<p><strong>ಬೆಂಗಳೂರು</strong>: ಕೇಂದ್ರ ಸರ್ಕಾರ ತೆರಿಗೆ ತಾರತಮ್ಯ ಮುಂದುವರಿಸಿದೆ. ಕೇಂದ್ರಕ್ಕೆ ಕನ್ನಡಿಗರ ದುಡಿಮೆ, ತೆರಿಗೆ ಬೇಕು. ವಾಪಸ್ ಕೊಡುವಾಗ ಕರ್ನಾಟಕ ಬೇಡವಾಗಿದೆ ಎಂದು ಪ್ರಿಯಾಂಕ್ ಖರ್ಗೆ ದೂರಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು,‘ದೇಶದಲ್ಲಿ ಕೆಲವೇ ರಾಜ್ಯಗಳು ಕೇಂದ್ರ ಸರ್ಕಾರಕ್ಕೆ ತೆರಿಗೆ ನೀಡುತ್ತಿವೆ. ತೆರಿಗೆ ಕೊಡದ ರಾಜ್ಯಗಳಿಗೆ ಪಾಲು ಕೊಡಬೇಡಿ ಎಂದು ಹೇಳಿಲ್ಲ. ಆದರೆ, ತಾರತಮ್ಯ ಮಾಡಬೇಡಿ ಎನ್ನುವುದು ನಮ್ಮ ಮನವಿ. ರಾಜ್ಯದ ಬಿಜೆಪಿ ಸಂಸದರು, ಪುಕ್ಕಟೆ ಭಾಷಣ ಮಾಡುವ ಕೇಂದ್ರ ಸಚಿವರು ಈ ಕುರಿತು ಪ್ರಧಾನಿ ಬಳಿ ಧ್ವನಿ ಎತ್ತಬೇಕು’ ಎಂದು ಸಲಹೆ ನೀಡಿದರು.</p>.<p>‘ಕರ್ನಾಟಕದ ಹೂಡಿಕೆದಾರರಿಗೆ ಆಂಧ್ರಪ್ರದೇಶಕ್ಕೆ ಆಹ್ವಾನ ನೀಡಿರುವ ಅಲ್ಲಿನ ಸಚಿವ ನಾ.ರಾ.ಲೋಕೇಶ್ ಮೊದಲು ಅಮರಾವತಿ ನಿರ್ಮಾಣ ಕಾರ್ಯದತ್ತ ಚಿತ್ತಹರಿಸಲಿ. ಪ್ರಧಾನಿ ನರೇಂದ್ರ ಮೋದಿ ಅವರು ₹10 ಸಾವಿರ ಕೋಟಿ ಕೊಟ್ಟರೂ ಕೆಲಸ ಏಕೆ ಆಗಿಲ್ಲ’ ಎಂದು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕೇಂದ್ರ ಸರ್ಕಾರ ತೆರಿಗೆ ತಾರತಮ್ಯ ಮುಂದುವರಿಸಿದೆ. ಕೇಂದ್ರಕ್ಕೆ ಕನ್ನಡಿಗರ ದುಡಿಮೆ, ತೆರಿಗೆ ಬೇಕು. ವಾಪಸ್ ಕೊಡುವಾಗ ಕರ್ನಾಟಕ ಬೇಡವಾಗಿದೆ ಎಂದು ಪ್ರಿಯಾಂಕ್ ಖರ್ಗೆ ದೂರಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು,‘ದೇಶದಲ್ಲಿ ಕೆಲವೇ ರಾಜ್ಯಗಳು ಕೇಂದ್ರ ಸರ್ಕಾರಕ್ಕೆ ತೆರಿಗೆ ನೀಡುತ್ತಿವೆ. ತೆರಿಗೆ ಕೊಡದ ರಾಜ್ಯಗಳಿಗೆ ಪಾಲು ಕೊಡಬೇಡಿ ಎಂದು ಹೇಳಿಲ್ಲ. ಆದರೆ, ತಾರತಮ್ಯ ಮಾಡಬೇಡಿ ಎನ್ನುವುದು ನಮ್ಮ ಮನವಿ. ರಾಜ್ಯದ ಬಿಜೆಪಿ ಸಂಸದರು, ಪುಕ್ಕಟೆ ಭಾಷಣ ಮಾಡುವ ಕೇಂದ್ರ ಸಚಿವರು ಈ ಕುರಿತು ಪ್ರಧಾನಿ ಬಳಿ ಧ್ವನಿ ಎತ್ತಬೇಕು’ ಎಂದು ಸಲಹೆ ನೀಡಿದರು.</p>.<p>‘ಕರ್ನಾಟಕದ ಹೂಡಿಕೆದಾರರಿಗೆ ಆಂಧ್ರಪ್ರದೇಶಕ್ಕೆ ಆಹ್ವಾನ ನೀಡಿರುವ ಅಲ್ಲಿನ ಸಚಿವ ನಾ.ರಾ.ಲೋಕೇಶ್ ಮೊದಲು ಅಮರಾವತಿ ನಿರ್ಮಾಣ ಕಾರ್ಯದತ್ತ ಚಿತ್ತಹರಿಸಲಿ. ಪ್ರಧಾನಿ ನರೇಂದ್ರ ಮೋದಿ ಅವರು ₹10 ಸಾವಿರ ಕೋಟಿ ಕೊಟ್ಟರೂ ಕೆಲಸ ಏಕೆ ಆಗಿಲ್ಲ’ ಎಂದು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>