<p><strong>ಬೆಂಗಳೂರು:</strong> ‘ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರವನ್ನು ವಿರೋಧಿಸಿ, ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರೊಂದಿಗೆ ನಾವಿದ್ದೇವೆ ಎಂದು ಸಾರಲು ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ’ ಎಂದು ಸಾಮಾಜಿಕ ಕಾರ್ಯಕರ್ತ ತನ್ವಿರ್ ಅಹ್ಮದ್ ತಿಳಿಸಿದ್ದಾರೆ.</p>.<p>ವಿಶೇಷ ತನಿಖಾ ದಳ ವಿಚಾರಣೆ ಆರಂಭಿಸಿದ ಬಳಿಕ ಅನೇಕ ಆರೋಪಗಳು ನಿರಾಧಾರ ಎಂದು ಸಾಬೀತಾಗಿದೆ. ಆದರೂ ಜನರ ಮನಸ್ಸಲ್ಲಿ ಧರ್ಮಸ್ಥಳದ ಬಗ್ಗೆ ಮೂಡಿರುವ ತಪ್ಪು ಭಾವನೆಗಳನ್ನು ಹೋಗಲಾಡಿಸಲು ಈ ಪಾದಯಾತ್ರೆ ನಡೆಸಲಾಗುತ್ತಿದೆ ಎಂದು ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>‘ನ.18ರಂದು ಧರ್ಮಸ್ಥಳದಲ್ಲಿ ನಡೆಯಲಿರುವ ಸರ್ವಧರ್ಮ ಸಮ್ಮೇಳನದಲ್ಲಿ ಭಾಗಿಯಾಗುತ್ತಿರುವ ನಾನು ಬರೀ ಭಾಷಣ ಮಾಡಲು ಹೋಗುತ್ತಿಲ್ಲ. ಭಾರತದ ಪುನರ್ನಿರ್ಮಾಣಕ್ಕೆ ಅಗತ್ಯ ಇರುವ ಏಕತೆಯ ಸಂದೇಶವನ್ನು ಹೊತ್ತು ಸಾಗುತ್ತಿದ್ದೇನೆ’ ಎಂದರು.</p>.<p>ಪಾದಯಾತ್ರೆಯು ನ.8ರಂದು ಬೆಳಿಗ್ಗೆ 8.30ಕ್ಕೆ ಬೆಂಗಳೂರು ಅಂತರರಾಷ್ಟ್ರೀಯ ಪ್ರದರ್ಶನ ಕೇಂದ್ರದ ಬಳಿ ಆರಂಭಗೊಳ್ಳಲಿದೆ. 30 ಜನರ ತಂಡ ಇದರಲ್ಲಿ ಇರಲಿದೆ. 350 ಕಿ.ಮೀ. ದೂರದ ಧರ್ಮಸ್ಥಳಕ್ಕೆ ನ.17ಕ್ಕೆ ತಲುಪಲಿದೆ. ಅಲ್ಲಿಗೆ ತಲುಪುವ ಹೊತ್ತಿಗೆ ತಂಡದ ಸಂಖ್ಯೆ 500 ದಾಟಲಿದೆ ಎಂದು ತಿಳಿಸಿದರು.</p>.<p>‘ದೇಶಕ್ಕಾಗಿ ಕೊಡುಗೆ ನೀಡಿರುವ ಧರ್ಮಾಧಿಕಾರಿಯೊಂದಿಗೆ ನಾವಿದ್ದೇವೆ ಎಂದು ಸ್ಪಷ್ಟವಾಗಿ ಸಾರುವುದೇ ನಮ್ಮ ಉದ್ದೇಶ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರವನ್ನು ವಿರೋಧಿಸಿ, ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರೊಂದಿಗೆ ನಾವಿದ್ದೇವೆ ಎಂದು ಸಾರಲು ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ’ ಎಂದು ಸಾಮಾಜಿಕ ಕಾರ್ಯಕರ್ತ ತನ್ವಿರ್ ಅಹ್ಮದ್ ತಿಳಿಸಿದ್ದಾರೆ.</p>.<p>ವಿಶೇಷ ತನಿಖಾ ದಳ ವಿಚಾರಣೆ ಆರಂಭಿಸಿದ ಬಳಿಕ ಅನೇಕ ಆರೋಪಗಳು ನಿರಾಧಾರ ಎಂದು ಸಾಬೀತಾಗಿದೆ. ಆದರೂ ಜನರ ಮನಸ್ಸಲ್ಲಿ ಧರ್ಮಸ್ಥಳದ ಬಗ್ಗೆ ಮೂಡಿರುವ ತಪ್ಪು ಭಾವನೆಗಳನ್ನು ಹೋಗಲಾಡಿಸಲು ಈ ಪಾದಯಾತ್ರೆ ನಡೆಸಲಾಗುತ್ತಿದೆ ಎಂದು ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>‘ನ.18ರಂದು ಧರ್ಮಸ್ಥಳದಲ್ಲಿ ನಡೆಯಲಿರುವ ಸರ್ವಧರ್ಮ ಸಮ್ಮೇಳನದಲ್ಲಿ ಭಾಗಿಯಾಗುತ್ತಿರುವ ನಾನು ಬರೀ ಭಾಷಣ ಮಾಡಲು ಹೋಗುತ್ತಿಲ್ಲ. ಭಾರತದ ಪುನರ್ನಿರ್ಮಾಣಕ್ಕೆ ಅಗತ್ಯ ಇರುವ ಏಕತೆಯ ಸಂದೇಶವನ್ನು ಹೊತ್ತು ಸಾಗುತ್ತಿದ್ದೇನೆ’ ಎಂದರು.</p>.<p>ಪಾದಯಾತ್ರೆಯು ನ.8ರಂದು ಬೆಳಿಗ್ಗೆ 8.30ಕ್ಕೆ ಬೆಂಗಳೂರು ಅಂತರರಾಷ್ಟ್ರೀಯ ಪ್ರದರ್ಶನ ಕೇಂದ್ರದ ಬಳಿ ಆರಂಭಗೊಳ್ಳಲಿದೆ. 30 ಜನರ ತಂಡ ಇದರಲ್ಲಿ ಇರಲಿದೆ. 350 ಕಿ.ಮೀ. ದೂರದ ಧರ್ಮಸ್ಥಳಕ್ಕೆ ನ.17ಕ್ಕೆ ತಲುಪಲಿದೆ. ಅಲ್ಲಿಗೆ ತಲುಪುವ ಹೊತ್ತಿಗೆ ತಂಡದ ಸಂಖ್ಯೆ 500 ದಾಟಲಿದೆ ಎಂದು ತಿಳಿಸಿದರು.</p>.<p>‘ದೇಶಕ್ಕಾಗಿ ಕೊಡುಗೆ ನೀಡಿರುವ ಧರ್ಮಾಧಿಕಾರಿಯೊಂದಿಗೆ ನಾವಿದ್ದೇವೆ ಎಂದು ಸ್ಪಷ್ಟವಾಗಿ ಸಾರುವುದೇ ನಮ್ಮ ಉದ್ದೇಶ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>