<p><strong>ಬೆಂಗಳೂರು</strong>: ಜಲಮಂಡಳಿ ವ್ಯಾಪ್ತಿಯಲ್ಲಿ 60 ಸಾವಿರ ಗಿಡಗಳನ್ನು ನೆಡುವ 'ಹಸಿರು ಹಾದಿ - ನೀರಿನ ಭವಿಷ್ಯ' ಅಭಿಯಾನಕ್ಕೆ ಜಲಮಂಡಳಿ ಅಧ್ಯಕ್ಷ ವಿ. ರಾಮ್ಪ್ರಸಾತ್ ಮನೋಹರ್ ಸೋಮವಾರ ಚಾಲನೆ ನೀಡಿದರು.</p>.<p>ಜಿಕೆವಿಕೆ ಆವರಣದಲ್ಲಿ ಜಲಮಂಡಳಿ ಸಿಬ್ಬಂದಿಯೊಂದಿಗೆ 60 ವಿವಿಧ ಜಾತಿಯ ಗಿಡಗಳನ್ನು ನೆಟ್ಟು ಅಭಿಯಾನಕ್ಕೆ ಚಾಲನೆ ನೀಡಿದರು.</p>.<p>ನಂತರ ಮಾತನಾಡಿದ ಅವರು, ‘ಪ್ರತಿಯೊಬ್ಬರೂ ತಾವು ವಾಸಿಸುವ ಸ್ಥಳದ ಸುತ್ತ ಮುತ್ತ ಗಿಡ ನೆಡುವ ಮೂಲಕ ನಗರವನ್ನು ಇನ್ನಷ್ಟು ಹಸಿರಾಗಿಡಲು ಶ್ರಮಿಸಬೇಕು’ ಎಂದರು.</p>.<p>‘ಬೆಂಗಳೂರು ಜಲಮಂಡಳಿ ನಗರದಲ್ಲಿ ಬಹಳಷ್ಟು ಜಾಗವನ್ನು ಹೊಂದಿದೆ. ಆ ಜಾಗಗಳಲ್ಲಿ ಗಿಡಗಳನ್ನು ನೆಡುವ ಮೂಲಕ ಪರಿಸರವನ್ನು ಇನ್ನಷ್ಟು ಸಮೃದ್ಧಿಯಾಗಿಸುವುದು ಅಭಿಯಾನದ ಉದ್ದೇಶವಾಗಿದೆ’ ಎಂದರು.</p>.<p>‘ದೊಡ್ಡ ಪ್ರಮಾಣದಲ್ಲಿ ನೀರು ಬಳಸುವ ಗ್ರಾಹಕರು(ಬಲ್ಕ್ ಯೂಸರ್ಸ್), ಅಪಾರ್ಟ್ಮೆಂಟ್ ನಿವಾಸಿಗಳು, ಕೈಗಾರಿಕೆಗಳು, ತಂತ್ರಜ್ಞಾನ ಸಂಸ್ಥೆಗಳು ಹಾಗೂ ವಿದ್ಯಾ ಸಂಸ್ಥೆಗಳಿಗೆ ತಮ್ಮ ಆವರಣಗಳಲ್ಲಿ ಗಿಡ ನೆಟ್ಟು, ಅವುಗಳನ್ನು ಪೋಷಿಸುವ ಜವಾಬ್ದಾರಿ ತೆಗೆದುಕೊಳ್ಳುವಂತೆ ಪ್ರೋತ್ಸಾಹಿಸುತ್ತಿದ್ದೇವೆ’ಎಂದು ತಿಳಿಸಿದರು.</p>.<p>‘ಜಲಮಂಡಳಿ ವ್ಯಾಪ್ತಿಯ ಎಲ್ಲ ಉಪ ವಿಭಾಗಗಳಿಗೆ ಹಾಗೂ ಕಚೇರಿಗಳಿಗೆ ತಮ್ಮ ತಮ್ಮ ಪ್ರದೇಶಗಳಲ್ಲಿ ಗಿಡ ನೆಡುವ ಕಾರ್ಯಕ್ಕೆ ಮುಂದಾಗುವಂತೆ ನಿರ್ದೇಶನ ನೀಡಲಾಗಿದೆ' ಎಂದು ತಿಳಿಸಿದರು.</p>.<p>ಮಂಡಳಿಯ ಹಿರಿಯ ಅಧಿಕಾರಿಗಳು, ಎಂಜಿನಿಯರ್ಗಳು ಹಾಗೂ ಸಿಬ್ಬಂದಿಯವರು ಗಿಡ ನೆಡುವ ಮೂಲಕ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಜಲಮಂಡಳಿ ವ್ಯಾಪ್ತಿಯಲ್ಲಿ 60 ಸಾವಿರ ಗಿಡಗಳನ್ನು ನೆಡುವ 'ಹಸಿರು ಹಾದಿ - ನೀರಿನ ಭವಿಷ್ಯ' ಅಭಿಯಾನಕ್ಕೆ ಜಲಮಂಡಳಿ ಅಧ್ಯಕ್ಷ ವಿ. ರಾಮ್ಪ್ರಸಾತ್ ಮನೋಹರ್ ಸೋಮವಾರ ಚಾಲನೆ ನೀಡಿದರು.</p>.<p>ಜಿಕೆವಿಕೆ ಆವರಣದಲ್ಲಿ ಜಲಮಂಡಳಿ ಸಿಬ್ಬಂದಿಯೊಂದಿಗೆ 60 ವಿವಿಧ ಜಾತಿಯ ಗಿಡಗಳನ್ನು ನೆಟ್ಟು ಅಭಿಯಾನಕ್ಕೆ ಚಾಲನೆ ನೀಡಿದರು.</p>.<p>ನಂತರ ಮಾತನಾಡಿದ ಅವರು, ‘ಪ್ರತಿಯೊಬ್ಬರೂ ತಾವು ವಾಸಿಸುವ ಸ್ಥಳದ ಸುತ್ತ ಮುತ್ತ ಗಿಡ ನೆಡುವ ಮೂಲಕ ನಗರವನ್ನು ಇನ್ನಷ್ಟು ಹಸಿರಾಗಿಡಲು ಶ್ರಮಿಸಬೇಕು’ ಎಂದರು.</p>.<p>‘ಬೆಂಗಳೂರು ಜಲಮಂಡಳಿ ನಗರದಲ್ಲಿ ಬಹಳಷ್ಟು ಜಾಗವನ್ನು ಹೊಂದಿದೆ. ಆ ಜಾಗಗಳಲ್ಲಿ ಗಿಡಗಳನ್ನು ನೆಡುವ ಮೂಲಕ ಪರಿಸರವನ್ನು ಇನ್ನಷ್ಟು ಸಮೃದ್ಧಿಯಾಗಿಸುವುದು ಅಭಿಯಾನದ ಉದ್ದೇಶವಾಗಿದೆ’ ಎಂದರು.</p>.<p>‘ದೊಡ್ಡ ಪ್ರಮಾಣದಲ್ಲಿ ನೀರು ಬಳಸುವ ಗ್ರಾಹಕರು(ಬಲ್ಕ್ ಯೂಸರ್ಸ್), ಅಪಾರ್ಟ್ಮೆಂಟ್ ನಿವಾಸಿಗಳು, ಕೈಗಾರಿಕೆಗಳು, ತಂತ್ರಜ್ಞಾನ ಸಂಸ್ಥೆಗಳು ಹಾಗೂ ವಿದ್ಯಾ ಸಂಸ್ಥೆಗಳಿಗೆ ತಮ್ಮ ಆವರಣಗಳಲ್ಲಿ ಗಿಡ ನೆಟ್ಟು, ಅವುಗಳನ್ನು ಪೋಷಿಸುವ ಜವಾಬ್ದಾರಿ ತೆಗೆದುಕೊಳ್ಳುವಂತೆ ಪ್ರೋತ್ಸಾಹಿಸುತ್ತಿದ್ದೇವೆ’ಎಂದು ತಿಳಿಸಿದರು.</p>.<p>‘ಜಲಮಂಡಳಿ ವ್ಯಾಪ್ತಿಯ ಎಲ್ಲ ಉಪ ವಿಭಾಗಗಳಿಗೆ ಹಾಗೂ ಕಚೇರಿಗಳಿಗೆ ತಮ್ಮ ತಮ್ಮ ಪ್ರದೇಶಗಳಲ್ಲಿ ಗಿಡ ನೆಡುವ ಕಾರ್ಯಕ್ಕೆ ಮುಂದಾಗುವಂತೆ ನಿರ್ದೇಶನ ನೀಡಲಾಗಿದೆ' ಎಂದು ತಿಳಿಸಿದರು.</p>.<p>ಮಂಡಳಿಯ ಹಿರಿಯ ಅಧಿಕಾರಿಗಳು, ಎಂಜಿನಿಯರ್ಗಳು ಹಾಗೂ ಸಿಬ್ಬಂದಿಯವರು ಗಿಡ ನೆಡುವ ಮೂಲಕ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>