ಬೆಂಗಳೂರು: ಕೇಂದ್ರ ಸರ್ಕಾರದ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವಾಲಯವು ಸಾಂಸ್ಕೃತಿಕ ಸಾಮರಸ್ಯಕ್ಕೆ ‘ಟ್ಯಾಗೋರ್ ಪ್ರಶಸ್ತಿ’ ನೀಡಲಿದ್ದು,ರಾಜ್ಯದಿಂದ ನಾಮನಿರ್ದೇಶನ ಕಳುಹಿಸಿಕೊಡಲು ರಾಜ್ಯಪಾಲರು ಸೂಚಿಸಿದ್ದಾರೆ.
ರವೀಂದ್ರನಾಥ ಟ್ಯಾಗೂರ್ ಅವರ 150ನೇ ಜನ್ಮದಿನೋತ್ಸವದ ಅಂಗವಾಗಿ 2012ರಲ್ಲಿ ಕೇಂದ್ರ ಸರ್ಕಾರದಿಂದ ಈ ಪ್ರಶಸ್ತಿ ಸ್ಥಾಪಿತವಾಗಿದೆ. ₹ 1 ಕೋಟಿ ನಗದು ಹೊಂದಿದೆ.
ಅರ್ಹವ್ಯಕ್ತಿ, ಸಂಘ ಸಂಸ್ಥೆಗಳಿಂದ ಪ್ರಸ್ತಾವನೆಗಳನ್ನು ಆಹ್ವಾನಿಸಿ ಶಿಫಾರಸು ಮಾಡಲು ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಆರ್.ವೇಣುಗೋಪಾಲ್ ಅಧ್ಯಕ್ಷತೆಯಲ್ಲಿರಾಜ್ಯದ ಇತರ ಮೂವರು ವಿಶ್ವವಿದ್ಯಾಲಯಗಳ ಕುಲಪತಿಗಳನ್ನೊಳಗೊಂಡ ಸಮಿತಿಯನ್ನು ರಾಜ್ಯಪಾಲರು ರಚಿಸಿದ್ದಾರೆ.