‘ಪಟ್ಟಿ ಸಿದ್ಧವಾಗಿದೆ. ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮ ಆಯೋಜಿಸಿ, ಶಿಕ್ಷಕರನ್ನು ಸನ್ಮಾನಿಸಬೇಕು ಎಂಬುದು ನಮ್ಮ ಅಪೇಕ್ಷೆ. ಆದರೆ, ಈ ಸಂದರ್ಭದಲ್ಲಿ ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮ ಮಾಡಲು ಸಾಧ್ಯವಾಗುವುದಿಲ್ಲ. ಈ ಕಾರಣದಿಂದ ಪಟ್ಟಿಯನ್ನು ಬಿಡುಗಡೆ ಮಾಡಿಲ್ಲ’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಕೆ.ಜಿ. ಜಗದೀಶ್ ‘ಪ್ರಜಾವಾಣಿ’ಗೆ ತಿಳಿಸಿದರು.