<p><strong>ಬೆಂಗಳೂರು</strong>:‘ಜೀವಂತ ಕಲೆಯಾಗಿರುವ ರಂಗಭೂಮಿ ಹಿಂದಿನಿಂದಲೂ ಕನ್ನಡ ಭಾಷೆ ಕಟ್ಟುವ ಕೆಲಸ ಮಾಡಿಕೊಂಡು ಬಂದಿದೆ. ಇಲ್ಲಿನ ಪರಭಾಷಿಕರಿಗೆ ಕನ್ನಡ ಕಲಿಸುವ ಕೆಲಸವನ್ನು ನಾವೆಲ್ಲ ಮಾಡಬೇಕಾಗಿದೆ’ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ತಿಳಿಸಿದರು.</p>.<p>ಗೌರಿಸುಂದರ್ ವಾರ್ಷಿಕ ಪ್ರಶಸ್ತಿ ಸಮಿತಿಯು ಸಿ.ಅಶ್ವತ್ಥ್ ಕಲಾ ಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ‘ಗೌರಿಸುಂದರ್ ವಾರ್ಷಿಕ ಪ್ರಶಸ್ತಿ’ ಪ್ರದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಹೆಚ್ಚು ಕನ್ನಡ ಶಬ್ದಗಳನ್ನು ರಂಗಭೂಮಿಯಲ್ಲಿ ಬಳಸಲಾಗುತ್ತದೆ. ಜೀವಂತ ಶಕ್ತಿ ಇರುವ ರಂಗಭೂಮಿಯಲ್ಲಿ ಸ್ಪಷ್ಟ ಕನ್ನಡ ಪದಗಳನ್ನು ಕಾಣಬಹುದು. ಅಲ್ಲಿಂದಲೇ ಹೆಚ್ಚು ಪದಗಳನ್ನು ಕಲಿಯಬಹುದಾಗಿದೆ. ಪರಭಾಷಿಕರಿಗೆ ಕನ್ನಡ ಕಲಿಸುವುದರಿಂದ ಭಾಷೆ ಕಟ್ಟುವ ಕೆಲಸಕ್ಕೆ ಎಲ್ಲರೂ ಮುಂದಾಗಬೇಕು. ಈ ವಿಚಾರದಲ್ಲಿ ಜನರ ಪರ ಪ್ರಾಧಿಕಾರ ಸದಾ ಇರುತ್ತದೆ’ ಎಂದರು.</p>.<p>‘ಕನ್ನಡ ಅಭಿವೃದ್ಧಿ ಪ್ರಾಧಿಕಾರ ಪರಭಾಷಿಕರ ವಿರುದ್ಧವಾದ ಕೆಲಸ ಮಾಡುತ್ತಿಲ್ಲ. ಪರಭಾಷಿಕರೂ ಕನ್ನಡ ಕಲಿಯಬೇಕು ಹಾಗೂ ಮಾತನಾಡಬೇಕು ಎಂಬ ಉದ್ದೇಶ ನಮ್ಮದು. ಎಲ್ಲ ಕಚೇರಿಗಳಲ್ಲಿ ಕನ್ನಡ ಬಳಕೆ ಹಾಗೂ ಅರ್ಜಿಗಳ ಸ್ವೀಕಾರವೂ ಕನ್ನಡದಲ್ಲಿ ನಡೆಯುವಂತೆ ಮಾಡುವ ಪ್ರಯತ್ನದಲ್ಲಿದ್ದೇವೆ’ ಎಂದು ಹೇಳಿದರು.</p>.<p>ಕಾರ್ಯಕ್ರಮದಲ್ಲಿ ಹಿರಿಯ ನಟರಾದ ಬಿ.ಆರ್.ಜಯರಾಂ ಹಾಗೂ ಎಂ.ಕೆ.ಸುಂದರರಾಜ್ ಅವರಿಗೆ ‘ಗೌರಿಸುಂದರ್ ವಾರ್ಷಿಕ ಪ್ರಶಸ್ತಿ’ ಪ್ರದಾನ ಮಾಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>:‘ಜೀವಂತ ಕಲೆಯಾಗಿರುವ ರಂಗಭೂಮಿ ಹಿಂದಿನಿಂದಲೂ ಕನ್ನಡ ಭಾಷೆ ಕಟ್ಟುವ ಕೆಲಸ ಮಾಡಿಕೊಂಡು ಬಂದಿದೆ. ಇಲ್ಲಿನ ಪರಭಾಷಿಕರಿಗೆ ಕನ್ನಡ ಕಲಿಸುವ ಕೆಲಸವನ್ನು ನಾವೆಲ್ಲ ಮಾಡಬೇಕಾಗಿದೆ’ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ತಿಳಿಸಿದರು.</p>.<p>ಗೌರಿಸುಂದರ್ ವಾರ್ಷಿಕ ಪ್ರಶಸ್ತಿ ಸಮಿತಿಯು ಸಿ.ಅಶ್ವತ್ಥ್ ಕಲಾ ಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ‘ಗೌರಿಸುಂದರ್ ವಾರ್ಷಿಕ ಪ್ರಶಸ್ತಿ’ ಪ್ರದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಹೆಚ್ಚು ಕನ್ನಡ ಶಬ್ದಗಳನ್ನು ರಂಗಭೂಮಿಯಲ್ಲಿ ಬಳಸಲಾಗುತ್ತದೆ. ಜೀವಂತ ಶಕ್ತಿ ಇರುವ ರಂಗಭೂಮಿಯಲ್ಲಿ ಸ್ಪಷ್ಟ ಕನ್ನಡ ಪದಗಳನ್ನು ಕಾಣಬಹುದು. ಅಲ್ಲಿಂದಲೇ ಹೆಚ್ಚು ಪದಗಳನ್ನು ಕಲಿಯಬಹುದಾಗಿದೆ. ಪರಭಾಷಿಕರಿಗೆ ಕನ್ನಡ ಕಲಿಸುವುದರಿಂದ ಭಾಷೆ ಕಟ್ಟುವ ಕೆಲಸಕ್ಕೆ ಎಲ್ಲರೂ ಮುಂದಾಗಬೇಕು. ಈ ವಿಚಾರದಲ್ಲಿ ಜನರ ಪರ ಪ್ರಾಧಿಕಾರ ಸದಾ ಇರುತ್ತದೆ’ ಎಂದರು.</p>.<p>‘ಕನ್ನಡ ಅಭಿವೃದ್ಧಿ ಪ್ರಾಧಿಕಾರ ಪರಭಾಷಿಕರ ವಿರುದ್ಧವಾದ ಕೆಲಸ ಮಾಡುತ್ತಿಲ್ಲ. ಪರಭಾಷಿಕರೂ ಕನ್ನಡ ಕಲಿಯಬೇಕು ಹಾಗೂ ಮಾತನಾಡಬೇಕು ಎಂಬ ಉದ್ದೇಶ ನಮ್ಮದು. ಎಲ್ಲ ಕಚೇರಿಗಳಲ್ಲಿ ಕನ್ನಡ ಬಳಕೆ ಹಾಗೂ ಅರ್ಜಿಗಳ ಸ್ವೀಕಾರವೂ ಕನ್ನಡದಲ್ಲಿ ನಡೆಯುವಂತೆ ಮಾಡುವ ಪ್ರಯತ್ನದಲ್ಲಿದ್ದೇವೆ’ ಎಂದು ಹೇಳಿದರು.</p>.<p>ಕಾರ್ಯಕ್ರಮದಲ್ಲಿ ಹಿರಿಯ ನಟರಾದ ಬಿ.ಆರ್.ಜಯರಾಂ ಹಾಗೂ ಎಂ.ಕೆ.ಸುಂದರರಾಜ್ ಅವರಿಗೆ ‘ಗೌರಿಸುಂದರ್ ವಾರ್ಷಿಕ ಪ್ರಶಸ್ತಿ’ ಪ್ರದಾನ ಮಾಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>