‘ಸುಬ್ರಹ್ಮಣ್ಯನಗರ ಠಾಣೆ ವ್ಯಾಪ್ತಿಯ ಗಾಯತ್ರಿನಗರದ ಮುಖ್ಯರಸ್ತೆಯಲ್ಲಿ ನಿಂತಿದ್ದ ಆರೋಪಿ, ಕ್ರಿಕೆಟ್ ಪಂದ್ಯಗಳ ಸೋಲು– ಗೆಲುವು ಲೆಕ್ಕಾಚಾರದಲ್ಲಿ ಜನರಿಂದ ಬೆಟ್ಟಿಂಗ್ ಕಟ್ಟಿಸಿಕೊಳ್ಳುತ್ತಿದ್ದ. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ದಾಳಿ ಮಾಡಿ ಬಂಧಿಸಲಾಯತು. ಪ್ರಕರಣದಲ್ಲಿ ಮತ್ತಷ್ಟು ಮಂದಿ ಭಾಗಿಯಾಗಿದ್ದು, ಪತ್ತೆ ಮಾಡಲಾಗುತ್ತಿದೆ. ಬಂಧಿತ ಆರೋಪಿ ಹೆಸರು ಬಹಿರಂಗಪಡಿಸಲಾಗದು’ ಎಂದು ಪೊಲೀಸರು ಹೇಳಿದರು.