ಉಪನಗರದ ಶೇಷಾದ್ರಿಪುರ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಹಲವು ರಾಜ್ಯಗಳಲ್ಲಿ ಹರಿದು ಹಂಚಿಹೋಗಿದ್ದ ಕನ್ನಡ ಭಾಷಿಕರನ್ನು ಒಗ್ಗೂಡಿಸಿ, ಕರ್ನಾಟಕ ರಾಜ್ಯವನ್ನು ರಚಿಸುವಲ್ಲಿ ಭಾಷಾವಾರು ಪ್ರಾಂತ್ಯ ಹೋರಾಟಗಾರರ ಕೊಡುಗೆ ಸ್ಮರಣೀಯ. ಇದಕ್ಕಾಗಿ ಹಲವು ಸಾಹಿತಿಗಳು, ಕನ್ನಡಪರ ಹೋರಾಟಗಾರರು ಶ್ರಮಿಸಿದ್ದು, ಅವರ ಹೋರಾಟದ ಪ್ರತಿಫಲವಾಗಿ ಈ ರಾಜ್ಯ ಉದಯವಾಗಿದೆ’ ಎಂದರು.