ಕ್ಷಯ ರೋಗಿಗಳಿಗೆ ಪೌಷ್ಟಿಕ ಆಹಾರದ ಕಿಟ್ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ‘ರಾಜ್ಯವನ್ನು 2025ರ ವೇಳೆಗೆ ಕ್ಷಯ ಮುಕ್ತಗೊಳಿಸಲು ಕಾರ್ಯಯೋಜನೆ ಹಾಕಿಕೊಳ್ಳಲಾಗಿದೆ. ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮದಡಿ ಈ ರೋಗ ತಡೆಗೆ ಕ್ರಮವಹಿಸಲಾಗಿದೆ. ಚುನಾಯಿತ ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು, ಸರ್ಕಾರೇತರ ಸಂಸ್ಥೆಗಳು, ಸಂಘ–ಸಂಸ್ಥೆಗಳು, ಉದ್ಯಮಿಗಳು ಕ್ಷಯ ರೋಗಿಗಳನ್ನು ದತ್ತು ಪಡೆದು, ಪೂರಕ ನೆರವು ನೀಡಬೇಕು. ಈ ಕ್ರಮ ರೋಗದ ವಿರುದ್ಧ ಹೋರಾಡಲು ಸಹಕಾರಿ’ ಎಂದು ಹೇಳಿದರು.