್ ಪ್ರಶ್ನಿಸಿದರು.</p>.<p>ಆಗ ಮಧ್ಯ ಪ್ರವೇಶಿದ ಹಿರಿಯ ಶಾಸಕ ಆರ್.ವಿ.ದೇಶಪಾಂಡೆ, ‘ದೇಶದ್ರೋಹಿ ಸಂಘಟನೆಗಳಿಗೆ ಅದರಲ್ಲೂ ಪಿಎಫ್ಐಗೆ ಬೆಂಬಲ ನೀಡುವ ಪ್ರಶ್ನೆಯೇ ಇಲ್ಲ’ ಎಂದು ಸ್ಪಷ್ಟಪಡಿಸಿದರು.</p>.<p>‘ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಎರಡು– ಮೂರು ಸಂಘಟನೆಗಳು ಅಶಾಂತಿಯ ವಾತಾವರಣ ಸೃಷ್ಟಿಸಿವೆ.ಡಿ.17 ರಂದು ಕಾಂಗ್ರೆಸ್ ಶಾಸಕ ಖಾದರ್ ಅವರು ಸಿಎಎ ಜಾರಿ ಮಾಡಿದರೆ ದೇಶ ಹೊತ್ತಿ ಉರಿಯುತ್ತದೆ ಎಂದು ಹೇಳಿಕೆ ನೀಡಿದ್ದೇ ಡಿ.19ರ ಗಲಭೆಗೆ ಪ್ರಚೋದನೆ ಆಯಿತು. ಆ ಗಲಭೆಗೆ ಪಿಎಫ್ಐ ಮತ್ತು ಎಸ್ಡಿಪಿಐ ಕಾರಣವಾಗಿವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>