ಕೆ.ಆರ್.ಪುರ: ನೀರಿನ ಅಭಾವ ತಡೆಯಲು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಜಲಮಂಡಳಿ ಅಧಿಕಾರಿಗಳಿಗೆ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಸೂಚಿಸಿದರು.
ಕ್ಷೇತ್ರದ ಎ.ನಾರಾಯಣಪುರದಲ್ಲಿ ಜಲಮಂಡಳಿಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ರ ನೂತನ ಕಚೇರಿ ಉದ್ಘಾಟಿಸಿ ಅವರು ಮಾತನಾಡಿದರು.
ಬೇಸಿಗೆ ಸನ್ನಹಿತವಾಗಿರುವ ಹಿನ್ನೆಲೆ ಕ್ಷೇತ್ರದಲ್ಲಿ ನೀರಿನ ಅಭಾವ ಬಾರದಂತೆ ಮುನ್ನೆಚ್ಚೆರಿಕಾ ಕ್ರಮಗಳನ್ನ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಸಾರ್ವಜನಿಕರು ಕೂಡಾ ಅನಾವಶ್ಯಕವಾಗಿ ನೀರನ್ನು ಪೋಲು ಮಾಡದೇ ಮಿತವಾಗಿ ಬಳಸುವಂತೆ ಮನವಿ ಮಾಡಿದರು.
ರಾಜ್ಯ ಬಿಜೆಪಿ ಮಹಿಳಾಮೋರ್ಚಾ ಅಧ್ಯಕ್ಷೆ ಗೀತಾ ವಿವೇಕಾನಂದ ಬಾಬು, ಸುರೇಶ್, ಎಸ್ .ಜಿ.ನಾಗರಾಜ್, ಅಧಿಕಾರಿಗಳಾದ ವೆಂಕಟೇಶ್, ಪ್ರದೀಪ್, ವೆಂಕಟರಮಣಪ್ಪ, ಎಸ್. ಸಿ. ನಾಯಕ್ ಮತ್ತಿತರರಿದ್ದರು.