ಗ್ರಾಮ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಬಸವರಾಜು ಆರ್.ಶ್ರೇಷ್ಠ, ‘ಶಿಕ್ಷಣದ ಮೂಲಕ ಜನರನ್ನು ಒಗ್ಗೂಡಿಸಿದಾಗ ಮಾತ್ರ ರಾಷ್ಟ್ರ ನಿರ್ಮಾಣದ ಕೆಲಸ ಸುಲಭವಾಗುತ್ತದೆ. ಸರ್ಕಾರಿ ಶಾಲೆಯ ಮಕ್ಕಳ ಶಿಕ್ಷಣಕ್ಕಾಗಿ ತಂತ್ರಜ್ಞಾನದ ಸಹಾಯ ಅಗತ್ಯವಿದೆ. ಅದನ್ನು ಆಲೋಚಿಸಿ ಟ್ಯಾಬ್ಗಳನ್ನು ನೀಡಲಾಗಿದೆ. ವಿದ್ಯಾರ್ಥಿಗಳು ಅವುಗಳನ್ನು ಬಳಸಿಕೊಂಡು ಶೈಕ್ಷಣಿಕವಾಗಿ ಮುಂದೆ ಬರಬೇಕು’ ಎಂದು ತಿಳಿಸಿದರು.