‘ಪ್ರಕರಣದ ಬಗ್ಗೆ ಮ್ಯಾಜಿಸ್ಟ್ರೇಟ್ ತನಿಖೆ ಮುಗಿಯುವ ಮೊದಲೇವಿರೋಧ ಪಕ್ಷದವರು ಗಲಭೆಕೋರರಿಗೆ ಅಮಾಯಕರು ಎಂಬ ಪ್ರಮಾಣ ಪತ್ರವನ್ನು ನೀಡಿದ್ದಾರೆ. ಗಲಭೆ ಹಿಂದಿನ ಶಕ್ತಿಗಳು ಸೌದಿ ಅರೇಬಿಯಾದಲ್ಲಿದ್ದು, ಅವರು ನಮಗೆ ದೂರವಾಣಿ ಕರೆ ಮಾಡಿ ಜೀವ ಬೆದರಿಕೆ ಹಾಕುತ್ತಿದ್ದಾರೆ. ಈ ರೀತಿ ಬೆದರಿಕೆ ಹಾಕುತ್ತಿರುವವರು ಯಾರು? ಇವರನ್ನು ನೀವು ಏಕೆ ಸಮರ್ಥಿಸುತ್ತೀರಿ’ ಎಂದು ಸುನಿಲ್ ಪ್ರಶ್ನಿಸಿದರು.