<p><strong>ಕೆ.ಆರ್.ಪುರ:</strong> ಮಕ್ಕಳಿಗೆ ಶಾಲಾ ಹಂತದಲ್ಲಿಯೇ ರಸ್ತೆ ಸುರಕ್ಷತೆ ಬಗ್ಗೆ ತಿಳಿಸುವ ಅಗತ್ಯವಿದೆ ಎಂದು ದಕ್ಷಿಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್.ಗೋವಿಂದಪ್ಪ ಹೇಳಿದರು.</p>.<p>ಕೆ.ಆರ್.ಪುರ ಸಮೀಪದ ಏಕತಾನಗರದ ಎಸ್.ಇ.ಎ ಶಾಲೆಯಲ್ಲಿ ಪ್ರಾದೇಶಿಕ ಸಾರಿಗೆ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ರಸ್ತೆ ಸುರಕ್ಷತೆ ಮಾಸಾಚರಣೆ –2025 ಉದ್ಘಾಟಿಸಿ ಮಾತನಾಡಿದರು.</p>.<p>ಶಾಲಾ ವಾಹನ ನಿರ್ವಹಣೆಯನ್ನು ಕಾಲಕಾಲಕ್ಕೆ ತಪ್ಪದೇ ನವೀಕರಿಸಿಕೊಂಡು ಮಕ್ಕಳ ಸುರಕ್ಷತೆಯನ್ನು ಕಾಪಾಡುವುದು ಎಲ್ಲಾ ಶಾಲಾ ಆಡಳಿತ ಮಂಡಳಿರವರ ಪ್ರಮುಖ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.</p>.<p>ಪ್ರಾದೇಶಿಕ ಸಾರಿಗೆ ಅಧಿಕಾರಿ ಉಮೇಶ್.ಪಿ ಮಾತನಾಡಿ, ರಸ್ತೆಯಲ್ಲಿ ಸಂಚರಿಸುವ ಪ್ರತಿಯೊಬ್ಬರು ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಬೇಕು. ಮಕ್ಕಳನ್ನು ದ್ವಿಚಕ್ರ ವಾಹನದಲ್ಲಿ ಕರೆದುಕೊಂಡು ಹೋಗುವಾಗ ಸುರಕ್ಷತೆ ಮುಖ್ಯ ಎಂದರು.</p>.<p>ಈ ಸಂದರ್ಭದಲ್ಲಿ ಆರ್.ಟಿ.ಒ ಸೂಪರಿಡೆಂಟ್ ದೊಡ್ಡಲಿಂಗಯ್ಯ, ನಿವೃತ್ತ ಡಿ.ಡಿ.ಪಿ.ಐ, ವೆಂಕಟರಾಮರೆಡ್ಡಿ, ಕ್ಷೇತ್ರ ಸಮನ್ವಯಾಧಿಕಾರಿಗಳಾದ ಪ್ರಿಯದರ್ಶಿನಿ ಬಿ.ಎನ್, ಉಮೇಶ್ ಕೆ.ಹೆಚ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪುರ:</strong> ಮಕ್ಕಳಿಗೆ ಶಾಲಾ ಹಂತದಲ್ಲಿಯೇ ರಸ್ತೆ ಸುರಕ್ಷತೆ ಬಗ್ಗೆ ತಿಳಿಸುವ ಅಗತ್ಯವಿದೆ ಎಂದು ದಕ್ಷಿಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್.ಗೋವಿಂದಪ್ಪ ಹೇಳಿದರು.</p>.<p>ಕೆ.ಆರ್.ಪುರ ಸಮೀಪದ ಏಕತಾನಗರದ ಎಸ್.ಇ.ಎ ಶಾಲೆಯಲ್ಲಿ ಪ್ರಾದೇಶಿಕ ಸಾರಿಗೆ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ರಸ್ತೆ ಸುರಕ್ಷತೆ ಮಾಸಾಚರಣೆ –2025 ಉದ್ಘಾಟಿಸಿ ಮಾತನಾಡಿದರು.</p>.<p>ಶಾಲಾ ವಾಹನ ನಿರ್ವಹಣೆಯನ್ನು ಕಾಲಕಾಲಕ್ಕೆ ತಪ್ಪದೇ ನವೀಕರಿಸಿಕೊಂಡು ಮಕ್ಕಳ ಸುರಕ್ಷತೆಯನ್ನು ಕಾಪಾಡುವುದು ಎಲ್ಲಾ ಶಾಲಾ ಆಡಳಿತ ಮಂಡಳಿರವರ ಪ್ರಮುಖ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.</p>.<p>ಪ್ರಾದೇಶಿಕ ಸಾರಿಗೆ ಅಧಿಕಾರಿ ಉಮೇಶ್.ಪಿ ಮಾತನಾಡಿ, ರಸ್ತೆಯಲ್ಲಿ ಸಂಚರಿಸುವ ಪ್ರತಿಯೊಬ್ಬರು ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಬೇಕು. ಮಕ್ಕಳನ್ನು ದ್ವಿಚಕ್ರ ವಾಹನದಲ್ಲಿ ಕರೆದುಕೊಂಡು ಹೋಗುವಾಗ ಸುರಕ್ಷತೆ ಮುಖ್ಯ ಎಂದರು.</p>.<p>ಈ ಸಂದರ್ಭದಲ್ಲಿ ಆರ್.ಟಿ.ಒ ಸೂಪರಿಡೆಂಟ್ ದೊಡ್ಡಲಿಂಗಯ್ಯ, ನಿವೃತ್ತ ಡಿ.ಡಿ.ಪಿ.ಐ, ವೆಂಕಟರಾಮರೆಡ್ಡಿ, ಕ್ಷೇತ್ರ ಸಮನ್ವಯಾಧಿಕಾರಿಗಳಾದ ಪ್ರಿಯದರ್ಶಿನಿ ಬಿ.ಎನ್, ಉಮೇಶ್ ಕೆ.ಹೆಚ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>