<p><strong>ಬೆಂಗಳೂರು</strong>: ಪ್ರಸಕ್ತ ಆರ್ಥಿಕ ವರ್ಷದಲ್ಲಿ ಬಿಬಿಎಂಪಿಯು ₹ 4 ಸಾವಿರ ಕೋಟಿಆಸ್ತಿ ತೆರಿಗೆ ಸಂಗ್ರಹಿಸುವ ಗುರಿ ಹೊಂದಿದ್ದು, ಸೆ.22ರವರೆಗೆ ₹ 2,141.51 ಕೋಟಿ (ಶೇ 53.53ರಷ್ಟು) ತೆರಿಗೆ ಸಂಗ್ರಹವಾಗಿದೆ.</p>.<p>ತೆರಿಗೆಸಂಗ್ರಹಗುರಿತಲುಪಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ಕಂದಾಯ ವಿಭಾಗದ ಅಧಿಕಾರಿಗಳ ಜೊತೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಅವರು ಗುರುವಾರ ಸಭೆ ನಡೆಸಿದರು.</p>.<p>‘ಅನೇಕ ವರ್ಷಗಳಿಂದ ತೆರಿಗೆ ಬಾಕಿ ಉಳಿಸಿಕೊಂಡಿರುವ ಸ್ವತ್ತುಗಳ ವಲಯವಾರು ಪಟ್ಟಿ ತಯಾರಿಸಬೇಕು. ಕಂದಾಯ ಅಧಿಕಾರಿಗಳು ಹಾಗೂ ಸಹಾಯಕ ಕಂದಾಯ ಅಧಿಕಾರಿಗಳು ಎಲ್ಲಾ ಸುಸ್ತಿದಾರರಿಗೆ ನೋಟಿಸ್ ಜಾರಿಗೊಳಿಸಿ ವಾರ್ಡ್ ವ್ಯಾಪ್ತಿಯಲ್ಲಿ ತ್ವರಿತಗತಿಯಲ್ಲಿ ತೆರಿಗೆ ಸಂಗ್ರಹಿಸಲು ಕ್ರಮ ಕೈಗೊಳ್ಳಬೇಕು’ ಎಂದು ಮುಖ್ಯ ಆಯುಕ್ತರು ಸೂಚಿಸಿದರು.</p>.<p>ಸಭೆಯಲ್ಲಿ ವಿಶೇಷ ಆಯುಕ್ತರ (ಕಂದಾಯ) ಎಸ್. ಬಸವರಾಜು, ಎಲ್ಲಾ ವಲಯಗಳ ಆಯುಕ್ತರು, ಜಂಟಿ ಆಯುಕ್ತರುಗಳು, ಕಂದಾಯ ವಿಭಾಗದ ಉಪ ಆಯುಕ್ತರು, ಕಂದಾಯ ವಿಭಾಗದ ಜಂಟಿ ಆಯುಕ್ತರು, ಎಲ್ಲಾ ಕಂದಾಯ ಅಧಿಕಾರಿಗಳು, ಸಹಾಯಕ ಕಂದಾಯ ಅಧಿಕಾರಿಗಳು ಭಾಗವಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಪ್ರಸಕ್ತ ಆರ್ಥಿಕ ವರ್ಷದಲ್ಲಿ ಬಿಬಿಎಂಪಿಯು ₹ 4 ಸಾವಿರ ಕೋಟಿಆಸ್ತಿ ತೆರಿಗೆ ಸಂಗ್ರಹಿಸುವ ಗುರಿ ಹೊಂದಿದ್ದು, ಸೆ.22ರವರೆಗೆ ₹ 2,141.51 ಕೋಟಿ (ಶೇ 53.53ರಷ್ಟು) ತೆರಿಗೆ ಸಂಗ್ರಹವಾಗಿದೆ.</p>.<p>ತೆರಿಗೆಸಂಗ್ರಹಗುರಿತಲುಪಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ಕಂದಾಯ ವಿಭಾಗದ ಅಧಿಕಾರಿಗಳ ಜೊತೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಅವರು ಗುರುವಾರ ಸಭೆ ನಡೆಸಿದರು.</p>.<p>‘ಅನೇಕ ವರ್ಷಗಳಿಂದ ತೆರಿಗೆ ಬಾಕಿ ಉಳಿಸಿಕೊಂಡಿರುವ ಸ್ವತ್ತುಗಳ ವಲಯವಾರು ಪಟ್ಟಿ ತಯಾರಿಸಬೇಕು. ಕಂದಾಯ ಅಧಿಕಾರಿಗಳು ಹಾಗೂ ಸಹಾಯಕ ಕಂದಾಯ ಅಧಿಕಾರಿಗಳು ಎಲ್ಲಾ ಸುಸ್ತಿದಾರರಿಗೆ ನೋಟಿಸ್ ಜಾರಿಗೊಳಿಸಿ ವಾರ್ಡ್ ವ್ಯಾಪ್ತಿಯಲ್ಲಿ ತ್ವರಿತಗತಿಯಲ್ಲಿ ತೆರಿಗೆ ಸಂಗ್ರಹಿಸಲು ಕ್ರಮ ಕೈಗೊಳ್ಳಬೇಕು’ ಎಂದು ಮುಖ್ಯ ಆಯುಕ್ತರು ಸೂಚಿಸಿದರು.</p>.<p>ಸಭೆಯಲ್ಲಿ ವಿಶೇಷ ಆಯುಕ್ತರ (ಕಂದಾಯ) ಎಸ್. ಬಸವರಾಜು, ಎಲ್ಲಾ ವಲಯಗಳ ಆಯುಕ್ತರು, ಜಂಟಿ ಆಯುಕ್ತರುಗಳು, ಕಂದಾಯ ವಿಭಾಗದ ಉಪ ಆಯುಕ್ತರು, ಕಂದಾಯ ವಿಭಾಗದ ಜಂಟಿ ಆಯುಕ್ತರು, ಎಲ್ಲಾ ಕಂದಾಯ ಅಧಿಕಾರಿಗಳು, ಸಹಾಯಕ ಕಂದಾಯ ಅಧಿಕಾರಿಗಳು ಭಾಗವಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>