‘ಈ ಹಗರಣದ ವ್ಯಾಪ್ತಿ ಎಷ್ಟಿದೆ, ಎಷ್ಟು ಎಫ್ಐಆರ್ಗಳನ್ನು ದಾಖಲಿಸಲಾಗಿದೆ, ತನಿಖೆ ಯಾವ ಹಂತದಲ್ಲಿದೆ ಎಂಬ ವಿವರಗಳನ್ನು ಎರಡು ದಿನಗಳ ಒಳಗಾಗಿ ಸಲ್ಲಿಸಿ. ನಾಕೋಡ ಕನ್ಸ್ಟ್ರಕ್ಷನ್ ಲಿಮಿಟೆಡ್ ಕಂಪನಿಯ ವಿರುದ್ಧ ದೂರು ನೀಡಿದ್ದ ಸೈಯದ್ ಅಸ್ಲಾಂ ಪರ್ವೇಜ್ ಹಾಗೂ ಈ ಹಗರಣದಲ್ಲಿ ಭಾಗಿಯಾಗಿರುವ ಇತರೆ ಆರೋಪಿಗಳ ವಿರುದ್ಧ ಕೈಗೊಂಡಿರುವ ಕ್ರಮಗಳ ಬಗ್ಗೆಯೂ ವಿವರ ನೀಡಿ’ ಎಂದು ನ್ಯಾಯಪೀಠ ತಾಕೀತು ಮಾಡಿದೆ. ಅರ್ಜಿದಾರರ ಪರ ಹಿರಿಯ ವಕೀಲ ಶಶಿಕಿರಣ ಶೆಟ್ಟಿ ವಾದ ಮಂಡಿಸಿದರು.