<p><strong>ಬೆಂಗಳೂರು</strong>: ಟ್ಯಾಂಕರ್ ವಾಹನ ಚಾಲಕರಿಂದ ಮೇಲಿಂದ ಮೇಲೆ ಅಪಘಾತಗಳು ಸಂಭವಿಸುತ್ತಿದ್ದು, ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಟ್ಯಾಂಕರ್ ಮಾಲೀಕರಿಗೆ ಪೊಲೀಸರು ಖಡಕ್ ಎಚ್ಚರಿಕೆ ನೀಡಿದ್ದಾರೆ.</p>.<p>ಎಚ್ಎಸ್ಆರ್ ಲೇಔಟ್ ಸಂಚಾರ ಠಾಣೆ ವ್ಯಾಪ್ತಿಯ ಸರ್ಜಾಪುರ ರಸ್ತೆಯಲ್ಲಿ ಇತ್ತೀಚೆಗೆ ಟ್ಯಾಂಕರ್ ವಾಹನ ಮೈ ಮೇಲೆ ಹರಿದು ಬಾಲಕ ಮೃತಪಟ್ಟಿದ್ದ. ಇದರಿಂದ ಎಚ್ಚೆತ್ತಿದ್ದ ಪೊಲೀಸರು, ಟ್ಯಾಂಕರ್ಗಳ ವಿರುದ್ಧ ಶುಕ್ರವಾರ ವಿಶೇಷ ಕಾರ್ಯಾಚರಣೆ ನಡೆಸಿ 258 ಪ್ರಕರಣ ದಾಖಲಿಸಿಕೊಂಡಿದ್ದರು.</p>.<p>ನಗರದ ಬೆಳ್ಳಂದೂರಿನಲ್ಲಿ ಶುಕ್ರವಾರ ಟ್ಯಾಂಕರ್ ಮಾಲೀಕರ ಸಭೆ ನಡೆಸಿದ ಪೊಲೀಸರು, ಸಂಚಾರ ನಿಯಮಗಳ ಬಗ್ಗೆ ತಿಳಿವಳಿಕೆ ಮೂಡಿಸಿದರು.</p>.<p>‘ಚಾಲನಾ ಪರವಾನಗಿ ಚಾಲ್ತಿಯಲ್ಲಿರುವ ಚಾಲಕರು ಮಾತ್ರ ಟ್ಯಾಂಕರ್ ಚಲಾಯಿಸಬೇಕು. ಸಮವಸ್ತ್ರ ಧರಿಸಿರಬೇಕು. ಸಂಚಾರ ನಿಯಮಗಳನ್ನೆಲ್ಲ ಪಾಲಿಸಬೇಕು. ಅಡ್ಡಾದಿಡ್ಡಿಯಾಗಿ ಟ್ಯಾಂಕರ್ ಚಲಾಯಿಸಿ, ಅಪಘಾತವನ್ನುಂಟು ಮಾಡಿದರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ’ ಎಂದೂ ಪೊಲೀಸರು ಎಚ್ಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಟ್ಯಾಂಕರ್ ವಾಹನ ಚಾಲಕರಿಂದ ಮೇಲಿಂದ ಮೇಲೆ ಅಪಘಾತಗಳು ಸಂಭವಿಸುತ್ತಿದ್ದು, ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಟ್ಯಾಂಕರ್ ಮಾಲೀಕರಿಗೆ ಪೊಲೀಸರು ಖಡಕ್ ಎಚ್ಚರಿಕೆ ನೀಡಿದ್ದಾರೆ.</p>.<p>ಎಚ್ಎಸ್ಆರ್ ಲೇಔಟ್ ಸಂಚಾರ ಠಾಣೆ ವ್ಯಾಪ್ತಿಯ ಸರ್ಜಾಪುರ ರಸ್ತೆಯಲ್ಲಿ ಇತ್ತೀಚೆಗೆ ಟ್ಯಾಂಕರ್ ವಾಹನ ಮೈ ಮೇಲೆ ಹರಿದು ಬಾಲಕ ಮೃತಪಟ್ಟಿದ್ದ. ಇದರಿಂದ ಎಚ್ಚೆತ್ತಿದ್ದ ಪೊಲೀಸರು, ಟ್ಯಾಂಕರ್ಗಳ ವಿರುದ್ಧ ಶುಕ್ರವಾರ ವಿಶೇಷ ಕಾರ್ಯಾಚರಣೆ ನಡೆಸಿ 258 ಪ್ರಕರಣ ದಾಖಲಿಸಿಕೊಂಡಿದ್ದರು.</p>.<p>ನಗರದ ಬೆಳ್ಳಂದೂರಿನಲ್ಲಿ ಶುಕ್ರವಾರ ಟ್ಯಾಂಕರ್ ಮಾಲೀಕರ ಸಭೆ ನಡೆಸಿದ ಪೊಲೀಸರು, ಸಂಚಾರ ನಿಯಮಗಳ ಬಗ್ಗೆ ತಿಳಿವಳಿಕೆ ಮೂಡಿಸಿದರು.</p>.<p>‘ಚಾಲನಾ ಪರವಾನಗಿ ಚಾಲ್ತಿಯಲ್ಲಿರುವ ಚಾಲಕರು ಮಾತ್ರ ಟ್ಯಾಂಕರ್ ಚಲಾಯಿಸಬೇಕು. ಸಮವಸ್ತ್ರ ಧರಿಸಿರಬೇಕು. ಸಂಚಾರ ನಿಯಮಗಳನ್ನೆಲ್ಲ ಪಾಲಿಸಬೇಕು. ಅಡ್ಡಾದಿಡ್ಡಿಯಾಗಿ ಟ್ಯಾಂಕರ್ ಚಲಾಯಿಸಿ, ಅಪಘಾತವನ್ನುಂಟು ಮಾಡಿದರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ’ ಎಂದೂ ಪೊಲೀಸರು ಎಚ್ಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>