ಈ ವೇಳೆ ಮಾತನಾಡಿದ ರಾಧಾಕೃಷ್ಣ ರಾಜು, ‘ಮಕ್ಕಳಿಗೆ ಅವರ ಮಾತೃಭಾಷೆಯಲ್ಲಿ ಬೋಧಿಸಿದರೆ ವಿಷಯ ಪರಿಣಾಮಕಾರಿಯಾಗಿ ತಲುಪಲಿದೆ. ಮಕ್ಕಳು ಕೂಡ ಬೇಗ ಗ್ರಹಿಸುತ್ತಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಸಹ ಶಾಲೆಗಳಲ್ಲಿ ಮಾತೃಭಾಷೆಯನ್ನು ಬೋಧನಾ ಮಾಧ್ಯಮವನ್ನಾಗಿ ಬಳಸಬೇಕೆಂದು ಹೇಳಿದ್ದಾರೆ. ಬೆಂಗಳೂರು, ಕೋಲಾರ ಸೇರಿ ರಾಜ್ಯದ ವಿವಿಧೆಡೆ ನೆಲೆಸಿರುವ ತೆಲುಗು ಭಾಷಿಕರು ಕನ್ನಡವನ್ನೂ ಪ್ರೀತಿಸಿ, ಬೇರೆ ಭಾಷಿಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಹರಿಯಾಣ ಮತ್ತು ಪಶ್ಚಿಮ ಬಂಗಾಳದಲ್ಲಿ ತೆಲುಗನ್ನು ದ್ವಿತೀಯ ಭಾಷೆಯಾಗಿ ಬೋಧಿಸಲಾಗುತ್ತಿದೆ. ಅದೇ ರೀತಿ, ಕರ್ನಾಟಕದಲ್ಲಿಯೂ ಬೋಧಿಸಲು ಕ್ರಮವಹಿಸಬೇಕು’ ಎಂದರು.