ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸಿದ್ಧರಾಮಯ್ಯ,ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ. ನಾರಾಯಣಗೌಡ ಒತ್ತಡ ಹೇರಿದ ಬಳಿಕ ಪೊಲೀಸರೇ ಅದನ್ನು ತೆರವುಗೊಳಿಸಿದ್ದರು. ಅದಾದ ಎರಡು ದಿನಗಳಲ್ಲಿ ಮತ್ತೆ ಅದೇ ಸ್ಥಳದಲ್ಲಿ ತಮಿಳು ಭಾಷೆ ಒಳಗೊಂಡ ಮತ್ತೊಂದು ಫಲಕ ತಲೆ ಎದ್ದಿತ್ತು. ಇದರಿಂದ ಆಕ್ರೋಶಗೊಂಡ ಕನ್ನಡ ಒಕ್ಕೂಟದ ನಾಗೇಶ್, ಕರವೇ ಪ್ರವೀಣ್ಕುಮಾರ್ ಶೆಟ್ಟಿ, ಜಯಕರ್ನಾಟಕ ಸಂಘಟನೆ ಮುಖಂಡರು, ಕೂಡಲೇ ಫಲಕ ತೆರವುಗೊಳಿಸಬೇಕು ಎಂದು ಪಟ್ಟು ಹಿಡಿದು ಪ್ರತಿಭಟನೆಗೆ ಮುಂದಾದರು.