<p><strong>ಬೆಂಗಳೂರು:</strong>ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿ, ಅವನ ಸಹೋದರಿಗೆಬೆದರಿಕೆ ಹಾಕಿದ ಘಟನೆ ನಡೆದ ನಗರದ ಕೋರಮಂಗಲದ ಆಡುಗೋಡಿಯ ಖಾಸಗಿ ಶಾಲೆಗೆ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಶನಿವಾರ ದಿಢೀರ್ ಬೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ಈ ರೀತಿಯ ಘಟನೆ ಮರುಕಳಿಸಿದರೆ ಶಾಲೆಯ ಮಾನ್ಯತೆಯನ್ನೇ ರದ್ದುಪಡಿಸಿ, ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಖಡಕ್ ಎಚ್ಚರಿಕೆ ನೀಡಿದರು.</p>.<p>ಶಿಕ್ಷಕಿಯೊಬ್ಬರು 7ನೇ ತರಗತಿ ವಿದ್ಯಾರ್ಥಿಯ ತಲೆಗೆ ಡಸ್ಟರ್ನಿಂದ ರಕ್ತ ಸುರಿಯುಂತೆ ಹೊಡೆದಿದ್ದಲ್ಲದೆ, ಅದೇ ಶಾಲೆಯಲ್ಲಿ ಓದುತ್ತಿರುವ ಆತನ ಅಕ್ಕನಿಗೆ ವಿಷಯವನ್ನು ಯಾರಿಗಾದರೂ ತಿಳಿಸಿದರೆ ಶಾಲೆಯಿಂದ ಹೊರಹಾಕುವುದಾಗಿ ಶಾಲಾ ಆಡಳಿತ ವರ್ಗವೇ ಬೆದರಿಕೆ ಹಾಕಿದೆ. ಈ ಬಗ್ಗೆ ಪತ್ರಿಕಾ ವರದಿಗಳನ್ನು ಗಮನಿಸಿ ಶನಿವಾರ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದರು.</p>.<p>ಹಲ್ಲೆಗೊಳಗಾದ ವಿದ್ಯಾರ್ಥಿ, ಆತನ ಸಹೋದರಿ, ತಾಯಿ ಮತ್ತು ಅಜ್ಜಿಯೊಂದಿಗೆ ಮಾತನಾಡಿ ಶಾಲೆಯಲ್ಲಿ ನಡೆದ ಘಟನೆಯಬಗ್ಗೆ ಸಚಿವರು ಮಾಹಿತಿ ಪಡೆದರು. ಆ ಶಾಲೆಯ ಶಿಕ್ಷಕರೊಬ್ಬರು ವಿದ್ಯಾರ್ಥಿಯ ಸೋದರಿ ಜೊತೆ ಅಶ್ಲೀಲವಾಗಿ ಮಾತನಾಡಿದ್ದನ್ನು ಗಂಭೀರವಾಗಿ ಪರಿಗಣಿಸಿ ಆ ಶಿಕ್ಷಕರನ್ನು ಕೆಲಸದಿಂದ ವಜಾ ಮಾಡುವಂತೆ ಆಡಳಿತ ಮಂಡಳಿಗೆ ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿ, ಅವನ ಸಹೋದರಿಗೆಬೆದರಿಕೆ ಹಾಕಿದ ಘಟನೆ ನಡೆದ ನಗರದ ಕೋರಮಂಗಲದ ಆಡುಗೋಡಿಯ ಖಾಸಗಿ ಶಾಲೆಗೆ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಶನಿವಾರ ದಿಢೀರ್ ಬೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ಈ ರೀತಿಯ ಘಟನೆ ಮರುಕಳಿಸಿದರೆ ಶಾಲೆಯ ಮಾನ್ಯತೆಯನ್ನೇ ರದ್ದುಪಡಿಸಿ, ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಖಡಕ್ ಎಚ್ಚರಿಕೆ ನೀಡಿದರು.</p>.<p>ಶಿಕ್ಷಕಿಯೊಬ್ಬರು 7ನೇ ತರಗತಿ ವಿದ್ಯಾರ್ಥಿಯ ತಲೆಗೆ ಡಸ್ಟರ್ನಿಂದ ರಕ್ತ ಸುರಿಯುಂತೆ ಹೊಡೆದಿದ್ದಲ್ಲದೆ, ಅದೇ ಶಾಲೆಯಲ್ಲಿ ಓದುತ್ತಿರುವ ಆತನ ಅಕ್ಕನಿಗೆ ವಿಷಯವನ್ನು ಯಾರಿಗಾದರೂ ತಿಳಿಸಿದರೆ ಶಾಲೆಯಿಂದ ಹೊರಹಾಕುವುದಾಗಿ ಶಾಲಾ ಆಡಳಿತ ವರ್ಗವೇ ಬೆದರಿಕೆ ಹಾಕಿದೆ. ಈ ಬಗ್ಗೆ ಪತ್ರಿಕಾ ವರದಿಗಳನ್ನು ಗಮನಿಸಿ ಶನಿವಾರ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದರು.</p>.<p>ಹಲ್ಲೆಗೊಳಗಾದ ವಿದ್ಯಾರ್ಥಿ, ಆತನ ಸಹೋದರಿ, ತಾಯಿ ಮತ್ತು ಅಜ್ಜಿಯೊಂದಿಗೆ ಮಾತನಾಡಿ ಶಾಲೆಯಲ್ಲಿ ನಡೆದ ಘಟನೆಯಬಗ್ಗೆ ಸಚಿವರು ಮಾಹಿತಿ ಪಡೆದರು. ಆ ಶಾಲೆಯ ಶಿಕ್ಷಕರೊಬ್ಬರು ವಿದ್ಯಾರ್ಥಿಯ ಸೋದರಿ ಜೊತೆ ಅಶ್ಲೀಲವಾಗಿ ಮಾತನಾಡಿದ್ದನ್ನು ಗಂಭೀರವಾಗಿ ಪರಿಗಣಿಸಿ ಆ ಶಿಕ್ಷಕರನ್ನು ಕೆಲಸದಿಂದ ವಜಾ ಮಾಡುವಂತೆ ಆಡಳಿತ ಮಂಡಳಿಗೆ ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>