ಬೆಂಗಳೂರು: ರಾಜಾಜಿನಗರ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ಅಪ ಘಾತ ಸಂಭವಿಸಿದ್ದು, ನೀರಿನ ಟ್ಯಾಂಕರ್ ಚಕ್ರ ಮೈ ಮೇಲೆ ಹರಿದು ಎಚ್.ಎಸ್. ಆಶಾ (35) ಎಂಬುವರು ಮೃತಪಟ್ಟಿದ್ದಾರೆ.
‘ಲಗ್ಗೆರೆ ನಿವಾಸಿ ಆಶಾ, ಕಿಮ್ಸ್ ಆಸ್ಪತ್ರೆಯಲ್ಲಿ ಶುಶ್ರೂಷಕಿ ಆಗಿ ಕೆಲಸ ಮಾಡು ತ್ತಿದ್ದರು. ಮಂಗಳವಾರ ಬೆಳಿಗ್ಗೆ 10.30ರ ಸುಮಾರಿಗೆ ದ್ವಿಚಕ್ರ ವಾಹನದಲ್ಲಿ ಹೊರ ಟಿದ್ದಾಗ ಈ ಅವಘಡ ಸಂಭವಿಸಿದೆ’ ಎಂದು ಪೊಲೀಸರು ಹೇಳಿದರು.
‘ಆಶಾ ಅವರು ಕೆಲಸದ ನಿಮಿತ್ತ ಮನೆಯಿಂದ ಹೊರಗಡೆ ಬಂದಿದ್ದರು. ಕೆಲಸ ಮುಗಿಸಿ, ಲಗ್ಗೆರೆ ಬಸ್ ತಂಗುದಾಣ ಬಳಿಯ ಗ್ರೇಸ್ ಪಬ್ಲಿಕ್ ಸ್ಕೂಲ್ ಮುಂಭಾಗದ ರಸ್ತೆ ಮೂಲಕ ದ್ವಿಚಕ್ರ ವಾಹನದಲ್ಲಿ ಮನೆಯತ್ತ ಹೊರಟಿದ್ದರು. ಅದೇ ಮಾರ್ಗದಲ್ಲಿ ಬಂದ ನೀರಿನ ಟ್ಯಾಂಕರ್, ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿತ್ತು.’
‘ದ್ವಿಚಕ್ರ ವಾಹನದ ಸಮೇತ ಕೆಳಗೆ ಬಿದ್ದ ಆಶಾ ಅವರ ಮೈ ಮೇಲೆಯೇ ಟ್ಯಾಂಕರ್ ಚಕ್ರ ಹರಿದಿತ್ತು. ತೀವ್ರ ಗಾಯಗೊಂಡು ಅವರು ಮೃತಪಟ್ಟಿ ದ್ದಾರೆ’ ಎಂದು ತಿಳಿಸಿದರು.
ಮೊಬೈಲ್ ಬಳಕೆಯಿಂದ ಅಪಘಾತ: ‘ಅಪಘಾತ ಸಂಭವಿಸುತ್ತಿದ್ದಂತೆ ಟ್ಯಾಂಕರ್ ಬಿಟ್ಟು ಚಾಲಕ ಪರಾರಿಯಾಗಿ ದ್ದಾನೆ. ಅಪಘಾತದ ದೃಶ್ಯ ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅದರ ಆಧಾರದಲ್ಲಿ ಚಾಲಕನನ್ನು ಪತ್ತೆ ಮಾಡ ಲಾಗುತ್ತಿದೆ’ ಎಂದು ಹೇಳಿದರು.
‘ಚಾಲಕ ಮೊಬೈಲ್ ನೋಡುತ್ತ ಚಾಲನೆ ಮಾಡುತ್ತಿದ್ದನೆಂದು ಸ್ಥಳೀಯರು ಹೇಳುತ್ತಿದ್ದಾರೆ. ಇದರಿಂದಲೇ ಅಪಘಾತ ಸಂಭವಿಸಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ಚಾಲಕ ಪತ್ತೆಯಾದ ನಂತರ ಮತ್ತಷ್ಟು ಮಾಹಿತಿ ಲಭ್ಯವಾಗಲಿದೆ’ ಎಂದೂ ತಿಳಿಸಿದರು.