ವಿಶ್ವಸಂಸ್ಥೆಯು ಜಿನಿವಾದಲ್ಲಿ ನಡೆಸಿದ ಮಾನವ ಹಕ್ಕುಗಳ ಕೌನ್ಸಿಲ್ ಸಭೆಯಲ್ಲಿ ಪಾಲ್ಗೊಂಡಿದ್ದ ತಿರುಮುರುಗನ್, ಅಲ್ಲಿಂದ ಗುರುವಾರ ಚೆನ್ನೈಗೆ ಮರಳುತ್ತಿದ್ದರು. ಈ ಬಗ್ಗೆ ಮಾಹಿತಿ ಸಂಗ್ರಹಿಸಿದ್ದ ತಮಿಳುನಾಡು ಪೊಲೀಸರು, ಕೆಐಎಎಲ್ ಹಾಗೂ ಚೆನ್ನೈ ವಿಮಾನ ನಿಲ್ದಾಣ ಅಧಿಕಾರಿಗಳಿಗೆ ಮಾಹಿತಿ ರವಾನಿಸಿದ್ದರು. ಆ ಸುಳಿವು ಆಧರಿಸಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.